Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...