HomeಮುಖಪುಟFIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

FIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಕಠಿಣ ವಿಚಾರಣೆಯನ್ನು ಎದುರಿಸಬೇಕಾಯಿತು.

“ಸಚಿವರ ವಿರುದ್ಧದ ಆರೋಪದ ಮೇಲೆ ಏಕೆ ಎಫ್ಐಆರ್ ದಾಖಲಿಸಲಿಲ್ಲ” ಎಂದು ಪರಮ್ ಬೀರ್ ಸಿಂಗ್ ಅವರನ್ನು ಪದೇ ಪದೇ ಪ್ರಶ್ನೆ ಕೇಳಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನೀವು ಪೊಲೀಸ್ ಆಯುಕ್ತರಾಗಿದ್ದೀರಿ, ಕಾನೂನಿಗಿಂತ ನೀವು ದೊಡ್ಡವರ? ಪೊಲೀಸ್ ಅಧಿಕಾರಿಗಳು, ಮಂತ್ರಿಗಳು ಮತ್ತು ರಾಜಕಾರಣಿಗಳು ಕಾನೂನಿಗಿಂತ ಮೇಲಿರುವವರಾ? ನೀವು ಅಷ್ಟು ಎತ್ತರ ಎಂದು ಭಾವಿಸಬೇಡಿ; ಕಾನೂನು ನಿಮಗಿಂತ ದೊಡ್ಡದು” ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ದತ್ತಾ ವಿಚಾರಣೆಯ ವೇಳೆ ಹೇಳಿದ್ದಾರೆ.

“ಇವು ನಗರದಲ್ಲಿ ಪೊಲೀಸ್ ಪಡೆಯಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ, 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ವ್ಯಕ್ತಿಯಿಂದ ಬರುವ ಕಠಿಣ ಆರೋಪಗಳು” ಎಂದು ಪರಮ್ ಬೀರ್ ಸಿಂಗ್ ಹೈಕೋರ್ಟ್‌ಗೆ ತಿಳಿಸಿದರು.

ಇದಕ್ಕೆ ನ್ಯಾಯಾಲಯ, “ತನಿಖೆ ನಡೆಸಲು ಎಫ್‌ಐಆರ್ ಇರಬೇಕು. ನೀವು ಎಫ್‌ಐಆರ್ ದಾಖಲಿಸುವುದನ್ನು ಯಾರು ತಡೆದಿದ್ದರು? ಎಫ್‌ಐಆರ್ ಇಲ್ಲದೆ ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿತು.

“ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ನೀವು ನಿರ್ದೇಶನಗಳನ್ನು ಕೇಳುತ್ತಿದ್ದೀರಿ. ಅದನ್ನು ಸಿಬಿಐಗೆ ಹಸ್ತಾಂತರಿಸಲು ಎಫ್ಐಆರ್ ಮತ್ತು ತನಿಖೆ ಎಲ್ಲಿದೆ?” ಎಂದು ಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ:ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

“ನೀವು ಪೊಲೀಸ್ ಅಧಿಕಾರಿ. ಅಪರಾಧ ಎಸಗಲಾಗಿದೆ ಎಂಬುದು ನಿಮಗೆ ತಿಳಿದುಬಂದಿದ್ದರೆ ನೀವು ಎಫ್‌ಐಆರ್ ಹಾಕಬಹುದಿತ್ತು. ನೀವು ಅದನ್ನು ಏಕೆ ಮಾಡಲಿಲ್ಲ? ಅಪರಾಧ ಎಸಗಲಾಗಿದೆ ಎಂದು ನಿಮಗೆ ತಿಳಿದಾಗ ನೀವು ಎಫ್ಐಆರ್ ದಾಖಲಿಸದಿದ್ದರೆ ನಿಮ್ಮ ಕರ್ತವ್ಯದಲ್ಲಿ ನೀವು ವಿಫಲರಾಗಿದ್ದೀರಿ ಎಂದರ್ಥ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಂಬಯಿ ನಗರದ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್‌ ಸಿಂಗ್‌ ಅವರನ್ನು ಮಹಾರಾಷ್ಟ್ರ ಹೋಮ್ ಗಾರ್ಡ್ ನ ಡಿಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಏಕಾಏಕಿ ಎತ್ತಂಗಡಿ ಮಾಡಿರುವುದರ ಹಿಂದೆ ಭಾರೀ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಸಚಿನ್‌ ವಾಜೆ ಪ್ರಕರಣದ ಬಗ್ಗೆ ತಿಳಿದಿರುವ ಹಿನ್ನೆಲೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ಸಿಂಗ್, ಕೋರ್ಟ್‌ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಭಾರೀ ಭ್ರಷ್ಟಚಾರ ಆರೋಪ ಮಾಡಿರುವ ಪರಮ್‌ ಬೀರ್‌ ಸಿಂಗ್‌ ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಫೆ.22 ರಂದು ನಡೆದ ಎಂಪಿ ಮೋಹನ್ ದೆಲ್ಕರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್ ದಾಖಲಿಸುವಂತೆ, ಗೃಹ ಸಚಿವ ಅನಿಲ್ ದೇಶ್ ಮುಖ್ ಆದೇಶಿಸಿದ್ದರು. ಈ ರೀತಿ ಎಫ್ಐಆರ್ ದಾಖಲಿಸುವುದಕ್ಕೆ ಕಾನೂನು ತಜ್ಞರು ವಿರೋಧ ವ್ಯಕ್ತಪಡಿಸಿದ್ದರೂ ಸಹ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಫ್ಐಆರ್ ದಾಖಲಿಸಲು ಗೃಹ ಸಚಿವರು ಸೂಚಿಸಿದ್ದರು ಎಂದು ಪರಮ್ ಬೀರ್ ಸಿಂಗ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಮುಂಬಯಿ ಆಯುಕ್ತನಾಗಿದ್ದ ವೇಳೆ, ಪ್ರತಿ ತಿಂಗಳೂ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಗೃಹ ಸಚಿವ ಅನಿಲ್ ದೇಶ್ ಮುಖ್ ತಮಗೆ ಟಾರ್ಗೆಟ್ ನೀಡುತ್ತಿದ್ದರು ಎಂದು ಪತ್ರದಲ್ಲಿ ಆರೋಪಿಸಿದ್ದಾರೆ, ಈ ಎರಡು ವಿಚಾರಗಳ ಸಂಬಂಧ ಕೋರ್ಟ್‌ನಲ್ಲಿ ಸಿಂಗ್‌ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಮತ್ತು ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಕೆ ಎಂದು ಬಾಂಬೆ ಹೈಕೋರ್ಟ್ ಹೇಳಿದ್ದು, ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.


ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ: ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...