Homeಕರ್ನಾಟಕಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

’ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು’

- Advertisement -
- Advertisement -

ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕಾರಣಕ್ಕೆ ಕೆಎಸ್‌ಟಿಡಿಸಿ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್‌ಪೋರ್ಟ್ ಆವರಣದಲ್ಲಿ ಮಂಗಳವಾರ ಕಾರಿನೊಳಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ಪ್ರಾಧಿಕಾರದ(KSTDC) ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಾಗಿದ್ದರು ಎನ್ನಲಾಗಿದೆ. ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್

’ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್‌ ಚಾಲಕ ಪ್ರತಾಪ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ” ಎಂದಿದ್ದಾರೆ.

’ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂಪಾಯಿ ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ’ ಎಂದು ಖಾಸಗಿ ಮತ್ತು ಕೆಎಸ್‌ಟಿಡಿಸಿ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

’ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು 9 ರೂಪಾಯಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಇತ್ತ, ಚಾಲಕ ಪ್ರತಾಪ್ ಸಾವಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆಗಳಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ಸೇವೆಯನ್ನು ಬಳಸಲು ಅಥವಾ ತಮ್ಮದೇ ಆದ ಪ್ರಯಾಣದ ವ್ಯವಸ್ಥೆಗಳನ್ನು ಮಾಡಲು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...