Homeಮುಖಪುಟ66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಹತ್ತಿರದ ಮುಖಂಡನಾಗಿದ್ದ ಮತ್ತು ಈಗ ಬಿಜೆಪಿ ಸೇರಿ ಅಭ್ಯರ್ಥಿಯಾಗಿರುವ ಸುವೇಂಧು ಅಧಿಕಾರಿಯವರ ಕ್ಷೇತ್ರ ನಂದಿಗ್ರಾಮದಲ್ಲಿ ಇಂದು ಚುನಾವಣೆ ನಡೆಯಲಿದ್ದು ಕಾವೇರಿದ ವಾತಾವರಣ ನಿರ್ಮಾಣವಾಗಿದೆ. ಅದೇ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, 66 ವರ್ಷದ ಆಂಟಿ ಸಂಯಮದಿಂದಿರಬೇಕು ಎಂದು ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕಾಪ್ರಹಾರ ನಡೆಸಿದ್ದಾರೆ.

“ಅವರು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಸಂಯಮವನ್ನು ತೋರಿಸಬೇಕು. ಅವರು ಪ್ರಧಾನಿಗೆ ಹೊಲಸು ಭಾಷೆ ಬಳಸುತ್ತಾರೆ. ಅವರು 66 ವರ್ಷದ ಆಂಟಿ. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿರುವಾಗ ಅವರು ಗೂಂಡಾಗಿರಿಯಲ್ಲಿ ಪಾಲ್ಗೊಳ್ಳಬಾರದು” ಎಂದು ಅಧಿಕಾರಿ ಹೇಳಿದ್ದಾರೆ.

ಮತದಾನಕ್ಕೂ ಮುನ್ನ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ನಂದಿಗ್ರಾಮದಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದವರ ವಿಡಿಯೋ ಮತ್ತು ಫೋಟೊಗಳು ಲಭ್ಯವಿವೆ. ನಾನೆಂದು ಅವರನ್ನು ಕ್ಷಮಿಸುವುದಿಲ್ಲ. ಚುನಾವಣಾ ನಡೆಯುತ್ತಿರುವುದರಿಂದ ಸುಮ್ಮನಿದ್ದೇನೆ. ಚುನಾವಣೆ ಮುಗಿದ ನಂತರ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿ, ಮಮತಾ ಬ್ಯಾನರ್ಜಿಯವರು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರು ಹೂಗ್ಲಿಯಲ್ಲಿ ಕಾನೂನುಬಾಹಿರವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ನಂದಿಗ್ರಾಮ್ ಹೆಸರಿಸಿದ್ದಾರೆ. ನಂದಿಗ್ರಾಮದಲ್ಲಿಯೂ ಪತ್ರಿಕಾಗೋಷ್ಠಿ ನಡೆಸಿ ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಿದ್ದಾರೆ. ಅವರು ಯಾವುದೇ ಹಿಂಸಾಚಾರವನ್ನು ಮಾಡಬಾರದು ಎಂದು ನಾವು ನಿರೀಕ್ಷಿಸುತ್ತೇವೆ. ಇಲ್ಲಿ ಎಲ್ಲರೂ ಸಕ್ರಿಯರಾಗಿದ್ದಾರೆ, ಕೇಂದ್ರ ಪಡೆಗಳು ಇಲ್ಲಿವೆ, 14 ಡ್ರೋನ್‌ಗಳನ್ನು ಬಳಸಲಾಗುತ್ತಿದೆ, 76 ಬೂತ್‌ಗಳನ್ನು ತ್ವರಿತ ಪ್ರತಿಕ್ರಿಯೆ ತಂಡ ಮತ್ತು ಇತರ ಪಡೆಗಳು ನಿರ್ವಹಿಸುತ್ತವೆ. ಶಾಂತಿಯುತವಾಗಿರುವುದಕ್ಕೆ ನನಗೆ ಸಂತೋಷವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ; ಬಿಜೆಪಿಯೇತರ ವಿರೋಧ ಪಕ್ಷಗಳಿಗೆ ಪತ್ರ ಬರೆದ ಬಂಗಾಳ ಮುಖ್ಯಮಂತ್ರಿ ಮಮತಾ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...