HomeಮುಖಪುಟFIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

FIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಕಠಿಣ ವಿಚಾರಣೆಯನ್ನು ಎದುರಿಸಬೇಕಾಯಿತು.

“ಸಚಿವರ ವಿರುದ್ಧದ ಆರೋಪದ ಮೇಲೆ ಏಕೆ ಎಫ್ಐಆರ್ ದಾಖಲಿಸಲಿಲ್ಲ” ಎಂದು ಪರಮ್ ಬೀರ್ ಸಿಂಗ್ ಅವರನ್ನು ಪದೇ ಪದೇ ಪ್ರಶ್ನೆ ಕೇಳಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನೀವು ಪೊಲೀಸ್ ಆಯುಕ್ತರಾಗಿದ್ದೀರಿ, ಕಾನೂನಿಗಿಂತ ನೀವು ದೊಡ್ಡವರ? ಪೊಲೀಸ್ ಅಧಿಕಾರಿಗಳು, ಮಂತ್ರಿಗಳು ಮತ್ತು ರಾಜಕಾರಣಿಗಳು ಕಾನೂನಿಗಿಂತ ಮೇಲಿರುವವರಾ? ನೀವು ಅಷ್ಟು ಎತ್ತರ ಎಂದು ಭಾವಿಸಬೇಡಿ; ಕಾನೂನು ನಿಮಗಿಂತ ದೊಡ್ಡದು” ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ದತ್ತಾ ವಿಚಾರಣೆಯ ವೇಳೆ ಹೇಳಿದ್ದಾರೆ.

“ಇವು ನಗರದಲ್ಲಿ ಪೊಲೀಸ್ ಪಡೆಯಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ, 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ವ್ಯಕ್ತಿಯಿಂದ ಬರುವ ಕಠಿಣ ಆರೋಪಗಳು” ಎಂದು ಪರಮ್ ಬೀರ್ ಸಿಂಗ್ ಹೈಕೋರ್ಟ್‌ಗೆ ತಿಳಿಸಿದರು.

ಇದಕ್ಕೆ ನ್ಯಾಯಾಲಯ, “ತನಿಖೆ ನಡೆಸಲು ಎಫ್‌ಐಆರ್ ಇರಬೇಕು. ನೀವು ಎಫ್‌ಐಆರ್ ದಾಖಲಿಸುವುದನ್ನು ಯಾರು ತಡೆದಿದ್ದರು? ಎಫ್‌ಐಆರ್ ಇಲ್ಲದೆ ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿತು.

“ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ನೀವು ನಿರ್ದೇಶನಗಳನ್ನು ಕೇಳುತ್ತಿದ್ದೀರಿ. ಅದನ್ನು ಸಿಬಿಐಗೆ ಹಸ್ತಾಂತರಿಸಲು ಎಫ್ಐಆರ್ ಮತ್ತು ತನಿಖೆ ಎಲ್ಲಿದೆ?” ಎಂದು ಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ:ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

“ನೀವು ಪೊಲೀಸ್ ಅಧಿಕಾರಿ. ಅಪರಾಧ ಎಸಗಲಾಗಿದೆ ಎಂಬುದು ನಿಮಗೆ ತಿಳಿದುಬಂದಿದ್ದರೆ ನೀವು ಎಫ್‌ಐಆರ್ ಹಾಕಬಹುದಿತ್ತು. ನೀವು ಅದನ್ನು ಏಕೆ ಮಾಡಲಿಲ್ಲ? ಅಪರಾಧ ಎಸಗಲಾಗಿದೆ ಎಂದು ನಿಮಗೆ ತಿಳಿದಾಗ ನೀವು ಎಫ್ಐಆರ್ ದಾಖಲಿಸದಿದ್ದರೆ ನಿಮ್ಮ ಕರ್ತವ್ಯದಲ್ಲಿ ನೀವು ವಿಫಲರಾಗಿದ್ದೀರಿ ಎಂದರ್ಥ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಂಬಯಿ ನಗರದ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್‌ ಸಿಂಗ್‌ ಅವರನ್ನು ಮಹಾರಾಷ್ಟ್ರ ಹೋಮ್ ಗಾರ್ಡ್ ನ ಡಿಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಏಕಾಏಕಿ ಎತ್ತಂಗಡಿ ಮಾಡಿರುವುದರ ಹಿಂದೆ ಭಾರೀ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಸಚಿನ್‌ ವಾಜೆ ಪ್ರಕರಣದ ಬಗ್ಗೆ ತಿಳಿದಿರುವ ಹಿನ್ನೆಲೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ಸಿಂಗ್, ಕೋರ್ಟ್‌ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಭಾರೀ ಭ್ರಷ್ಟಚಾರ ಆರೋಪ ಮಾಡಿರುವ ಪರಮ್‌ ಬೀರ್‌ ಸಿಂಗ್‌ ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಫೆ.22 ರಂದು ನಡೆದ ಎಂಪಿ ಮೋಹನ್ ದೆಲ್ಕರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್ ದಾಖಲಿಸುವಂತೆ, ಗೃಹ ಸಚಿವ ಅನಿಲ್ ದೇಶ್ ಮುಖ್ ಆದೇಶಿಸಿದ್ದರು. ಈ ರೀತಿ ಎಫ್ಐಆರ್ ದಾಖಲಿಸುವುದಕ್ಕೆ ಕಾನೂನು ತಜ್ಞರು ವಿರೋಧ ವ್ಯಕ್ತಪಡಿಸಿದ್ದರೂ ಸಹ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಫ್ಐಆರ್ ದಾಖಲಿಸಲು ಗೃಹ ಸಚಿವರು ಸೂಚಿಸಿದ್ದರು ಎಂದು ಪರಮ್ ಬೀರ್ ಸಿಂಗ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಮುಂಬಯಿ ಆಯುಕ್ತನಾಗಿದ್ದ ವೇಳೆ, ಪ್ರತಿ ತಿಂಗಳೂ 100 ಕೋಟಿ ರೂಪಾಯಿ ಸಂಗ್ರಹಿಸುವಂತೆ ಗೃಹ ಸಚಿವ ಅನಿಲ್ ದೇಶ್ ಮುಖ್ ತಮಗೆ ಟಾರ್ಗೆಟ್ ನೀಡುತ್ತಿದ್ದರು ಎಂದು ಪತ್ರದಲ್ಲಿ ಆರೋಪಿಸಿದ್ದಾರೆ, ಈ ಎರಡು ವಿಚಾರಗಳ ಸಂಬಂಧ ಕೋರ್ಟ್‌ನಲ್ಲಿ ಸಿಂಗ್‌ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಮತ್ತು ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಕೆ ಎಂದು ಬಾಂಬೆ ಹೈಕೋರ್ಟ್ ಹೇಳಿದ್ದು, ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.


ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ: ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...