Homeಕರ್ನಾಟಕಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

’ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು’

- Advertisement -
- Advertisement -

ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕಾರಣಕ್ಕೆ ಕೆಎಸ್‌ಟಿಡಿಸಿ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್‌ಪೋರ್ಟ್ ಆವರಣದಲ್ಲಿ ಮಂಗಳವಾರ ಕಾರಿನೊಳಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ಪ್ರಾಧಿಕಾರದ(KSTDC) ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಾಗಿದ್ದರು ಎನ್ನಲಾಗಿದೆ. ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್

’ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್‌ ಚಾಲಕ ಪ್ರತಾಪ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ” ಎಂದಿದ್ದಾರೆ.

’ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂಪಾಯಿ ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ’ ಎಂದು ಖಾಸಗಿ ಮತ್ತು ಕೆಎಸ್‌ಟಿಡಿಸಿ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

’ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು 9 ರೂಪಾಯಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಇತ್ತ, ಚಾಲಕ ಪ್ರತಾಪ್ ಸಾವಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆಗಳಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ಸೇವೆಯನ್ನು ಬಳಸಲು ಅಥವಾ ತಮ್ಮದೇ ಆದ ಪ್ರಯಾಣದ ವ್ಯವಸ್ಥೆಗಳನ್ನು ಮಾಡಲು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...