Homeಮುಖಪುಟಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

- Advertisement -
- Advertisement -

2004 ರ ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಪೊಲೀಸ್ ಅಧಿಕಾರಿಗಳಾದ ಜಿ.ಎಲ್. ಸಿಂಘಾಲ್, ತರುಣ್ ಬರೋಟ್ ಮತ್ತು ಅನಾಜು ಚೌಧರಿ ಅವರನ್ನು ಬಿಡುಗಡೆ ಮಾಡಿದೆ.

ವಿಶೇಷ ಸಿಬಿಐ ನ್ಯಾಯಾಧೀಶ ವಿ.ಆರ್. ರಾವಲ್ ಅವರು ಸಿಂಘಾಲ್, ಬರೋಟ್ (ಈಗ ನಿವೃತ್ತರಾಗಿದ್ದಾರೆ) ಮತ್ತು ಚೌಧರಿ ಅವರು ಸಲ್ಲಿಸಿದ್ದ ಬಿಡುಗಡೆ ಅರ್ಜಿಗಳಿಗೆ ಅನುಮತಿ ನೀಡಿದರು.

ಮೂವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ನಿರಾಕರಿಸಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಮಾರ್ಚ್ 20 ರಂದು ನ್ಯಾಯಾಲಯಕ್ಕೆ ತಿಳಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ನ್ಯಾಯಾಲಯವು ಅಕ್ಟೋಬರ್ 2020 ರ ತನ್ನ ಆದೇಶದಲ್ಲಿ, “ಮೂವರು ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ” ಎಂದು ಹೇಳಿತ್ತು.

ಮುಂಬೈ ಬಳಿಯ ಮುಂಬ್ರಾ ಮೂಲದ ಇಶ್ರತ್ ಜಹಾನ್ ಎಂಬ 19 ವರ್ಷದ ಯುವತಿಯನ್ನು 2004 ರ ಜೂನ್ 15 ರಂದು ಅಹಮದಾಬಾದ್ ಬಳಿ ನಡೆದ ‘ಎನ್‌ಕೌಂಟರ್’ನಲ್ಲಿ ಗುಜರಾತ್ ಪೊಲೀಸರು ಜಾವೇದ್ ಶೇಖ್ ಅಲಿಯಾಸ್ ಪ್ರಣೇಶ್ ಪಿಳ್ಳೈ, ಅಮ್ಜಾದಾಲಿ ಅಕ್ಬರಲಿ ರಾಣಾ ಮತ್ತು ಜೀಶನ್ ಜೋಹರ್ ಅವರೊಂದಿಗೆ ಹತ್ಯೆ ಮಾಡಿದ್ದರು.

“ಈ ನಾಲ್ವರು ಭಯೋತ್ಪಾದಕರಾಗಿದ್ದು, ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಯೋಜಿಸುತ್ತಿದ್ದರು” ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಹೈಕೋರ್ಟ್‌ನಿಂದ ನೇಮಿಸಲ್ಪಟ್ಟ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ತೀರ್ಮಾನಿಸಿತ್ತು. ಆದ್ದರಿಂದ ಸಿಬಿಐ ವಿವಿಧ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...