Homeಕರ್ನಾಟಕಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಪ್ರಧಾನಿ ಮೋದಿಯವರೇ, ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ" (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ- ಸಿದ್ದರಾಮಯ್ಯ

- Advertisement -
- Advertisement -

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿಗೆ ಸಂಬಂಧಿಸಿದಂತೆ ಕಾನೂನು ಮೀರಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಗ್ರಾಮೀಣ ಸುಮಾರ್ಗ ಯೋಜನೆಗೆ ಪದೇ ಪದೇ ಮನವಿ ಮಾಡ್ತಿದ್ದೇನೆ‌. ಆದರೆ ಇನ್ನೂ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ. ಯಡಿಯೂರಪ್ಪನವರು 32 ಬಿಜೆಪಿ ಶಾಸಕರಿಗೆ ತಲಾ 20 ರಿಂದ 23 ಕೋಟಿ ರೂಪಾಯಿಗಳನ್ನು,‌ 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂಪಾಯಿಗಳನ್ನು, ಕಾಂಗ್ರೆಸ್‌ನ 30 ಮಂದಿ ಶಾಸಕರಿಗೆ 5 ಕೋಟಿ ರೂಪಾಯಿಗಳನ್ನು ಹಾಗೂ ಜೆಡಿಎಸ್‌‌ನ 18 ಮಂದಿ ಶಾಸಕರಿಗೆ ಸರ್ಕಾರದಿಂದ ತಲಾ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡವಂತೆ ಆದೇಶ ಹೊರಡಿಸಿದ್ದಾರೆ” ಎಂದು ಈಶ್ವರಪ್ಪ ಆರೋಪಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಬಿಜೆಪಿ ಮುಖಂಡರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

“ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ  ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗ ಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ  ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ’ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ ಎಂದು ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

“ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ  ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...