Homeಕರ್ನಾಟಕಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಪಂಜಾಬ್ ಸರ್ಕಾರ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಇಂದಿನಿಂದ (ಏಪ್ರಿಲ್ 01) ಪಂಜಾಬ್ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಸಿಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಘೋಷಿಸಿದ್ದಾರೆ. ಸಂಪುಟ ಸಭೆ ಈ ಯೋಜನೆಗೆ ಬುಧವಾರ ಅನುಮೋದನೆ ನೀಡಿದೆ.

ಪಂಜಾಬ್ ರಾಜ್ಯದ ಮಹಿಳೆಯರು ಮತ್ತು ಯುವತಿಯರನ್ನು ಸಬಲೀಕರಣಗೊಳಿಸುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ಮುಖ್ಯಮಂತ್ರಿ ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ಘೋಷಿಸಿದ್ದರು ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.

ಪಂಜಾಬ್ ರಾಜ್ಯದ 1.31 ಕೋಟಿ ಮಹಿಳೆಯರು ಮತ್ತು ಯುವತಿಯರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. 2011 ರ ಜನಗಣತಿಯ ಪ್ರಕಾರ, ಪಂಜಾಬ್‌ನಲ್ಲಿ 2.77 ಕೋಟಿ ಜನಸಂಖ್ಯೆ ಇದೆ (ಪುರುಷರು 1,46,39,465 ಮತ್ತು ಮಹಿಳೆಯರು 1,31,03,873).

ಕಳೆದ ಬಾರಿಯ ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಾರ್ಟಿಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಇದೇ ರೀತಿ ಮಹಿಳೆಯರಿಗೆ ಉಚಿತ ಪ್ರಯಣ ಸೇವೆ ನಿಡುವ ಕ್ರಮ ಕೈಗೊಂಡಿದ್ದರು. ಬಸ್ ಮತ್ತು ಮೆಟ್ರೋ ಎರಡರಲ್ಲಿಯೂ ಉಚಿತ ಪ್ರಯಾನ ಎಂದು ಘೋಷಿಸಿದ್ದರು. ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ರಾಜ್ಯದಲ್ಲಿಯೂ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಯೋಜನೆಯಡಿ, ಪಂಜಾಬ್‌ನ ಮಹಿಳೆಯರು ಪಂಜಾಬ್ ರಸ್ತೆ ಸಾರಿಗೆ ನಿಗಮ (PRTC), ಪಂಜಾಬ್ ರಸ್ತೆ ಮಾರ್ಗ ಬಸ್‌ಗಳು (PUNBUS) ಮತ್ತು ಸ್ಥಳೀಯ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ನಗರ ಬಸ್ ಸೇವೆಗಳನ್ನು ಒಳಗೊಂಡಂತೆ ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣವನ್ನು ಪಡೆಯಬಹುದು.

ಆದರೆ, ಈ ಯೋಜನೆಯು ಸರ್ಕಾರಿ ಸ್ವಾಮ್ಯದ ಎಸಿ ಬಸ್‌ಗಳು, ವೋಲ್ವೋ ಬಸ್‌ಗಳು ಮತ್ತು ಎಚ್‌ವಿಎಸಿ (HVAC) ಬಸ್‌ಗಳಿಗೆ ಅನ್ವಯಿಸುವುದಿಲ್ಲ. ಸೌಲಭ್ಯವನ್ನು ಪಡೆಯಲು ಆಧಾರ್ ಕಾರ್ಡ್, ಮತದಾರರ ಕಾರ್ಡ್ ಅಥವಾ ಪಂಜಾಬ್‌ ನಿವಾಸಿಗಳೆಂದು ಹೇಳುವ ಯಾವುದಾದರೂ ದಾಖಲೆಗಳನ್ನು ನೀಡಬೇಕಾಗುತ್ತದೆ.

ಈ ಯೋಜನೆಯು ಸಾರಿಗೆಯ ದರದಿಂದಾಗಿ ಶಾಲೆ ಬಿಡುವ ಹೆಣ್ಣು ಮಕ್ಕಳನ್ನು ಕಡಿಮೆ ಮಾಡುವುದಲ್ಲದೆ, ಕೆಲಸ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಕೆಲಸದ ಸ್ಥಳಕ್ಕೆ ಸಾಕಷ್ಟು ದೂರ ಪ್ರಯಾಣಿಸುವ ಮಹಿಳೆಯರಿಗೆ ಯಾವುದೇ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಜೊತೆಗೆ ಈ ಯೋಜನೆಯಿಂದ ರಸ್ತೆಗಳಲ್ಲಿ ಸಂಚರಿಸುವ ವೈಯಕ್ತಿಕ ವಾಹನಗಳ ಸಂಖ್ಯೆ ಕಡಿಮೆಗೊಳ್ಳುತ್ತವೆ. ಇದರಿಂದ ವಾಯುಮಾಲಿನ್ಯ, ಅಪಘಾತಗಳು ಮತ್ತು ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದು ಕ್ಯಾಬಿನೆಟ್ ಅಭಿಪ್ರಾಯಪಟ್ಟಿದೆ.


ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...