Homeಮುಖಪುಟಹೋರಾಟ ತೀವ್ರಗೊಳಿಸಲು ಗಟ್ಟಿ ನಿರ್ಧಾರ: ಮೇ ತಿಂಗಳಿನಲ್ಲಿ ಪಾರ್ಲಿಮೆಂಟ್ ಚಲೋಗೆ ರೈತರ ಕರೆ

ಹೋರಾಟ ತೀವ್ರಗೊಳಿಸಲು ಗಟ್ಟಿ ನಿರ್ಧಾರ: ಮೇ ತಿಂಗಳಿನಲ್ಲಿ ಪಾರ್ಲಿಮೆಂಟ್ ಚಲೋಗೆ ರೈತರ ಕರೆ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾನೂನು ತರಬೇಕೆಂದು ಕಳೆದ 4 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ದಿನ ನಡೆಸಬೇಕಿದ್ದ ಪಾರ್ಲಿಮೆಂಟ್ ಚಲೋ ಜನವರಿ 26ರ ಅಹಿತಕರ ಘಟನೆಗಳಿಂದ ಮುಂದೂಡಲ್ಪಟ್ಟಿತ್ತು. ಈಗ ಅದನ್ನು ಮೇ ತಿಂಗಳಿನಲ್ಲಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.

130ಕ್ಕೂ ಹೆಚ್ಚು ದಿನಗಳಿಂದ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಮೇ ತಿಂಗಳಿನಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆ ಆದ ನಂತರ ಸಂಸತ್ತಿಗೆ ಪಾದಾಯಾತ್ರೆ ನಡೆಸಲು ಕರೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲು ಮುಂದಾಗಿದೆ.

ಜನವರಿ 25 ರಂದು ಸಂಯುಕ್ತಾ ಕಿಸಾನ್ ಮೋರ್ಚಾದ ಸಂಚಾಲಕ ಡಾ. ದರ್ಶನ್ ಪಾಲ್ ಮಾತನಾಡಿ ”ಫೆಬ್ರವರಿ 01 ರಂದು ದೆಹಲಿಯ ವಿವಿಧ ಭಾಗಗಳಿಂದ ರೈತರು ಪಾರ್ಲಿಮೆಂಟ್ ಕಡೆಗೆ ಪಾದಯಾತ್ರೆ ನಡೆಸುತ್ತೇವೆ. ಕರಾಳ ಕಾನೂನುಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ” ಎಂದು ತಿಳಿಸಿದ್ದರು. ಆದರೆ ಜನವರಿ 26ರ ಕಿಸಾನ್ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಘಟನೆಗಳಿಂದಾಗಿ ಫೆಬ್ರವರಿ 1ರ ಪಾರ್ಲಿಮೆಂಟ್ ಚಲೋ ಹೋರಾಟವನ್ನು ಮುಂದೂಡಲಾಗಿತ್ತು.

ತದನಂತರ ರೈತ ಮುಖಂಡರು ತಮ್ಮ ಗಮನವನ್ನು ದೇಶದೆಲ್ಲೆಡೆ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳ ಕಡೆ ಹರಿಸಿದ್ದರು. ಹರಿಯಾಣ, ಉತ್ತರಪ್ರದೇಶ, ಪಂಜಾಬ್, ರಾಜಸ್ಥಾನ, ಉತ್ತರಖಂಡ, ತೆಲಂಗಾಣ ಮತ್ತು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ನಡೆದು ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಘೋಷಿಸಿದ್ದವು. ಇಂದು ಕೂಡ ಕರ್ನಾಟಕದ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್ ನಡೆಯುತ್ತಿದೆ.

ಇದುವರೆಗೂ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುವುದಾಗಿ ಹೇಳಿದರೆ ರೈತರು ಕಾಯ್ದೆಗಳ ಸಂಪೂರ್ಣ ರದ್ದತಿಗೆ ಒತ್ತಾಯಿಸಿದ್ದಾರೆ. ಜೊತೆಗೆ ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗಾಗಿ ರೈತರು ಆಗ್ರಹಿಸಿದ್ದಾರೆ.

ಹೋರಾಟ ನಿರತ ರೈತರು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಮತ ನೀಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಮೇ 02ಕ್ಕೆ ಫಲಿತಾಂಶ ಘೋಷಣೆಯಾಗಲಿದ್ದು ನಂತರ ರೈತ ಹೋರಾಟ ಮತ್ತೆ ದೇಶದ ಗಮನಸೆಳೆಯಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...