Homeಕರ್ನಾಟಕಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಪಂಜಾಬ್ ಸರ್ಕಾರ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಇಂದಿನಿಂದ (ಏಪ್ರಿಲ್ 01) ಪಂಜಾಬ್ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಸಿಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಘೋಷಿಸಿದ್ದಾರೆ. ಸಂಪುಟ ಸಭೆ ಈ ಯೋಜನೆಗೆ ಬುಧವಾರ ಅನುಮೋದನೆ ನೀಡಿದೆ.

ಪಂಜಾಬ್ ರಾಜ್ಯದ ಮಹಿಳೆಯರು ಮತ್ತು ಯುವತಿಯರನ್ನು ಸಬಲೀಕರಣಗೊಳಿಸುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ಮುಖ್ಯಮಂತ್ರಿ ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ಘೋಷಿಸಿದ್ದರು ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.

ಪಂಜಾಬ್ ರಾಜ್ಯದ 1.31 ಕೋಟಿ ಮಹಿಳೆಯರು ಮತ್ತು ಯುವತಿಯರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. 2011 ರ ಜನಗಣತಿಯ ಪ್ರಕಾರ, ಪಂಜಾಬ್‌ನಲ್ಲಿ 2.77 ಕೋಟಿ ಜನಸಂಖ್ಯೆ ಇದೆ (ಪುರುಷರು 1,46,39,465 ಮತ್ತು ಮಹಿಳೆಯರು 1,31,03,873).

ಕಳೆದ ಬಾರಿಯ ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಾರ್ಟಿಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಇದೇ ರೀತಿ ಮಹಿಳೆಯರಿಗೆ ಉಚಿತ ಪ್ರಯಣ ಸೇವೆ ನಿಡುವ ಕ್ರಮ ಕೈಗೊಂಡಿದ್ದರು. ಬಸ್ ಮತ್ತು ಮೆಟ್ರೋ ಎರಡರಲ್ಲಿಯೂ ಉಚಿತ ಪ್ರಯಾನ ಎಂದು ಘೋಷಿಸಿದ್ದರು. ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ರಾಜ್ಯದಲ್ಲಿಯೂ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಯೋಜನೆಯಡಿ, ಪಂಜಾಬ್‌ನ ಮಹಿಳೆಯರು ಪಂಜಾಬ್ ರಸ್ತೆ ಸಾರಿಗೆ ನಿಗಮ (PRTC), ಪಂಜಾಬ್ ರಸ್ತೆ ಮಾರ್ಗ ಬಸ್‌ಗಳು (PUNBUS) ಮತ್ತು ಸ್ಥಳೀಯ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ನಗರ ಬಸ್ ಸೇವೆಗಳನ್ನು ಒಳಗೊಂಡಂತೆ ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣವನ್ನು ಪಡೆಯಬಹುದು.

ಆದರೆ, ಈ ಯೋಜನೆಯು ಸರ್ಕಾರಿ ಸ್ವಾಮ್ಯದ ಎಸಿ ಬಸ್‌ಗಳು, ವೋಲ್ವೋ ಬಸ್‌ಗಳು ಮತ್ತು ಎಚ್‌ವಿಎಸಿ (HVAC) ಬಸ್‌ಗಳಿಗೆ ಅನ್ವಯಿಸುವುದಿಲ್ಲ. ಸೌಲಭ್ಯವನ್ನು ಪಡೆಯಲು ಆಧಾರ್ ಕಾರ್ಡ್, ಮತದಾರರ ಕಾರ್ಡ್ ಅಥವಾ ಪಂಜಾಬ್‌ ನಿವಾಸಿಗಳೆಂದು ಹೇಳುವ ಯಾವುದಾದರೂ ದಾಖಲೆಗಳನ್ನು ನೀಡಬೇಕಾಗುತ್ತದೆ.

ಈ ಯೋಜನೆಯು ಸಾರಿಗೆಯ ದರದಿಂದಾಗಿ ಶಾಲೆ ಬಿಡುವ ಹೆಣ್ಣು ಮಕ್ಕಳನ್ನು ಕಡಿಮೆ ಮಾಡುವುದಲ್ಲದೆ, ಕೆಲಸ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಕೆಲಸದ ಸ್ಥಳಕ್ಕೆ ಸಾಕಷ್ಟು ದೂರ ಪ್ರಯಾಣಿಸುವ ಮಹಿಳೆಯರಿಗೆ ಯಾವುದೇ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಜೊತೆಗೆ ಈ ಯೋಜನೆಯಿಂದ ರಸ್ತೆಗಳಲ್ಲಿ ಸಂಚರಿಸುವ ವೈಯಕ್ತಿಕ ವಾಹನಗಳ ಸಂಖ್ಯೆ ಕಡಿಮೆಗೊಳ್ಳುತ್ತವೆ. ಇದರಿಂದ ವಾಯುಮಾಲಿನ್ಯ, ಅಪಘಾತಗಳು ಮತ್ತು ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದು ಕ್ಯಾಬಿನೆಟ್ ಅಭಿಪ್ರಾಯಪಟ್ಟಿದೆ.


ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...