Homeಮುಖಪುಟಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

- Advertisement -
- Advertisement -

ಈಗಾಗಲೆ ಪಂಚರಾಜ್ಯ ವಿಧಾನಸಭಾ ಚುನಾವಣೆಗಳು ಪ್ರಾರಂಭವಾಗಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಎರಡನೆ ಹಂತದ ಚುನಾವಣೆ ನಡೆಯುತ್ತಿದೆ. ದೇಶವೆ ಕೂತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದ ಅತ್ಯಂತ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ‘ನಂದಿಗ್ರಾಮ’ದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ವೇಳೆ ಅಲ್ಲಿ ಆಡಳಿತರೂಢ ಟಿಎಂಸಿ, ಹೊಸದಾಗಿ ಎದ್ದು ನಿಲ್ಲಲು ಪ್ರಯತ್ನಿಸುತ್ತಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟಗಳ ನಡುವೆ ಸ್ಪರ್ಧೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟದ ಜೊತೆ ಸೇರದೆ ಎಡಪಕ್ಷವಾದ ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ-ಕಮ್ಯುನಿಷ್ಟ್ ‌(SUCI-C) ಪಕ್ಷವು ಏಕಾಂಗಿ ಹೋರಾಟ ನಡೆಸುತ್ತಿದೆ. ಪಕ್ಷವು ಪ್ರಸ್ತುತ ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ ಒಟ್ಟು 258 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದು ದೇಶದ ಪ್ರಮುಖ ಎಡಪಕ್ಷಗಳಾಗಿರುವ ಸಿಪಿಐಎಂ ಮತ್ತು ಸಿಪಿಐಗಿಂತಲೂ ಹೆಚ್ಚಾಗಿದೆ. ಸಿಪಿಐಎಂ 227 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐ 50 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

SUCI-C ಪಕ್ಷವು ಪಶ್ಚಿಮ ಬಂಗಾಳದಲ್ಲಿ ಒಟ್ಟು 193 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ 27 ಮತ್ತು ಅಸ್ಸಾಂನಲ್ಲಿ 29 ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸುತ್ತಿದೆ. ಈ ಎಲ್ಲಾ ಕ್ಷೇತ್ರದಲ್ಲಿ ಇತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ಏಪ್ರಿಲ್ 1: ರಾಷ್ಟ್ರೀಯ ಜುಮ್ಲಾ ದಿನವನ್ನಾಗಿ ಆಚರಿಸಿದ ನೆಟ್ಟಿಗರು – #NationalJumlaDay ಟ್ರೆಂಡಿಂಗ್‌!

ಪಕ್ಷವು 2019 ರ ಸಂಸತ್ ಚುನಾವಣೆಯಲ್ಲಿ ಕೂಡಾ ಏಕಾಂಗಿಯಾಗಿ ಹೋರಾಟ ನಡೆಸಿತ್ತು. ಒಟ್ಟು 23 ರಾಜ್ಯಗಳಲ್ಲಿ 119 ಸ್ಥಾನಗಳಲ್ಲಿ ಹೋರಾಟ ಮಾಡಿತ್ತು. ಪಶ್ಚಿಮ ಬಂಗಾಳ ರಾಜ್ಯವೊಂದರಲ್ಲೇ ಪಕ್ಷದ 42 ಅಭ್ಯರ್ಥಿಗಳು ಇದ್ದರು. ಕೇರಳದಲ್ಲಿ 9, ಬಿಹಾರ, ಒರಿಸ್ಸಾ ಮತ್ತು ಕರ್ನಾಟಕದಲ್ಲಿ ತಲಾ 8, ಅಂಡಮಾನ್ ಮತ್ತು ಪಾಂಡಿಚೆರಿಯಲ್ಲಿ ತಲಾ ಒಬ್ಬೊಬ್ಬರು ಅಭ್ಯರ್ಥಿಗಳನ್ನು ಪಕ್ಷವು ಸ್ಪರ್ಧೆಗೆ ಇಳಿಸಿತ್ತು.

SUCI-C ದೇಶದಾದ್ಯಂತ 27 ರಾಜ್ಯಗಳಲ್ಲಿ ಘಟಕಗಳನ್ನು ಹೊಂದಿದೆಯಾದರೂ ಪಶ್ಚಿಮ ಬಂಗಾಳ, ಅಸ್ಸಾಂ, ಒರಿಸ್ಸಾ, ಜಾರ್ಖಂಡ್, ಹರಿಯಾಣ ಮತ್ತು ಕರ್ನಾಟಕದಲ್ಲಿ ಗಟ್ಟಿಯಾದ ಅಸ್ತಿತ್ವವನ್ನು ಹೊಂದಿದೆ. 2009 ರಲ್ಲಿ ಪಶ್ಚಿಮ ಬಂಗಾಳದಲ್ಲಿ SUCI-C ಒಬ್ಬ ಸಂಸದನನ್ನು ಹೊಂದಿತ್ತು.

ಪಕ್ಷದ ಪ್ರಧಾನ ಕಚೇರಿ ಕೋಲ್ಕತಾದಲ್ಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರೋವಾಶ್ ಘೋಷ್ ಕಾರ್ಯನಿರ್ವಹಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ನಂದಿಗ್ರಾಮ ಚಳುವಳಿಯಲ್ಲಿ ಅಂದಿನ ಎಡಪಕ್ಷ ಸರ್ಕಾರದ ವಿರುದ್ದ ಪ್ರಬಲ ಹೋರಾಟವನ್ನು SUCI-C ಕಟ್ಟಿತ್ತು. ಆ ಹೊತ್ತಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಜೊತೆ ಸೇರಿಕೊಂಡಿತ್ತು. ಆದರೆ ನಂತರ ಮಮತಾ ಬ್ಯಾನರ್ಜಿ ಅವರ ನೀತಿಗಳಿಂದ ಬೇಸೆತ್ತು ಅವರ ಸಖ್ಯದಿಂದ ದೂರ ಸರಿದು ತಮ್ಮದೆ ಆದ ಹೋರಾಟವನ್ನು ಕಟ್ಟುತ್ತಾ ಬರುತ್ತಿದೆ.

ಇದನ್ನೂ ಓದಿ: ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ SUCI-C ಪಕ್ಷ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಉಮಾ ಅವರು, “ಪ್ರಸ್ತುತ ಎಲ್ಲಾ ಪಕ್ಷಗಳು ಬಂಡವಾಳಶಾಹಿಗಳ ಪರವಾಗಿ ಮಾತ್ರವೆ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಇದಕ್ಕೆ ದಾರಿ ಮಾಡಿಕೊಟ್ಟರೂ ಬಿಜೆಪಿ ಅವುಗಳನ್ನೂ ಮೀರಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಸಿಂಗೂರು, ನಂದಿಗ್ರಾಮ ಹೋರಾಟದ ಸಮಯದಲ್ಲಿ ಬಂಡವಾಳಶಾಹಿಗಳಿಗೆ ಕೆಂಪುಹಾಸು ಹಾಸಿದ್ದೇ ಸಿಪಿಐಎಂ ನೇತೃತ್ವದ ಎಡಪಂಥೀಯ ಸರ್ಕಾರವಾಗಿದೆ. ನಮ್ಮ ವಿರೋಧದ ನಡುವೆಯ ಪೊಲೀಸರನ್ನು ಕಳುಹಿಸಿ ಸರ್ಕಾರದ ಕುಮ್ಮಕ್ಕಿನಿಂದ ರೈತರ ಮೇಲೆ ಹಲ್ಲೆ ನಡೆದಿದೆ” ಎಂದು ಆರೋಪಿಸಿದ್ದಾರೆ.

“ಈ ಹೊತ್ತಲ್ಲಿ ನಾವು ಜನರ ನಡುವೆ ನಿಂತು ಹೋರಾಟ ಕಟ್ಟಿದ್ದೇವೆ. ಈ ಹೋರಾಟದ ಕ್ರೆಡಿಟನ್ನು ಪ್ರಸ್ತುತ ಯಾರು ಯಾರೋ ಪಡೆದುಕೊಳ್ಳುತ್ತಿದ್ದಾರೆ. ಆ ಹೊತ್ತಲ್ಲಿ ತೃಣಮೂಲ ಪಕ್ಷವು ನಮ್ಮ ಜೊತೆ ಸೇರಿ ಸೀಟು ಹೊಂದಾಣಿಕೆ ಮಾಡಿಕೊಂಡಿತ್ತು. ಆಮೇಲೆ ಟಿಎಂಸಿ ಯಾವುದೇ ಜನಪರ ಕೆಲಸ ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡ ಪರಿಣಾಮ ಎಲ್ಲರಿಂದಲೂ ದೂರವಿದ್ದು ಹೋರಾಟ ನಿರತರಾಗಿದ್ದೇವೆ” ಎಂದು ಕೆ. ಉಮಾ ತಿಳಿಸಿದ್ದಾರೆ.

“ಅಧಿಕಾರ ಬಲ ಮತ್ತು ಹಣ ಬಲದಿಂದ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ನಮ್ಮ ಮೌಲ್ಯಾಧಾರಿತ ರಾಜಕೀಯವು ಅದಕ್ಕೆ ಸಮನಾಗಿ ಸ್ಪರ್ಧಿಸಲು ಆಗುತ್ತಿಲ್ಲ ಎಂಬುವುದು ನಿಜವಾಗಿದೆ. ಆದರೆ ಈ ಭಾರಿ ಎಲ್ಲಾ ಕಡೆಯಿಂದಲೂ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಹಾಗಾಗಿ ಹೆಚ್ಚಿನ ಕಡೆಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ” ಎಂದು ಅವರು ಹೇಳಿದ್ದಾರೆ

ಇದನ್ನೂ ಓದಿ: 66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...