Homeಮುಖಪುಟಬಿಜೆಪಿಯೇತರ ವಿರೋಧ ಪಕ್ಷಗಳಿಗೆ ಪತ್ರ ಬರೆದ ಬಂಗಾಳ ಮುಖ್ಯಮಂತ್ರಿ ಮಮತಾ ಹೇಳಿದ್ದೇನು?

ಬಿಜೆಪಿಯೇತರ ವಿರೋಧ ಪಕ್ಷಗಳಿಗೆ ಪತ್ರ ಬರೆದ ಬಂಗಾಳ ಮುಖ್ಯಮಂತ್ರಿ ಮಮತಾ ಹೇಳಿದ್ದೇನು?

- Advertisement -
- Advertisement -

ಪಂಚರಾಜ್ಯ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮಾರ್ಚ್ 27 ರಂದು ಮುಗಿದಿದೆ. ಮೊದಲ ಹಂತದಲ್ಲಿ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಕ್ಷೇತ್ರದಲ್ಲಿ ಚುನಾವಣೆ ನಡೆದಿದೆ. ಈ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹತ್ತು ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಪತ್ರ ಬರೆದು ಚುನಾವಣೆ ನಂತರ ಬಿಜೆಪಿ ತೆಗೆದುಕೊಳ್ಳುವ ಕಾರ್ಯತಂತ್ರದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ ಎಂದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಬರೆದಿರುವ ಪತ್ರದಲ್ಲಿ “ಬಿಜೆಪಿಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಯ ವಿರುದ್ಧ ಒಗ್ಗಟ್ಟಿನ ಮತ್ತು ಪರಿಣಾಮಕಾರಿ ಹೋರಾಟ ನಡೆಸಬೇಕಿದೆ. ಭಾರತದ ಜನರಿಗೆ ವಿಶ್ವಾಸಾರ್ಹ ಪರ್ಯಾಯವನ್ನು ರಾಜಕೀಯವನ್ನು ಪ್ರಸ್ತುತಪಡಿಸುವ ಸಮಯ ಬಂದಿದೆ” ಎಂದು ಅವರು ಒಟ್ಟು ಏಳು ಅಂಶಗಳನ್ನು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ 4 ವರ್ಷ; ಸಂಘ ಪರಿವಾರ ಮಾದರಿ ಆಳ್ವಿಕೆಯ ಸತ್ವ…

ದೆಹಲಿಯ ಚುನಾಯಿತ ಸರ್ಕಾರಕ್ಕಿಂತ ಹೆಚ್ಚಿನ ಅಧಿಕಾರವನ್ನು ನೀಡುವ ವಿವಾದಾತ್ಮಕ ಹೊಸ ಕಾನೂನನ್ನು ಉಲ್ಲೇಖಿಸಿರುವ ಮಮತಾ, “ಈ ಕಾನೂನು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ಸರ್ಕಾರದ ಮೇಲಿನ ಬಿಜೆಪಿಯ ಆಕ್ರಮಣಗಳು” ಎಂದು ಕರೆದಿದ್ದಾರೆ.

“ಬಿಜೆಪಿ ಅಲ್ಲದ ಪಕ್ಷಗಳು ತಮ್ಮ ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಚಲಾಯಿಸಲು ಅಸಾಧ್ಯವಾಗಿಸಲು ಬಿಜೆಪಿ ಬಯಸಿದೆ. ಇದು ರಾಜ್ಯ ಸರ್ಕಾರಗಳ ಅಧಿಕಾರವನ್ನು ದುರ್ಬಲಗೊಳಿಸಲು ಮತ್ತು ಅವುಗಳನ್ನು ಕೇವಲ ಪುರಸಭೆಗಳಿಗೆ ಇಳಿಸಲು ಬಯಸಿದೆ. ಸಂಕ್ಷಿಪ್ತವಾಗಿ, ಇದು ಒಂದು ಪಕ್ಷದ ಸರ್ವಾಧಿಕಾರವನ್ನು ಭಾರತದಲ್ಲಿ ಸ್ಥಾಪಿಸಲು ಬಯಸಿದೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿಯೂ ಚುನಾವಣೆ; ಈ ಉಪಚುನಾವಣೆಗಳಲ್ಲಿಯೂ ಬಿಜೆಪಿಯದ್ದೇ ಮೇಲುಗೈ?

“ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಬಿಜೆಪಿಯ ದಾಳಿಯ ವಿರುದ್ಧ ಏಕೀಕೃತ ಮತ್ತು ಪರಿಣಾಮಕಾರಿ ಹೋರಾಟದ ಸಮಯ ಬಂದಿದೆ ಎಂದು ನಾನು ಬಲವಾಗಿ ನಂಬುತ್ತೇನೆ … ಟಿಎಂಸಿಯ ಅಧ್ಯಕ್ಷರಾಗಿ, ಈ ಯುದ್ಧದಲ್ಲಿ ನಾನು ನಿಮ್ಮೊಂದಿಗೆ ಮತ್ತು ಇತರ ಎಲ್ಲ ಮನಸ್ಸಿನ ಪಕ್ಷಗಳೊಂದಿಗೆ ಪೂರ್ಣ ಹೃದಯದಿಂದ ಕೆಲಸ ಮಾಡುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸೋನಿಯಾ ಗಾಂಧಿಯವರಲ್ಲದೆ, ನ್ಯಾಷನಲಿಸ್ಟ್​ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಡಿಎಂಕೆ ಪಕ್ಷದ ಸ್ಟಾಲಿನ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ, ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್, ತೆಲಂಗಾಣ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್, ಸಮಾಜವಾದಿ ರಾಷ್ಟ್ರೀಯ ಜನ ದಳದ ತೇಜಸ್ವಿ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೈಲುಗಳಲ್ಲಿ ರಾತ್ರಿ ವೇಳೆ ಚಾರ್ಜಿಂಗ್ ಪಾಯಿಂಟ್‌ಗಳ ಬಳಕೆಗೆ ನಿಷೇಧ ಹೇರಿದ ರೈಲ್ವೆ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...