Homeಮುಖಪುಟಬಡ್ಡಿದರ ಕಡಿತಗೊಳಿಸಿ 'ನಿನ್ನೆ' ಆದೇಶ: 'ಇಂದು' ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

- Advertisement -
- Advertisement -

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಬುಧವಾರ ಭಾರೀ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಆ ಆದೇಶವನ್ನು ಇಂದು ಬೆಳಿಗ್ಗೆಯೇ ಹಿಂಪಡೆದುಕೊಂಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತವನ್ನು ಸರ್ಕಾರ ನಿನ್ನೆ ಘೋಷಿಸಿತ್ತು.

ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-2021ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ದರಗಳಲ್ಲಿಯೇ ಮುಂದುವರಿಯುತ್ತವೆ (ಅಂದರೆ ಮಾರ್ಚ್ 2021 ರ ಹೊತ್ತಿಗೆ ಇದ್ದ ದರಗಳು). ಈ ಸಂಬಂಧಿ ಹೊರಡಿಸಲಾದ ಆದೇಶಗಳನ್ನು ಹಿಂಪಡೆಯಲಾಗುತ್ತದೆ” ಎಂದು ಹೇಳಿದ್ದಾರೆ.

ನಿನ್ನೆ ಸಂಜೆ, ಆರ್ಥಿಕ ವರ್ಷದ ಕೊನೆಯ ದಿನದಂದು, ಮಧ್ಯಮ ವರ್ಗದ ಠೇವಣಿದಾರರಿಗೆ ಭಾರಿ ಹೊಡೆತ ಬೀಳುವಂತೆ ಸರ್ಕಾರವು 2021-22ರ ಮೊದಲ ತ್ರೈಮಾಸಿಕದಲ್ಲಿ ಶೇ 1.1 ರಷ್ಟು ಬಡ್ಡಿದರಗಳಲ್ಲಿ ಭಾರಿ ಕಡಿತವನ್ನು ಘೋಷಿಸಿತ್ತು. ಆದರೆ ಎರಡನೇ ಸುತ್ತಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಿನ್ನೆ ಹೊರಡಿಸಿದ್ದ ಆದೇಶ ಏನು?

 

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ಉಳಿತಾಯ ಖಾತೆಯ ಮೇಲಿನ ವಾರ್ಷಿಕ ಬಡ್ಡಿದರವನ್ನು ಶೇ.4ರಿಂದ ಶೇ.3.5ಕ್ಕೆ ಇಳಿಸಲಾಗಿತ್ತು. ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಬಡ್ಡಿದರವನ್ನು ಶೇ.7.1ರಿಂದ ಶೇ.6.4ಕ್ಕೆ ಇಳಿಸಲಾಗಿತ್ತು. ಎಪ್ರಿಲ್ 1ರಿಂದ ಪರಿಷ್ಕೃತ ಬಡ್ಡಿದರಗಳು ಜಾರಿಗೆ ಬರಲಿವೆ ಎಂದು ಸರ್ಕಾರ ಹೇಳಿತ್ತು.

ರಾಷ್ಟ್ರೀಯ ಉಳಿತಾಯ ಸರ್ಟಿಫಿಕೇಟ್ (ಎನ್‌ಎಸ್‌ಸಿ)ನ ಬಡ್ಡಿದರ ಶೇ.5.9 ಹಾಗೂ ಶೇ.7.6ರಷ್ಟಿದ್ದ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರವನ್ನು ಶೇ.6.9ಕ್ಕೆ ನಿಗದಿಪಡಿಸಲಾಗಿತ್ತು.

ಐದು ವರ್ಷಗಳ ಅವಧಿಯ ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿದರವನ್ನು ಶೇ.7.4ರಿಂದ ಶೇ.6.5ಕ್ಕೆ ಇಳಿಸಲಾಗಿತ್ತು. ಕಿಸಾನ್ ವಿಕಾಸ್ ಪತ್ರದ (ಕೆವಿಪಿ) ಬಡ್ಡಿದರವನ್ನು ಶೇ.6.2ಕ್ಕೆ ಕಡಿತಗೊಳಿಸಲಾಗಿದೆ. 2020-21ರ ಸಾಲಿನಲ್ಲಿ ಕೆವಿಪಿ ಬಡ್ಡಿದರ ಶೇ.6.9ರಷ್ಟಿತ್ತು.

ಅಂಚೆ ಕಚೇರಿ ಉಳಿತಾಯ ಠೇವಣಿ ಮೇಲಿನ ಬಡ್ಡಿದರವನ್ನು ಶೇ.3.5 ಶೇಕಡಕ್ಕೆ ಇಳಿಸಲಾಗಿದ್ದರೆ, ಒಂದರಿಂದ ಐದು ವರ್ಷಗಳ ಅವಧಿಯ ಠೇವಣಿಗೆ (ಟರ್ಮ್ ಡೆಪಾಸಿಟ್) ಶೇ.4.4ರಿಂದ 4.1ರರೆಗೆ ಬಡ್ಡಿದರ ದೊರೆಯಲಿದೆ. ಐದು ವರ್ಷಗಳ ಅವಧಿಯ ರಿಕರಿಂಗ್ ಡೆಪಾಸಿಟ್ ಮೇಲಿನ ಬಡ್ಡಿದರವನ್ನು ಶೇ.5.8ಕ್ಕೆ ಇಳಿಸಲಾಗಿತ್ತು.

ಕಳೆದ ಒಂದು ವರ್ಷದಲ್ಲಿ ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿರುವುದು ಇದು ಎರಡನೇ ಬಾರಿಯಾಗಿತ್ತು. 2020-21ರ ಸಾಲಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರಕಾವು ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಶೇ.1ರಷ್ಟು ಕಡಿತಗೊಳಿಸಿತ್ತು.

ಆದರೆ ಈಗ ಈ ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.


ಇದನ್ನೂ ಓದಿ: ಇಂದು ಎರಡನೇ ಹಂತದ ಚುನಾವಣೆ: ಎಲ್ಲರ ಚಿತ್ತ ಪಶ್ಚಿಮ ಬಂಗಾಳದ ನಂದಿಗ್ರಾಮದತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...