Homeಕರ್ನಾಟಕಮತ್ತೆ ಕಾಡುತ್ತಿದೆ ಬೇಡ್ತಿ-ವರದಾ-ಅಘನಾಶಿನಿ ನದಿ ಜೋಡಣೆ ಗುಮ್ಮ!

ಮತ್ತೆ ಕಾಡುತ್ತಿದೆ ಬೇಡ್ತಿ-ವರದಾ-ಅಘನಾಶಿನಿ ನದಿ ಜೋಡಣೆ ಗುಮ್ಮ!

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (ಎನ್‌ಡಬ್ಲ್ಯುಡಿಎ) ಬೇಡ್ತಿ-ಅಘನಾಶಿನಿ ಮತ್ತು ವರದಾ ನದಿಗಳನ್ನು ಸೇರಿಸುವ ವಿಸ್ತೃತ ಯೋಜನಾ ವರದಿ ತಯಾರು ಮಾಡಿತ್ತು. ಈ ವರದಿ ಪ್ರಕಾರ ಬೇಡ್ತಿಯ ಉಪನದಿಗಳಿಗೆ ಅಣೆಕಟ್ಟು ಕಟ್ಟಿ ವರದೆಯ ಪಾತ್ರದಲ್ಲಿ ಆ ನೀರು ತುಂಬಬೇಕು. ವರದೆ ಹರಿದು ತುಂಗಭದ್ರಾ ನದಿ ಸೇರುತ್ತದೆ. ಈ ನೀರಿಂದ ತುಂಗಭದ್ರ್ರಾ ಎಡದಂಡೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು ಯೋಜನೆಯ ಮೂಲ ಉದ್ದೇಶವಾಗಿತ್ತು. ಆದರದು ಶಿರಸಿ ಭಾಗದ ಜನರ ಪ್ರಬಲ ವಿರೋಧದಿಂದ ವಿಫಲವಾಗಿತ್ತು. ಈಗ ಅದೇ ಯೋಜನೆ ’ಕುಡಿಯುವ ನೀರಿನ’ ಹೆಸರಲ್ಲಿ ಮತ್ತೆ ಮುನ್ನಲೆಗೆ ಬಂದಿದೆ

- Advertisement -
- Advertisement -

ಉತ್ತರ ಕನ್ನಡದ ಪಶ್ಚಿಮ ಘಟ್ಟದ ತಪ್ಪಲಲ್ಲಿ ಇದ್ದಕ್ಕಿದ್ದಂತೆ ನದಿ ಜೋಡಣೆ ಗುಮ್ಮ ಮತ್ತೊಮ್ಮೆ ಎದ್ದು ಕುಳಿತು ಬೆಚ್ಚಿ ಬೀಳಿಸಿದೆ! ಜಿಲ್ಲೆಯ ಜೀವ ನದಿಗಳಾದ ಬೇಡ್ತಿ, ಅಘನಾಶಿನಿ ಮತ್ತು ವರದೆಯನ್ನು ಒಂದು ಮಾಡಿ ಬಯಲು ಸೀಮೆಯ ಗದಗ-ರಾಯಚೂರು-ಕೊಪ್ಪಳದ ಕಡೆಗೆ ತಿರುಗಿಸುವುದು ಕಾರ್ಯಸಾಧುವಲ್ಲ. ಪಕ್ಕಾ ಅವೈಜ್ಞಾನಿಕ ಯೋಜನೆಯೊಂದನ್ನು ಸರ್ಕಾರಿ ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಮಳೆಗಾಲದಲ್ಲಷ್ಟೇ ಮೈದುಂಬಿ ಹರಿಯುವ ಈ ಮೂರೂ ನದಿಗಳು ಬೇಸಿಗೆ ಬಂತೆಂದರೆ ಬಸವಳಿಯುವ ಸತ್ಯ ಗೊತ್ತಿದ್ದು ಬಯಲುಸೀಮೆಗೆ ಕುಡಿಯುವ ನೀರನ್ನು ಶಿರಸಿ-ಯಲ್ಲಾಪುರ ಸೀಮೆಯಿಂದ ಪೂರೈಸುತ್ತೇವೆಂದು ಹಠಕ್ಕೆ ಬಿದ್ದಿರುವುದು ಉತ್ತರ ಕನ್ನಡಿಗರನ್ನು ಕಂಗಾಲಾಗಿಸಿದೆ.

ಏನಿದು ’ದಾಹ’ದ ಯೋಜನೆ?

ಈಚೆಗೆ ಸಿಎಂ ಯಡ್ಡಿ ಸಾಹೇಬರು ಬಜೆಟ್‌ನಲ್ಲಿ ನದಿ ಜೋಡಣೆ ಯೋಜನೆ ಘೋಷಣೆ ಮಾಡುತ್ತಿದ್ದಂತೆಯೇ ಇದು ತಮ್ಮ ಬದುಕು ಬರಿದಾಗಿಸುವ ಹುಚ್ಚು ಯೋಜನೆ ಎನ್ನುತ್ತ ಉತ್ತರ ಕನ್ನಡ ಮಂದಿ ಪ್ರತಿಭಟನೆ ಶುರು ಮಾಡಿದ್ದಾರೆ. ಹಾಗೆ ನೋಡಿದರೆ ಇದೇನೂ ಹೊಸ ಪ್ರಾಜೆಕ್ಟ್ ಅಲ್ಲ; ಎರಡು ದಶಕದ ಹಿಂದೆ ಪ್ರಸ್ತಾಪವಾಗಿದ್ದ ಈ ಯೋಜನೆ ಸ್ಥಳೀಯರ ವಿರೋಧದಿಂದ ನಿಂತು ಹೋಗಿತ್ತು. ಅಂದಿನ ಪ್ರಧಾನಿ ವಾಜಪೇಯಿ ಸರ್ಕಾರ ರೂಪಿಸಿದ್ದ ರಾಷ್ಟ್ರದ ಪ್ರಮುಖ ನದಿಗಳ ಜೋಡಣೆ ಯೋಜನೆಯಲ್ಲಿ ಬೇಡ್ತಿ-ಅಘನಾಶಿನಿ-ವರದಾ ಸಂಗಮ ಸಂದಿಗ್ಧವೂ ಸೇರಿತ್ತು. ಕೇಂದ್ರ ಸರ್ಕಾರ 2002ರಲ್ಲಿ ಕಾರ್ಯಪಡೆ ರಚಿಸಿ ನದಿ ಪಾತ್ರಗಳ ಜೋಡಣೆಯ ಕ್ರಿಯಾ ಯೋಜನೆಗಳನ್ನು ಸಿದ್ಧಗೊಳಿಸಿತ್ತು. ಪ್ರಾಜೆಕ್ಟ್ ವೆಚ್ಚ, ಬಂಡವಾಳದ ಮೂಲ ಗುರುತಿಸಿ 2016ರ ಹೊತ್ತಿಗೆ ಕೈಗೆತ್ತಿಕೊಳ್ಳಲು ಸೂಚಿಸಿತ್ತು.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (ಎನ್‌ಡಬ್ಲ್ಯುಡಿಎ) ಬೇಡ್ತಿ-ಅಘನಾಶಿನಿ ಮತ್ತು ವರದಾ ನದಿಗಳನ್ನು ಸೇರಿಸುವ ವಿಸ್ತೃತ ಯೋಜನಾ ವರದಿ ತಯಾರು ಮಾಡಿತ್ತು. ಈ ವರದಿ ಪ್ರಕಾರ ಬೇಡ್ತಿಯ ಉಪನದಿಗಳಿಗೆ ಅಣೆಕಟ್ಟು ಕಟ್ಟಿ ವರದೆಯ ಪಾತ್ರದಲ್ಲಿ ಆ ನೀರು ತುಂಬಬೇಕು. ವರದೆ ಹರಿದು ತುಂಗಭದ್ರಾ ನದಿ ಸೇರುತ್ತದೆ. ಈ ನೀರಿಂದ ತುಂಗಭದ್ರ ಎಡದಂಡೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು ಯೋಜನೆಯ ಮೂಲ ಉದ್ದೇಶವಾಗಿತ್ತು. ಆದರದು ಶಿರಸಿ ಭಾಗದ ಜನರ ಪ್ರಬಲ ವಿರೋಧದಿಂದ ವಿಫಲವಾಗಿತ್ತು. ಈಗ ಅದೇ ಯೋಜನೆ ’ಕುಡಿಯುವ ನೀರಿನ’ ಹೆಸರಲ್ಲಿ ಮತ್ತೆ ಮುನ್ನಲೆಗೆ ಬಂದಿದೆ.

ರೂಪಾಂತರಗೊಂಡಿರುವ ಯೋಜನೆಯಂತೆ ಗದಗಿನ ಹಿರೆವಡ್ಡತ್ತಿಗೆ ಎಂಬಲ್ಲಿ ದೊಡ್ಡ ಡ್ಯಾಮ್ ಸ್ಥಾಪಿಸಿ ಬೇಡ್ತಿ-ವರದಾ-ಅಘನಾಶಿನಿ ನೀರನ್ನು ಸಂಗ್ರಹಿಸಲಾಗುತ್ತದೆ. ಶಿರಸಿಯ ವನಳ್ಳಿಯಲ್ಲಿ ಹರಿಯುವ ಪಟ್ಟಣದ ಹೊಳೆಗೆ ಮೆಣಸಗೋಡ ಎಂಬಲ್ಲಿ ಅಣೆಕಟ್ಟು ಕಟ್ಟುವುದು; ಶಾಲ್ಮಲಾ ನದಿಗೆ ಸೋಂದಾದಲ್ಲಿ ತಡೆಹಾಕುವುದು ಎರಡೂ ಜಲಾಶಯದ ನೀರನ್ನು 6.3 ಕಿಮೀ ಕಾಲುವೆ 2.2 ಕಿಮೀ ಸುರಂಗದ ಮೂಲಕ ವರದಾಕ್ಕೆ ಹರಿಸುವುದು. ಶಾಲ್ಮಲಾ ಮತ್ತು ಪಟ್ಟಣದ ಹೊಳೆಗಳು ಜಲಾಶಯದ ಹಿನ್ನೀರಿನ ಕೆಂಗ್ರೆ ಎಂಬಲ್ಲಿಂದ 8.03 ಕಿಮೀ ನೀರನ್ನು ಪಂಪ್ ಮಾಡಿ ನಂತರ 6.88 ಕಿಮೀ ಸುರಂಗದ ಮೂಲಕ ಶಿರಸಿಯ ಹಕ್ಕಲುಮನೆ ತನಕ ನೀರು ತರುವುದು. ಇಲ್ಲಿಂದ ಮುಂದೆ ಶಾಲ್ಮಲಾ ಮತ್ತು ಪಟ್ಟಣದ ಹೊಳೆ ನೀರು ಇಳಿಜಾರು ಕಾಲುವೆಯಲ್ಲಿ ಸರಾಗವಾಗಿ ಹರಿದು ಬನವಾಸಿ ಸಮೀಪದ ವರದಾ ನದಿ ಪಾತ್ರಕ್ಕೆ ಸೇರುತ್ತದೆ. ಈ ನೀರನ್ನು ಗದುಗಿನ ಹಿರೇವಡ್ಡತ್ತಿ ಜಲಾಗಾರದಲ್ಲಿ ಸಂಗ್ರಹಿಸಿ ಗದಗ-ರಾಯಚೂರು-ಕೊಪ್ಪಳದ ಜನರಿಗೆ ಒದಗಿಸಲಾಗುತ್ತದೆ ಎಂಬುದು ಎನ್‌ಡಬ್ಲ್ಯುಡಿಎ ನೀಲನಕ್ಷೆಯಲ್ಲಿ ಹೇಳಲಾಗಿದೆ.

ಎಡವಟ್ಟು ಪ್ರಾಜೆಕ್ಟ್

ಎನ್‌ಡಬ್ಲ್ಯುಡಿಎ ಹೇಳುವಷ್ಟು ಸರಳವಾಗಿಲ್ಲ ಯೋಜನೆ. ನೀರನ್ನು ಗದುಗಿನವರೆಗೆ ಎತ್ತಲು ಬರೋಬ್ಬರಿ 61 ಮೆಗಾವ್ಯಾಟ್ ದುಬಾರಿ ವಿದ್ಯುತ್ ಶಕ್ತಿ ಬೇಕಾಗುತ್ತದೆ. ಇಷ್ಟಾದರು ನೀರು ಗದಗ ಸೇರುತ್ತದೆಂಬ ಖಾತ್ರಿಯಿಲ್ಲ. ಪಶ್ಚಿಮಾಭಿಮುಖವಾಗಿ ಹರಿಯುವ ನದಿಯನ್ನು ಪೂರ್ವಾಭಿಮುಖವಾಗಿ ತಿರುಗಿಸುವುದು ಅಷ್ಟು ಸುಲಭವಲ್ಲ. ಬೇಸಿಗೆ ಆರಂಭದ ಫೆಬ್ರವರಿಯಲ್ಲೇ ಬೇಡ್ತಿ-ವರದಾ-ಅಘನಾಶಿನಿ ನದಿಗಳ ಪಾತ್ರ ಬತ್ತತೊಡಗುತ್ತದೆ. ಈ ನದಿಗಳು ಸರ್ವಋತು ಹರಿಯುವುದಿಲ್ಲ ಎಂಬುದು ಗೊತ್ತಿದ್ದೂ ಸರ್ಕಾರಿ ಪಂಡಿತರು ಬಯಲು ಸೀಮೆ ದಾಹ ತೀರಿಸುವ ನೆಪದಲ್ಲಿ ನದಿ ಜೋಡಿಸುತ್ತೇವೆಂದು ಹಲಬುವುದು ಕ್ರೂರ ವ್ಯಂಗ್ಯವೇ ಸರಿ! ನದಿ ಜೋಡಣೆ ಎಂತ ಕೆಟ್ಟ ಯೋಜನೆ ಎಂಬುದನ್ನು ಬೇಡ್ತಿ ನದಿ ಹತ್ತಿರವೇ ಇರುವ ಯಲ್ಲಾಪುರ ಪಟ್ಟಣಕ್ಕೆ ಕುಡಿಯುವ ನೀರೊದಗಿಸುವ 20ಕೋಟಿ ರೂ ಪ್ರಾಜೆಕ್ಟ್ ವಿಫಲವಾಗಿರುವುದು ಸಾರಿ ಸಾರಿ ಹೇಳುತ್ತಿದೆ!

2011ರಲ್ಲಿ ಈ ಯೋಜನೆ ಶುರುವಾಗುವಾಗ ವ್ಯರ್ಥ ಸಾಹಸವೆಂಬ ಆಕ್ಷೇಪ ವ್ಯಕ್ತವಾಗಿತ್ತು. ಆದರೂ ಹುಂಬ ಆಳುವವರು ಯೋಜನೆ ಕೈಗೆತ್ತಿಕೊಂಡಿದ್ದರು. ಬೇಡ್ತಿ ನೀರೆಂದರೆ ಹುಬ್ಬಳ್ಳಿ-ಧಾರವಾಡದ ತ್ಯಾಜ್ಯವೇ ಹೊರತು ಶುದ್ಧ ನೀರಲ್ಲವೆಂದು ಜನ ಬೊಬ್ಬೆ ಹಾಕಿದ್ದರು. ದೊಡ್ಡ ಮೊತ್ತದ ಹಣ ವ್ಯಯಿಸಿದರೂ ನದಿಯಲ್ಲೇ ನೀರಿಲ್ಲದ್ದರಿಂದ ಬೇಸಿಗೆಯಲ್ಲಿ ಯೋಜನೆ ಕೈಕೊಟ್ಟಿತ್ತು. ಕೆಲವೇ ಕೆಲವು ವಾರ್ಡ್‌ಗಳಿಗಷ್ಟೆ ನೀರು ಬಂದರೂ ಇದು ಕೊಳಕು ನೀರೆಂದು ಜನ ಬಳಸಲಿಲ್ಲ. ಐದು ವರ್ಷದಿಂದ ಯೋಜನೆ ಸ್ಥಗಿತಗೊಂಡಿದೆ. ಇದಕ್ಕಾಗಿ ನಿರ್ಮಿಸಿದ ಪ್ರತ್ಯೇಕ ವಿದ್ಯುತ್ ಲೈನ್ ಕಾಡಿನಲ್ಲಿ ಅವಶೇಷವಾಗಿದೆ. ಶುದ್ಧೀಕರಣ ಘಟಕ, ಜಾಕ್‌ವೆಟ್, ಯಂತ್ರಗಳೆಲ್ಲ ಕೆಲಸಕ್ಕೆ ಬಾರದೆ ಸರ್ಕಾರಿ ಪಂಡಿತರ ’ಮೇಧಾವಿತನ’ವನ್ನು ಹೇಳುತ್ತಿವೆ!

ಜೀವಜಾಲಕ್ಕೆ ಗಂಡಾಂತರ

ಧಾರವಾಡ ವಿವಿ ಬಳಿ ಹುಟ್ಟುವ ಬೇಡ್ತಿ ನದಿ ಯಲ್ಲಾಪುರ-ಅಂಕೋಲ ತಾಲ್ಲೂಕಲ್ಲಿ ಹರಿದು ಗಂಗಾವಳಿ ಎಂಬಲ್ಲಿ ಸಮುದ್ರ ಸೇರುತ್ತದೆ. ಘಟ್ಟದ ಮೇಲೆ ಬೇಡ್ತಿ ಎಂದು ಕರಾವಳಿಯಲ್ಲಿ ಗಂಗಾವಳಿ ಎಂದು ಕರೆಯಲ್ಪಡುವ ಈ ನದಿಯ ಹರಿವು ಕೇವಲ 152 ಕಿಮೀ. ಮಲೆನಾಡಿನ ರೈತ ತೋಟಿಗರಿಗೆ ಮತ್ತು ಕರಾವಳಿಯ ಮೀನುಗಾರ ರೈತರಿಗೆಲ್ಲ ಬೇಡ್ತಿ/ಗಂಗಾವಳಿ-ಅಘನಾಶಿನಿ-ವರದಾ ಜೀವ-ಜೀವದ ನದಿಗಳು ಸಾವಿರಾರು ಎಕರೆ ಭೂಮಿಗೆ ನೀರೊದಗಿಸುವ ಈ ನದಿಗಳು ಕರಾವಳಿಯಲ್ಲಿ ಸಾವಿರಾರು ಬೆಸ್ತ ಕುಟುಂಬಗಳ ಕುಲಕಸುಬಿಗೆ ಆಧಾರ. ಅಂತಾರಾಷ್ಟ್ರೀಯ ನಿಸರ್ಗ ಸಂರಕ್ಷಣಾ ಒಕ್ಕೂಟ ಬೇಡ್ತಿ ಕೊಳ್ಳವನ್ನು ಜೀವ ವೈವಿಧ್ಯದ ಸಕ್ರಿಯ ಪ್ರದೇಶವೆಂದು ಘೋಷಿಸಿದೆ. ಈ ಭಾಗವನ್ನು 1741 ರೀತಿಯ ಹೂಬಿಡುವ ಸಸ್ಯಗಳು ಮತ್ತು 420 ಪ್ರಭೇದದ ಪಕ್ಷಿಗಳು ಇನ್ನಿತರ ವನ್ಯಜೀವಿಗಳ ನೆಲೆಯೆಂದು ಗುರುತಿಸಲ್ಪಟ್ಟಿದೆ. ಕರಾವಳಿಯ ನದಿ-ಸಮುದ್ರ ಸಂಗಮದಲ್ಲಿ ಮೀನಿನ ಸಂತತಿ ಬೆಳೆಯುವುದೇ ನದಿ ತರುವ ಪೌಷ್ಠಿಕಾಂಶಗಳಿಂದ. 35ಕ್ಕೂ ಹೆಚ್ಚು ಪ್ರಾಣಿ ತಳಿ ಕಾರಿಡಾರ್ ಇದು.

ಬೇಡ್ತಿ-ವರದಾ ಜೋಡಣೆ ಅವೈಜ್ಞಾನಿಕವಷ್ಟೇ ಅಲ್ಲ ಹಣ ಪೋಲು ಮಾಡುವ ಯೋಜನೆ. ಇದರಿಂದ ಗದಗ ಭಾಗಕ್ಕೂ ನೀರು ಸಿಗುವುದು ಕೂಡ ನಿಜವಲ್ಲ. ಒಂದಿಷ್ಟು ಕಂಟ್ರಾಕ್ಟರ್, ಸಿಮೆಂಟ್, ಕಬ್ಬಿಣ, ಗ್ರಾನೈಟ್, ರಾಜಕಾರಣಿ ಲಾಬಿಗೆ ಕೊಪ್ಪರಿಗೆ ಕಾಸು ತಂದು ಕೊಡಬಹುದಷ್ಟೇ. ನದಿಯನ್ನೇ ನಂಬಿ ಕಟ್ಟಿಕೊಂಡಿರುವ ಊರು, ಮನೆ, ಮಠ, ತೋಟ-ಗದ್ದೆಯನ್ನಷ್ಟೇ ಅಲ್ಲ ವಿಶಿಷ್ಟ-ವೈವಿಧ್ಯಮಯ ಜೀವಜಾಲವನ್ನೇ ಈ ಯೋಜನೆ ಧ್ವಂಸ ಮಾಡುತ್ತದೆ! ನದಿಯ ಹೆಚ್ಚುವರಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ಮಂಡಿಸುವ ವಾದವೇ ಅನರ್ಥಕಾರಿ. ಹೆಚ್ಚುವರಿ ನೀರೆಂಬುದು ನದಿ ಪಾತ್ರದಲ್ಲಿರಲಾರದು. ಅದೆಲ್ಲಾ ನದಿ ಪಾತ್ರದುದ್ದಕ್ಕೂ ಬಳಕೆಯಾಗಿ ನಂತರ ಸಮುದ್ರ ಸೇರುವಾಗಲೂ ಜಲಚರಗಳಿಗೆ ಅನಿವಾರ್ಯ ಜೀವ ಜಲವಾಗಿರುತ್ತದೆ. ನದಿಯನ್ನು ಅನೈಸರ್ಗಿಕ ಬಲಪ್ರಯೋಗದಿಂದ ತಿರುಗಿಸಿದರೆ ಆಗುವ ಅನಾಹುತ ಒಂದೆರಡಲ್ಲ. ಕರಾವಳಿ ಕೃಷಿ ಭೂಮಿಗೆ ಸಮುದ್ರದ ಉಪ್ಪು ನೀರು ನುಗ್ಗುತ್ತದೆ; ಬಾವಿಯ ನೀರು ಕುಡಿಯಲು ಬಾರದಂತಾಗುತ್ತದೆ. ಅಂತರ್ಜಲ ಬತ್ತುತ್ತದೆ. ಯೋಜನೆಯಿಂದ ಉಪಯೋಗಕ್ಕಿಂತ ಹಾನಿಯೇ ಹೆಚ್ಚು!

ಬೇಡ್ತಿ ನದಿಯಿಂದ ಮುಂಡಗೋಡ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಗಂಗಾವಳಿ ನದಿಯಿಂದ ಅಂಕೋಲಾ-ಕಾರವಾರ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಸೀಬರ್ಡ್ ನೌಕಾನೆಲೆಗೆ ನೀರು ಸರಬರಾಜು ಮಾಡುವ ಚೆಕ್‌ಡ್ಯಾಮ್ ನಿರ್ಮಾಣವಾಗಲಿದೆ. ವರದೆಯ ಪಾತ್ರದಲ್ಲಿರುವ ತಿಗಣಿ ಸಮೀಪ ಡ್ಯಾಮ್ ಕಟ್ಟಿ ಕೃಷಿಗೆ ನೀರು ಪೂರೈಸಲಾಗುತ್ತಿದೆ. ಬನವಾಸಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ವರದೆಯ ನೀರು ಕುಡಿಯಲು ಸರಬರಾಜಾಗುತ್ತಿದೆ. ಮೂರು ನದಿ ಜೋಡಣೆಯಿಂದ ಇದೆಲ್ಲ ನಿಷ್ಪ್ರಯೋಜಕವಾಗಲಿದೆ! ಬಲಾತ್ಕಾರವಾಗಿ ನದಿಯ ದಿಕ್ಕು ಬದಲಿಸುವುದಿದೆಯಲ್ಲ ಅದು, ಅವೈಜ್ಞಾನಿಕ, ಅನೈಸರ್ಗಿಕವಷ್ಟೇ ಅಲ್ಲ, ಅನಾಹುತಕಾರಿ ಮತ್ತು ಅಕ್ಷಮ್ಯವೂ ಹೌದು.

ಹೋರಾಟಕ್ಕೆ ಸಿದ್ಧತೆ

ಹಿಂದೆ ಈ ನದಿ ಸಂಗಮ ಯೋಜನೆ ವಿರೋಧಿಸಿ ರಾಜಕೀಯ ಮೈಲೇಜು ಪಡೆದಿದ್ದ ಬಿಜೆಪಿ ಈಗ ಅಧಿಕಾರದಲ್ಲಿದೆ. ಅಂದು ಪರಿಸರ ಗುತ್ತಿಗೆ ಪಡೆದಂತೆ ಹಾರಾಡುತ್ತಿದ್ದವರು ಇವತ್ತು ಆಯಕಟ್ಟಿನ ಅಧಿಕಾರದಲ್ಲಿದ್ದಾರೆ. ಹಾಗಾಗಿ ಅವರ ವಿರೋಧದ ಧ್ವನಿ ಅಡಗಿದೆ; ಬೂಟಾಟಿಕೆ ಸಾಬೀತಾಗಿದೆ. ದೇಶದ ಎಲ್ಲಿಯೂ ನದಿ ಜೋಡಣೆ ಯೋಜನೆಗಳು ನಿಯಮಿತ ಸಮಯದಲ್ಲಿ ನಿರೀಕ್ಷಿತ ರೀತಿಯಲ್ಲಿ ಅನುಷ್ಠಾನವಾದದ್ದೇ ಇಲ್ಲ! ಕಳೆದ 20 ವರ್ಷದಲ್ಲಿ ಆದ್ಯತೆಯಲ್ಲಿ ಕೈಗೆತ್ತಿಕೊಂಡ 30 ನದಿ ಜೋಡಣೆ ಪ್ರಾಜೆಕ್ಟ್‌ಗಳು ಒಂದೇ ಒಂದು ಕಾರ್ಯಗತವಾಗಿಲ್ಲ. ಎತ್ತಿನಹೊಳೆಯಿಂದ ಕೋಲಾರಕ್ಕೆ 1 ಟಿಎಂಸಿ ನೀರು ಕೊಂಡೊಯ್ಯುವ 24 ಸಾವಿರ ಕೋಟಿ ಯೋಜನೆ ಆಧ್ವಾನವಾಗಿದೆ!

ಇದೆಲ್ಲ ಗೊತ್ತಿದ್ದೂ ಬೇಡ್ತಿ-ವರದಾ-ಅಘನಾಶಿನಿ ನದಿ ಜೋಡಿಸುವ ಹುಚ್ಚು ಪ್ರಾಜೆಕ್ಟ್‌ಗೆ ಸರ್ಕಾರಿ ಮಂದಿ ತರಾತುರಿಯ ಸಿದ್ಧತೆಯಲ್ಲಿದ್ದಾರೆ. ಪ್ರಕೃತಿ ನಿಯಮ ವೈಜ್ಞಾನಿಕ ನಿಯಮದ ವಿರುದ್ಧ ನದಿ ಜೋಡಣೆ ವ್ಯರ್ಥ ಸಾಹಸವೆಂದು ಆಳುವವರಿಗೆ ಅರ್ಥ ಮಾಡಿಸುವರ್‍ಯಾರು?


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...