Homeಕರ್ನಾಟಕಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

’ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು’

- Advertisement -
- Advertisement -

ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕಾರಣಕ್ಕೆ ಕೆಎಸ್‌ಟಿಡಿಸಿ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್‌ಪೋರ್ಟ್ ಆವರಣದಲ್ಲಿ ಮಂಗಳವಾರ ಕಾರಿನೊಳಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ಪ್ರಾಧಿಕಾರದ(KSTDC) ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಾಗಿದ್ದರು ಎನ್ನಲಾಗಿದೆ. ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್

’ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್‌ ಚಾಲಕ ಪ್ರತಾಪ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ” ಎಂದಿದ್ದಾರೆ.

’ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂಪಾಯಿ ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ’ ಎಂದು ಖಾಸಗಿ ಮತ್ತು ಕೆಎಸ್‌ಟಿಡಿಸಿ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

’ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು 9 ರೂಪಾಯಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಇತ್ತ, ಚಾಲಕ ಪ್ರತಾಪ್ ಸಾವಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆಗಳಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ಸೇವೆಯನ್ನು ಬಳಸಲು ಅಥವಾ ತಮ್ಮದೇ ಆದ ಪ್ರಯಾಣದ ವ್ಯವಸ್ಥೆಗಳನ್ನು ಮಾಡಲು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...