Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

- Advertisement -
- Advertisement -

ಅಮೆರಿಕಾದ ಮಿನ್ನಿಯಾಪೊಲೀಸ್‌‌ನಲ್ಲಿ ಪೊಲೀಸ್ ಅಧಿಕಾರಿಯಿಂದ ಹತ್ಯೆಗೀಡಾದ ಆಫ್ರಿಕನ್-ಅಮೆರಿಕನ್‌‌ ಜಾರ್ಜ್ ಫ್ಲಾಯ್ಡ್ ಪ್ರಕರಣದ ವಿಚಾರಣೆ ಪ್ರಾರಂಭವಾಗಿದೆ. ವೈರಲ್ ವಿಡಿಯೋವನ್ನು ಚಿತ್ರೀಕರಿಸಿದ ಹದಿಹರೆಯದ ಯುವತಿ, ಘಟನೆ ನಡೆಯುತ್ತಿದ್ದಾಗ ಅವರ ಜೀವ ಉಳಿಸಲು ಬೇಕಾಗಿ ತನ್ನಿಂದ ಏನೂ ಮಾಡಲಾಗಿಲ್ಲ ಎಂದು ಮಂಗಳವಾರ ಪಶ್ಚಾತ್ತಾಪ ಪಟ್ಟಿದ್ದಾರೆ.

ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ, ಹತ್ಯೆಯ ಪ್ರಮುಖ ಆರೋಪಿ ಡೆರೆಕ್ ಚೌವಿನ್‌ನ ವಿಚಾರಣೆ ನಡೆಯುತ್ತಿರುವಾಗ ಘಟನೆಯನ್ನು ಚಿತ್ರೀಕರಿಸಿದ 18 ವರ್ಷದ ಯುವತಿ ಡಾರ್ನೇಲ್ಲಾ ಫ್ರೇಜಿಯರ್‌ ಭಾವನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

44 ವರ್ಷದ ಚೌವಿನ್‌ ಮೇಲೆ ಜಾರ್ಜ್‌ ಫ್ಲಾಯ್ಡ್‌ ಅವರನ್ನು ಮೇ 25, 2020 ರಂದು ಹತ್ಯೆ ಮಾಡಿದ ಆರೋಪವಿದೆ. ಇದನ್ನು ಫ್ರೇಜಿಯರ್ ವೀಡಿಯೊದಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಭಾರಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಜಗತ್ತಿನಾದ್ಯಂತ ವರ್ಣಭೇದ ನೀತಿ ವಿರೋಧಿ ಪ್ರತಿಭಟನೆಯಾದ ‘ಬ್ಲಾಕ್ ಲೈವ್ಸ್‌ ಮ್ಯಾಟರ್ಸ್‌ ಚಳವಳಿಗೆ ಕಾರಣವಾಯಿತು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ವೈರಲ್ ವಿಡಿಯೋದಲ್ಲಿ ಆಫ್ರಿಕನ್-ಅಮೆರಿಕನ್ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಪೊಲೀಸ್ ಅಧಿಕಾರಿ ಚೌವಿನ್ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ಮಾಡಿದ್ದರಾದರೂ ಪೊಲೀಸ್ ಅಧಿಕಾರಿ ಅದನ್ನು ಮನ್ನಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ವಿಚಾರಣೆ ಸಮಯದಲ್ಲಿ ಕಣ್ಣೀರಿಡುತ್ತಾ ಹೇಳಿಕೆ ನೀಡಿದ ಫ್ರೇಜಿಯರ್‌, “ನನಗೆ ಕಪ್ಪುವರ್ಣೀಯ ತಂದೆ, ಸಹೋದರರಿದ್ದಾರೆ. ಜಾರ್ಜ್ ಫ್ಲಾಯ್ಡ್ ಅವರ ಜೀವ ಉಳಿಸಲು ಏನೂ ಮಾಡದಿದ್ದಕ್ಕಾಗಿ ಹಲವಾರು ರಾತ್ರಿ ಕಣ್ಣೀರಿಟ್ಟಿದ್ದೇನೆ. ಅವರನ್ನು ಉಳಿಸಲು ದೈಹಿಕವಾಗಿ ಪ್ರತಿಕ್ರಿಯೆ ನೀಡದ್ದಕ್ಕಾಗಿ ನಾನು ಅವರಲ್ಲಿ ಕ್ಷಮೆಯಾಚಿಸುಯತ್ತಿದ್ದೇನೆ ಮತ್ತು ಕ್ಷಮೆಯಾಚಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಾರ್ಜ್ ಫ್ಲಾಯ್ಡ್ ಭಯಭೀತರಾಗಿ, ಪ್ರಾಣ ಭಿಕ್ಷೆ ಬೇಡುತ್ತಿದ್ದರು. ಅವರು ನೋವಿನಿಂದ ಬಳಲುತ್ತಿದ್ದರು. ಚೌವಿನ್ ಮಾಡುತ್ತಿರುವುದು ತಪ್ಪು ಎಂದು ನನಗೆ ಹಾಗೂ ಅಲ್ಲಿದ್ದ ಎಲ್ಲರಿಗೂ ತಿಳಿದಿತ್ತು. ಅಂತಿಮವಾಗಿ ಕೊಲೆಗೆ ಸಾಕ್ಷಿಯಾಗಿದೆ” ಎಂದು ಫ್ರೇಜಿಯರ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಘಟನೆ ನಡೆದ ಕೂಡಲೆ ನಾನು ತುರ್ತು 911 ಕರೆ ಮಾಡಿದ್ದೇನೆ ಎಂದು ಮತ್ತೊಬ್ಬ ಸಾಕ್ಷಿ ಹೇಳಿದ್ದಾರೆ.

ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಪ್ರಧಾನ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ನಿನ್ನೆ ವರದಿ ಮಾಡಿತ್ತು.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದ್ದು, ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.


 

 

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...