Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...