Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

- Advertisement -
- Advertisement -

ಅಮೆರಿಕಾದ ಮಿನ್ನಿಯಾಪೊಲೀಸ್‌‌ನಲ್ಲಿ ಪೊಲೀಸ್ ಅಧಿಕಾರಿಯಿಂದ ಹತ್ಯೆಗೀಡಾದ ಆಫ್ರಿಕನ್-ಅಮೆರಿಕನ್‌‌ ಜಾರ್ಜ್ ಫ್ಲಾಯ್ಡ್ ಪ್ರಕರಣದ ವಿಚಾರಣೆ ಪ್ರಾರಂಭವಾಗಿದೆ. ವೈರಲ್ ವಿಡಿಯೋವನ್ನು ಚಿತ್ರೀಕರಿಸಿದ ಹದಿಹರೆಯದ ಯುವತಿ, ಘಟನೆ ನಡೆಯುತ್ತಿದ್ದಾಗ ಅವರ ಜೀವ ಉಳಿಸಲು ಬೇಕಾಗಿ ತನ್ನಿಂದ ಏನೂ ಮಾಡಲಾಗಿಲ್ಲ ಎಂದು ಮಂಗಳವಾರ ಪಶ್ಚಾತ್ತಾಪ ಪಟ್ಟಿದ್ದಾರೆ.

ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ, ಹತ್ಯೆಯ ಪ್ರಮುಖ ಆರೋಪಿ ಡೆರೆಕ್ ಚೌವಿನ್‌ನ ವಿಚಾರಣೆ ನಡೆಯುತ್ತಿರುವಾಗ ಘಟನೆಯನ್ನು ಚಿತ್ರೀಕರಿಸಿದ 18 ವರ್ಷದ ಯುವತಿ ಡಾರ್ನೇಲ್ಲಾ ಫ್ರೇಜಿಯರ್‌ ಭಾವನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

44 ವರ್ಷದ ಚೌವಿನ್‌ ಮೇಲೆ ಜಾರ್ಜ್‌ ಫ್ಲಾಯ್ಡ್‌ ಅವರನ್ನು ಮೇ 25, 2020 ರಂದು ಹತ್ಯೆ ಮಾಡಿದ ಆರೋಪವಿದೆ. ಇದನ್ನು ಫ್ರೇಜಿಯರ್ ವೀಡಿಯೊದಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಭಾರಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಜಗತ್ತಿನಾದ್ಯಂತ ವರ್ಣಭೇದ ನೀತಿ ವಿರೋಧಿ ಪ್ರತಿಭಟನೆಯಾದ ‘ಬ್ಲಾಕ್ ಲೈವ್ಸ್‌ ಮ್ಯಾಟರ್ಸ್‌ ಚಳವಳಿಗೆ ಕಾರಣವಾಯಿತು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ವೈರಲ್ ವಿಡಿಯೋದಲ್ಲಿ ಆಫ್ರಿಕನ್-ಅಮೆರಿಕನ್ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಪೊಲೀಸ್ ಅಧಿಕಾರಿ ಚೌವಿನ್ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ಮಾಡಿದ್ದರಾದರೂ ಪೊಲೀಸ್ ಅಧಿಕಾರಿ ಅದನ್ನು ಮನ್ನಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ವಿಚಾರಣೆ ಸಮಯದಲ್ಲಿ ಕಣ್ಣೀರಿಡುತ್ತಾ ಹೇಳಿಕೆ ನೀಡಿದ ಫ್ರೇಜಿಯರ್‌, “ನನಗೆ ಕಪ್ಪುವರ್ಣೀಯ ತಂದೆ, ಸಹೋದರರಿದ್ದಾರೆ. ಜಾರ್ಜ್ ಫ್ಲಾಯ್ಡ್ ಅವರ ಜೀವ ಉಳಿಸಲು ಏನೂ ಮಾಡದಿದ್ದಕ್ಕಾಗಿ ಹಲವಾರು ರಾತ್ರಿ ಕಣ್ಣೀರಿಟ್ಟಿದ್ದೇನೆ. ಅವರನ್ನು ಉಳಿಸಲು ದೈಹಿಕವಾಗಿ ಪ್ರತಿಕ್ರಿಯೆ ನೀಡದ್ದಕ್ಕಾಗಿ ನಾನು ಅವರಲ್ಲಿ ಕ್ಷಮೆಯಾಚಿಸುಯತ್ತಿದ್ದೇನೆ ಮತ್ತು ಕ್ಷಮೆಯಾಚಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಾರ್ಜ್ ಫ್ಲಾಯ್ಡ್ ಭಯಭೀತರಾಗಿ, ಪ್ರಾಣ ಭಿಕ್ಷೆ ಬೇಡುತ್ತಿದ್ದರು. ಅವರು ನೋವಿನಿಂದ ಬಳಲುತ್ತಿದ್ದರು. ಚೌವಿನ್ ಮಾಡುತ್ತಿರುವುದು ತಪ್ಪು ಎಂದು ನನಗೆ ಹಾಗೂ ಅಲ್ಲಿದ್ದ ಎಲ್ಲರಿಗೂ ತಿಳಿದಿತ್ತು. ಅಂತಿಮವಾಗಿ ಕೊಲೆಗೆ ಸಾಕ್ಷಿಯಾಗಿದೆ” ಎಂದು ಫ್ರೇಜಿಯರ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಘಟನೆ ನಡೆದ ಕೂಡಲೆ ನಾನು ತುರ್ತು 911 ಕರೆ ಮಾಡಿದ್ದೇನೆ ಎಂದು ಮತ್ತೊಬ್ಬ ಸಾಕ್ಷಿ ಹೇಳಿದ್ದಾರೆ.

ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಪ್ರಧಾನ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ನಿನ್ನೆ ವರದಿ ಮಾಡಿತ್ತು.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದ್ದು, ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.


 

 

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...