Homeಅಂತರಾಷ್ಟ್ರೀಯಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

ಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ಅಮೆರಿಕನ್ನರು ಮತ್ತು ಪೆಸಿಫಿಕ್ ದ್ವೀಪವಾಸಿಗಳ ವಿರುದ್ಧದ ಹಿಂಸಾಚಾರ ಮತ್ತು ತಾರತಮ್ಯವನ್ನು ತಡೆಗಟ್ಟಲು ಹೆಚ್ಚುವರಿ ಧನಸಹಾಯ ಮತ್ತು ಕ್ರಾಸ್-ಏಜೆನ್ಸಿ ಉಪಕ್ರಮ ಸೇರಿದಂತೆ ಹೊಸ ಕ್ರಮಗಳನ್ನು ಶ್ವೇತಭವನ ಮಂಗಳವಾರ ಪ್ರಕಟಿಸಿದೆ ಎಂದು ಐಎಎನ್ಎಸ್ ವರದಿಯೊಂದು ತಿಳಿಸಿದೆ.

“ಜನಾಂಗೀಯ ನ್ಯಾಯಕ್ಕಾಗಿ ಸರ್ಕಾರದ ಮೂಲಕ ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳಿಗೆ ಸಮತೆಯನ್ನು ಖಚಿತಪಡಿಸಲು ಬಿಡೆನ್ ಆಡಳಿತ ನಿರ್ಧಿರಿಸಿದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಹೇಳಿಕೆ

ಅಧ್ಯಕ್ಷ ಜೋ ಬಿಡನ್‌, ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಸರ್ಕಾರದ ನೀತಿಗಳ ಸಮನ್ವಯದಲ್ಲಿ ಉಪಕ್ರಮವನ್ನು ಸಾಧಿಸಲು ಶಾಶ್ವತ ನಿರ್ದೇಶಕರನ್ನು ನೇಮಿಸಲಿದ್ದಾರೆ ಎಂದು ವೈಟ್‌ಹೌಸ್ ಪ್ರಕಟಣೆ ಹೇಳಿದೆ.

ಎಫ್‌ಬಿಐ ಹೊಸ ಸಂವಾದಾತ್ಮಕ ವೆಬ್‌ಸೈಟ್‌ ಅನ್ನು ಪ್ರಕಟಿಸಿದ್ದು, ಅದರಲ್ಲಿ ಏಷ್ಯನ್ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ವಿರುದ್ಧದ ಅಪರಾಧಗಳನ್ನು ದಾಖಲಿಸುತ್ತದೆ ಎಂದು ಹೇಳಿದೆ. ಅಲ್ಲದೆ ಏಷ್ಯನ್ ವಿರೋಧಿ ಪಕ್ಷಪಾತವನ್ನು ಗುರುತಿಸುವ ಮತ್ತು ವರದಿ ಮಾಡುವ ಬಗ್ಗೆ ಏಜೆಂಟರಿಗೆ ಶಿಕ್ಷಣ ನೀಡಲು ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಪ್ರಾರಂಭಿಸುತ್ತದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯದ ಸಂತ್ರಸ್ತರಾದ ಏಷ್ಯನ್‌ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ಜನರಿಗೆ ಸಹಾಯ ಮಾಡಲು ಆರೋಗ್ಯ ಇಲಾಖೆಯು ಅಮೆರಿಕನ್ ಪಾರುಗಾಣಿಕಾ ಯೋಜನೆಯಿಂದ ಸುಮಾರು 50 ಮಿಲಿಯನ್ ಡಾಲರ್‌ ಒದಗಿಸುತ್ತಿದೆ.

ಜನವರಿಯಲ್ಲಿ ಸ್ಥಾಪಿಸಲಾದ ಕೋವಿಡ್ -19 ಹೆಲ್ತ್ ಈಕ್ವಿಟಿ ಟಾಸ್ಕ್ ಫೋರ್ಸ್, ಸ್ಟ್ರಕ್ಚರಲ್ ಡ್ರೈವರ್ಸ್ ಆಫ್ ಹೆಲ್ತ್ ಇನೀಕ್ವಿಟಿ ಆಂಡ್‌ ಸೆನೋಫೋಬಿಯಾ ಕುರಿತು ಉಪಸಮಿತಿಯನ್ನು ಸ್ಥಾಪಿಸಿದೆ ಎಂದು ಶ್ವೇತಭವನ ತಿಳಿಸಿದೆ. ಈ ಉಪಸಮಿತಿಯು ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ವಿರೋಧಿ ಪಕ್ಷಪಾತದ ಉಲ್ಬಣವನ್ನು ಎದುರಿಸಲು ನಿರ್ದಿಷ್ಟವಾಗಿ ಗಮನ ಹರಿಸಲಿದೆ.

ಸಂಪನ್ಮೂಲಗಳನ್ನು ವಿಸ್ತರಿಸಲು ಮತ್ತು ಏಷ್ಯನ್-ಅಮೇರಿಕನ್ ಇತಿಹಾಸದ ಬಗ್ಗೆ ಮಾಹಿತಿಯನ್ನು ಒದಗಿಸಲು ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಹ್ಯುಮಾನಿಟೀಸ್ ಈಗಾಗಲೆ ವರ್ಚುವಲ್ ಲೈಬ್ರರಿಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...