Homeಅಂಕಣಗಳುಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

- Advertisement -
- Advertisement -

ಕಾಂಗ್ರೆಸ್-ಬಿಜೆಪಿ ಪಾಲಿಗೆ ಅಸ್ಸಾಮಿನ Tea Tribe ನಡೆದಾಡುವ ಮತಗಳೇ ವಿನಾ ಮನುಷ್ಯರಲ್ಲ

ದಮನಿತರು ಶೋಷಿತರು ಅವಮಾನಿತರ ನೋವುಗಳಿಗೆ ದನಿಯಾಗಿದ್ದ ಇಂಗ್ಲಿಷ್ ಕಾದಂಬರಿಕಾರ ದಿವಂಗತ ಮುಲ್ಕರಾಜ್ ಆನಂದ್ ಅವರು ಚಹಾ ತೋಟಗಳಲ್ಲಿ ಕಾರ್ಮಿಕರು ಅನುಭವಿಸುವ ರೌರವ ನರಕವನ್ನು ಸೆರೆಹಿಡಿದು ಜಗತ್ತಿಗೆ ತೋರಿದ ಮೊದಲಿಗರು. ಈ ಕಾದಂಬರಿಯ ಹೆಸರು Two Leaves and a Bud (ಎರಡೆಲೆ ಮತ್ತು ಒಂದು ಮುಗುಳು). 1937ರಲ್ಲಿ ಬರೆದಿದ್ದ ಕೃತಿಯದು.

ಒಮ್ಮೆ ಹೊಕ್ಕರೆ ಮತ್ತೆಂದೂ ಹೊರಬೀಳದಂತೆ ಬಂಧಿಸಿ ಹಗಲಿರುಳು ರಕ್ತ ಬೆವರು ಒಂದು ಮಾಡಿಸಿ ದುಡಿಸಿಕೊಳ್ಳುವ ಚಹಾ ತೋಟಗಳ ನರಕದಿಂದ ಮುಕ್ತಿ ನೀಡುವ ಶಕ್ತಿಯಿರುವುದು ಸಾವಿಗೆ ಮಾತ್ರವೇ ಎಂಬ ಕ್ರೂರ ಸತ್ಯ ಈ ಕಾದಂಬರಿಯಲ್ಲಿ ಅನಾವರಣವಾಗುತ್ತ ಹೋಗುತ್ತದೆ. ಅಮಾಯಕರ ಶ್ರಮವನ್ನು ದರೋಡೆ ಮಾಡುವ ಒಡೆಯರ ಪಾಲಿಗೆ ಕೂಲಿಗಳು ದುಡಿವ ಯಂತ್ರಗಳೇ ವಿನಾ ಮನುಷ್ಯರಲ್ಲ. ದಿನಕ್ಕೆ ಬೆಳಗಿನಂತ ರಾತ್ರಿಯತನಕ ಬಿಡುವಿಲ್ಲದೆ ದುಡಿದರೆ ಕೈಗೆ ಬೀಳುವ ಕೂಲಿ ಮೂರು ಆಣೆಗಳು. ದಿನಸಿ ತರಲು ಸಂತೆಗೆ ಹೋದರೆ ಯಾತಕ್ಕೂ ಸಾಲದು. ಮೈಮುರಿಯುವಂತೆ ಹೊಡೆತಗಳನ್ನು ತಿನ್ನಬೇಕಲ್ಲದೆ ಪತ್ನಿ ಪುತ್ರಿಯರನ್ನು ಒಡೆಯರ ಲೈಂಗಿಕ ವಾಂಛೆಗೆ ಒಪ್ಪಿಸಲೇಬೇಕು. ಕೂಲಿಗಳ ಮುರುಕು ವಸತಿಗಳು ಕೊಳಕಿನ ಕೂಪಗಳು. ಕೊಕ್ಕೆಹುಳುಗಳ ಆಗರ. ಹೊಂಚು ಹಾಕುವ ಕಾಲರಾ. ಬಂಡವಾಳ ಹಾಕಿದ ಒಡೆಯರ ಪಾಲಿಗೆ ಕೂಲಿಗಳು ಸುಳ್ಳರು, ಕಳ್ಳರು ಹಾಗೂ ಸೋಮಾರಿಗಳು. ನೈರ್ಮಲ್ಯವೇ ಇಲ್ಲದ ಕೂಪದಲ್ಲಿ ಕೂಲಿ ಗಂಗುವಿನ ಪತ್ನಿ ಸಜನಿ ಕಾಲರಾಕ್ಕೆ ತುತ್ತಾಗಿ ಸಾಯುತ್ತಾಳೆ. ಅಂತ್ಯಕ್ರಿಯೆಗೆ ಗಂಗುವಿನ ಬಳಿ ಹಣವಿಲ್ಲ. ಕೇಳಲು ಹೋದರೆ ಗದರಿ ಅಟ್ಟುತ್ತಾನೆ ಒಡೆಯ. ತೋಟದ ಮ್ಯಾನೇಜರ್ ಕಣ್ಣು ಗಂಗುವಿನ ಮಗಳ ಮೇಲೆ ಬೀಳುತ್ತದೆ. ತಡೆಯಲು ಅಡ್ಡ ಬಂದ ಗಂಗು ಗುಂಡೇಟಿಗೆ ಹೆಣವಾಗಿ ಉರುಳುತ್ತಾನೆ.

ಸಿನೆಮಾಗಳಲ್ಲಿ ಕಾಣುವ ಬೆಟ್ಟಗುಡ್ಡ, ಝರಿ ತೊರೆ, ಕಲಕಲ ನದಿಯ ಸೀಮೆಯ ನಡುವೆ ನಳನಳಿಸುವ ಮನಮೋಹಕ ಹಸಿರು ಚಹಾ ತೋಟಗಳ ಹಿತ್ತಲುಗಳಲ್ಲಿ ಅಸಹನೀಯ ಮೌನ, ಹಸಿವಿನ ಯಾತನೆ, ನಿಟ್ಟುಸಿರು, ರಕ್ತಹೀನತೆ, ರೋಗರುಜಿನಗಳು, ಅಮಾನವೀಯ ಶೋಷಣೆ, ಸಾವಿನ ನೆರಳು ಮೈಚಾಚಿ ಮಲಗಿದೆ. ಬದುಕಿನ ಸಂಗೀತ ಮರೆಯಾಗಿದೆ.

ಕಂಗೆಟ್ಟಿರುವ ಲಕ್ಷ ಲಕ್ಷ ಕಾರ್ಮಿಕರನ್ನು ಮೈದಡವಿ ಮಾತಾಡಿಸುವ ಸರ್ಕಾರಗಳಿಲ್ಲ. ತಮ್ಮ ನೆಲದಲ್ಲೇ ಅನಾಥರಾಗಿರುವ ಅಸಂಖ್ಯಾತರ ಸಾಲಿಗೆ ಸೇರಿ ಹೋಗಿದ್ದಾರೆ ಈ ಶ್ರಮಜೀವಿಗಳು.

ಚೀನಾದಿಂದ ಚಹಾ ಸಸ್ಯಗಳನ್ನು ಕದಿಯುವ ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ದಟ್ಟ ಕಾಡುಗಳನ್ನು ಬೋಳಿಸಿ ಬೆಳೆಸುತ್ತದೆ. ಬ್ರಿಟಿಷ್ ಪ್ಲಾಂಟರುಗಳು 150 ವರ್ಷಗಳ ಹಿಂದೆ ಕಾಡು ಕಡಿದು ಚಹಾ ತೋಟಗಳನ್ನು ಎಬ್ಬಿಸಲು ಮಧ್ಯಭಾರತದ ಆದಿವಾಸಿಗಳನ್ನು ಬಲವಂತದಿಂದ ಒಕ್ಕಲೆಬ್ಬಿಸಿ ಅಸ್ಸಾಮ್ ಮತ್ತು ಬಂಗಾಳಕ್ಕೆ ಪಶುಗಳಂತೆ ಸಾಗಿಸುತ್ತಾರೆ. ಮುಂಡಾ, ಸಂತಾಲ್, ಓರಾನ್, ಗೊಂಡರು, ಖಾರಿಯಾ ಹಾಗೂ ಸಾವೊರಾ ಪಂಗಡಗಳ ಈ ಆದಿವಾಸಿ ಕಾರ್ಮಿಕರನ್ನು ಈಗಲೂ Tea Tribes ಎಂದೇ ಕರೆಯಲಾಗುತ್ತದೆ. ಅಸ್ಸಾಮ್ ಒಂದರಲ್ಲೇ ಈ ಆದಿವಾಸಿ ಕಾರ್ಮಿಕರ ಸಂಖ್ಯೆ ಹತ್ತು ಲಕ್ಷಕ್ಕೂ ಹೆಚ್ಚು. ಅಸ್ಸಾಮಿನ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ.18ರಷ್ಟು ಎನ್ನಲಾಗಿದೆ.

ಅಂದಿನ ಬ್ರಿಟಿಷ್ ಸರ್ಕಾರ ಭಾರತದಲ್ಲಿ ಬ್ರಿಟಿಷ್ ಪ್ಲಾಂಟರುಗಳಿಗೆ ಸಂಪನ್ಮೂಲಗಳು ಮತ್ತು ಕೂಲಿ ಕಾರ್ಮಿಕರ ಮೇಲೆ ಎಣೆಯಿಲ್ಲದ ಪ್ರಶ್ನಾತೀತ ಅಧಿಕಾರವನ್ನ ಅಧಿಪತ್ಯ ನೀಡಿತ್ತು. ಬಲವಂತದ ನೇಮಕ, ಅತಿ ಕಡಿಮೆ ಕೂಲಿ, ಅಮಾನವೀಯ ವಸತಿ ಮತ್ತು ಕೆಲಸದ ಪರಿಸ್ಥಿತಿಗಳು ಅಂದಿನ ಬ್ರಿಟಿಷ್ ಮಾಲೀಕರ ಲಾಭವನ್ನು ನೂರ್ಮಡಿಗೊಳಿಸುತ್ತಿದ್ದವು. ಸ್ವತಂತ್ರ ಭಾರತದ ಚಹಾ ತೋಟಗಳ ಕಾರ್ಮಿಕರ ಪರಿಸ್ಥಿತಿ ಹೆಚ್ಚೇನೂ ಬದಲಾಗಿಲ್ಲ.

ತಮ್ಮ ರಾಜ್ಯಗಳಲ್ಲೇ ಬದುಕಿದ್ದರೆ ಇವರಿಗೆ ಸ್ವಾಭಾವಿಕವಾಗಿ ಹಕ್ಕಿನ ಪ್ರಕಾರವೇ ದಕ್ಕಿರುವ ಪರಿಶಿಷ್ಟ ಪಂಗಡಗಳ ಸ್ಥಾನಮಾನ ಸಿಗುತ್ತಿತ್ತು. ಆದರೆ ಅಸ್ಸಾಮ್ ಸರ್ಕಾರ ಇವರಿಗೆ ಆದಿವಾಸಿಗಳ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ತಯಾರಿಲ್ಲ. ಈ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿರುವ ಆದಿವಾಸಿಗಳು ಅಸ್ಸಾಮಿನ ಉಗ್ರರ ಕೆಂಗಣ್ಣಿಗೆ ಗುರಿಯಾಗಿ ಸಾವಿರ ಸಂಖ್ಯೆಯಲ್ಲಿ ಹತ್ಯೆಯಾಗಿ ಹೋಗಿದ್ದಾರೆ. ಚಹಾ ತೋಟಗಳ ಮಾಲೀಕರ ದೌರ್ಜನ್ಯಗಳಿಗೆ ಗುರಿಯಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಡಪಾಯಿಗಳ ವಿರುದ್ಧ ಹತ್ತು ಹಲವು ರೂಪಗಳಲ್ಲಿ ಯುದ್ಧ ಸಾರಿವೆ.

ಅಸ್ಸಾಮ್ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಮೇಲೆ ಸೋಲು ಗೆಲುವಿನ ಮೇಲೆ ಪ್ರಭಾವ ಬೀರಬಲ್ಲವರು ಇವರು. ಸುಮಾರು 40 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳನ್ನು ಇವರ ಮತಗಳು ತೀರ್ಮಾನಿಸಬಲ್ಲವು. ರಾಜಕೀಯ ಪಕ್ಷಗಳ ಪಾಲಿಗೆ ಈ ಜನರು ನಡೆದಾಡುವ ಉಸಿರಾಡುವ ವೋಟುಗಳು ಅಷ್ಟೇ. ಐದು ವರ್ಷಗಳಿಗೊಮ್ಮೆ ಇವರ ಕಣ್ಣಲ್ಲಿ ಮಣ್ಣು ಹಾಕಿದರೆ ಸಾಕು. ಮುಂದಿನ ಐದು ವರ್ಷಗಳ ಕಾಲ ನಿಶ್ಚಿಂತೆ. ಅಸ್ಸಾಮಿನ ಚುನಾವಣೆಗಳು ಜರುಗಿವೆ. ಹೀಗಾಗಿ ಬಿಜೆಪಿ- ಕಾಂಗ್ರೆಸ್ಸು ಎರಡೂ ಪಕ್ಷಗಳು ಈ ಉಸಿರಾಡುವ ವೋಟುಗಳನ್ನು ರಮಿಸಲು ತೊಡಗಿವೆ.

ನೀರು, ನೆರಳು, ಅನ್ನ ಯಾವ ಸೌಲಭ್ಯವೂ ಸಮರ್ಪಕವಿಲ್ಲ. ಅತಿ ಕಡಿಮೆ ದಿನಗೂಲಿ, ಜೊತೆಗೆ ಲೈಂಗಿಕ ಕಿರುಕುಳ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿಯೊಂದು ಅಸ್ಸಾಮಿನ ಚಹಾ ತೋಟಗಳ ಕಾರ್ಮಿಕರ ಬವಣೆಯನ್ನು ಬಣ್ಣಿಸುತ್ತದೆ. ಶೇ.89ರಷ್ಟು ಚಹಾ ತೋಟಗಳಲ್ಲಿ ನೈರ್ಮಲ್ಯದ ಸೌಲಭ್ಯಗಳಿಲ್ಲ. ಹೆಣ್ಣುಮಕ್ಕಳು ಮಾಸಿಕ ಚಕ್ರದ ದಿನಗಳಲ್ಲೂ ದುಡಿಯಬೇಕಿದೆ. ಶಿಶುವಿಹಾರ ವ್ಯವಸ್ಥೆಯಿಲ್ಲ ಎಂದು 2017ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ವಿಕಾಸ ಮಂತ್ರಾಲಯಕ್ಕೆ ಸಲ್ಲಿಸಲಾದ ವರದಿ ಹೇಳಿದೆ

ಚಹಾ ಎಲೆ ಕೀಳುವ ಕೂಲಿಯಾಳುಗಳು ಬಹುತೇಕ ಮಹಿಳೆಯರು. ಕೆಲಸದ ನಡುವೆ ಅವರು ಕುಡಿಯುವ ಚಹಾ ಕಷಾಯಕ್ಕೆ ಸಕ್ಕರೆಯ ಬದಲಿಗೆ ಉಪ್ಪು ಬೆರೆಸಿಕೊಳ್ಳುತ್ತಾರೆ. ಅಧಿಕ ರಕ್ತದೊತ್ತಡ ಅವರ ಬೆನ್ನು ಹತ್ತಿದೆ. ಉಪ್ಪಿನ ಬದಲು ಉಚಿತ ಸಕ್ಕರೆ ಸರಬರಾಜು ಮಾಡುವುದಾಗಿ 2019ರಲ್ಲಿ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಆಶ್ವಾಸನೆಯಾಗೇ ಉಳಿದಿದೆ.

ನರೇಂದ್ರ ಮೋದಿಯವರು ತಮ್ಮನ್ನು ’ಚಾಯ್ ವಾಲಾ’ ಎಂದು ಕರೆದುಕೊಂಡರು. ಚಹಾ ಮಾರಿದೆನೆಂದು ಹೇಳಿಕೊಂಡು ಅದನ್ನು ಚುನಾವಣೆಯಲ್ಲಿ ರಾಜಕೀಯ ಬಂಡವಾಳವನ್ನಾಗಿಯೂ ಮಾಡಿಕೊಂಡರು. ಆದರೆ ದೇಶದ ಚಹಾ ಮಾರುವವರ ಬದುಕುಗಳನ್ನು ಅರಳಿಸುವಂತಹದೇನನ್ನೂ ಅವರು ಮಾಡಲಿಲ್ಲ. 2014ರ ಲೋಕಸಭಾ ಚುನಾವಣೆಗಳ ಪ್ರಚಾರ ಭಾಷಣಗಳಲ್ಲಿ ದಿನಗೂಲಿಯನ್ನು 350 ರುಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದುಂಟು. ಬಿಜೆಪಿ 2016ರಲ್ಲಿ ಅಸ್ಸಾಮ್ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ಅಚ್ಚು ಮಾಡಿತು. ಇದೀಗ ಮತ್ತೊಂದು ಚುನಾವಣೆ ಬಂದಿದೆ. ಆದರೆ ಆಶ್ವಾಸನೆ ಚುನಾವಣೆ ಪ್ರಣಾಳಿಕೆಯ ಪುಟಗಳಲ್ಲೇ ಹೂತು ಹೋಗಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...