Homeಕರ್ನಾಟಕರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದ ಬಿಜೆಪಿ ಶಾಸಕರು

- Advertisement -
- Advertisement -

ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದ ಸಚಿವ ಈಶ್ವರಪ್ಪ ಅವರ ಮೇಲೆ ಬಿಜೆಪಿ ಶಾಸಕರು ಮುಗಿಬಿದ್ದಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿ ನಿಂತಿದ್ದು, “ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ರಾಜ್ಯಪಾಲರಿಗೆ, ಪ್ರಧಾನಿಗಳಿಗೆ ದೂರು ಕೊಡುವುದು ಸರಿಯಲ್ಲ. ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಹೀಗಾಗಿ ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮಾಡುವಂತೆ ನಾವೆಲ್ಲಾ ಶಾಸಕರು ಮನವಿ ಮಾಡಿದ್ದೆವು, ಮುಖ್ಯಮಂತ್ರಿ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ. ಆದರೆ ಈಶ್ವರಪ್ಪ ಹೇಳಿದಂತೆ ಅವರ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿಲ್ಲ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ನಾಯಕತ್ವ ಬದಲಾವಣೆಗೆ ಇದು ಮುನ್ನುಡಿ ಅಲ್ಲ. ಯಡಿಯೂರಪ್ಪನವರೇ ಮುಂದೆಯೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಈಗಾಗಲೇ ಈಶ್ವರಪ್ಪನವರೇ ಹೇಳಿದ್ದಾರೆ. ಹೀಗಾಗಿ ಈಶ್ವರಪ್ಪನವರ ದೂರಿಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ, ಒಗ್ಗಟ್ಟಾಗಿಯೇ ಇದ್ದೇವೆ. ಯಡಿಯೂರಪ್ಪನವರೇ ಮುಂದಿನ 2 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬುದರಲ್ಲಿ ಯಾರಿಗೂ ಯಾವುದೇ ಅನುಮಾನವಿಲ್ಲ. ಆದರೆ ಈಶ್ವರಪ್ಪ ಮಾತ್ರ ಈ ರೀತಿ ಮಾಡಿದ್ದು ಸರಿಯಲ್ಲ” ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಂತರ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಈ ಬಗ್ಗೆ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್‌ಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ ಅವರು, “ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ನೀರಿನಿಂದ ಹೊರಗೆ ಬಂದ ಮೇಲೆ ಮೀನು ಒದ್ದಾಡುತ್ತಲ್ಲ ಹಾಗೆಯೆ ಕಾಂಗ್ರೆಸ್‌ನವರ ಕಥೆಯೂ ಆಗಿದೆ. ಕಾಂಗ್ರೆಸ್​ನಿಂದ A ಯಿಂದ Z ವರೆಗೆ ಎಲ್ಲರೂ ಖುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇವರು ನಮ್ಮ ಬಗ್ಗೆ ಏನು ಹೇಳೋದು?” ಎಂದು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಮುಖಂಡ ಈಶ್ವರಪ್ಪ ವಿರುದ್ದ ಗರಂ!

ಸ್ವತಃ ಈಶ್ವರಪ್ಪ ಅವರ ನೇತೃತ್ವದಲ್ಲೇ ಸ್ಥಾಪನೆಯಾದ ರಾಯಣ್ಣ ಬ್ರಿಗೇಡ್ ಮುಖಂಡ, ಶಾಸಕ ವಿರೂಪಾಕ್ಷ ಕೂಡಾ ತಿರುಗಿ ಬಿದ್ದಿದ್ದು, “ಈಶ್ವರಪ್ಪ ಮನಸ್ಸಿಗೆ ಏನಾದರೂ ನೋವಾಗಿದ್ದರೆ ಬಂದು ಅದನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಕ್ಯಾಬಿನೆಟ್ ಸಚಿವರಾಗಿ ಸಿಎಂ ಮೇಲೆ ಈ ರೀತಿ ದೂರು ಕೊಡುವುದು ಸರಿಯಲ್ಲ. ಹೀಗಾಗಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕು. ಇನ್ನು ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...