Homeಕರ್ನಾಟಕಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

’ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು’

- Advertisement -
- Advertisement -

ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕಾರಣಕ್ಕೆ ಕೆಎಸ್‌ಟಿಡಿಸಿ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್‌ಪೋರ್ಟ್ ಆವರಣದಲ್ಲಿ ಮಂಗಳವಾರ ಕಾರಿನೊಳಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ಪ್ರಾಧಿಕಾರದ(KSTDC) ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಾಗಿದ್ದರು ಎನ್ನಲಾಗಿದೆ. ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್

’ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್‌ ಚಾಲಕ ಪ್ರತಾಪ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ” ಎಂದಿದ್ದಾರೆ.

’ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂಪಾಯಿ ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ’ ಎಂದು ಖಾಸಗಿ ಮತ್ತು ಕೆಎಸ್‌ಟಿಡಿಸಿ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

’ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು 9 ರೂಪಾಯಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಇತ್ತ, ಚಾಲಕ ಪ್ರತಾಪ್ ಸಾವಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆಗಳಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ಸೇವೆಯನ್ನು ಬಳಸಲು ಅಥವಾ ತಮ್ಮದೇ ಆದ ಪ್ರಯಾಣದ ವ್ಯವಸ್ಥೆಗಳನ್ನು ಮಾಡಲು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...