Homeಕರೋನಾ ತಲ್ಲಣಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು "ಪ್ರಚೋದಿಸಿದರು" ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕಿತ ರೋಗಿಯೊಬ್ಬರು ಹಲವಾರು ಆಸ್ಪತ್ರೆಗಳನ್ನುಅಲೆದು ಎಲ್ಲಿಯೂ ಬೆಡ್ ಸಿಕ್ಕಿಲ್ಲ ಎಂದು ಆರೋಪಿಸಿ, ಮಹಾರಾಷ್ಟ್ರದ ನಾಸಿಕ್‌ನ ಮಹಾನಗರ ಪಾಲಿಕೆಯ ಹೊರಗೆ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆಗೆ ಕುಳಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ರೋಗಿಯು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

38 ವರ್ಷದ ಬಾಬಾಸಾಹೇಬ್ ಕೋಲ್ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆದರೆ ಚಿಕಿತ್ಸೆಗೆ ಯಾವ ಆಸ್ಪತ್ರೆಯೂ ಸ್ಪಂದಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ಹೊರಗೆ ನಿನ್ನೆ ಸಂಜೆ ಸಿಲಿಂಡರ್‌ಗೆ ಸಂಪರ್ಕ ಹೊಂದಿದ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆ ನಡೆಸಿದ್ದರು.

ಸರಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದ ನಂತರ, ಮಹಾನಗರ ಪಾಲಿಕೆಯ ಆಂಬ್ಯುಲೆನ್ಸ್ ಅವರನ್ನು ಪುರಸಭೆಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಮಧ್ಯರಾತ್ರಿ  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮೃತ ವ್ಯಕ್ತಿಯ ಕುಟುಂಬದ ಪ್ರಕಾರ, ಮಧ್ಯರಾತ್ರಿಯಲ್ಲಿ ಅವರ ಆಕ್ಸಿಜನ್ ಲೆವೆಲ್ ಮಟ್ಟವು ಶೇಕಡಾ 40 ಕ್ಕೆ ತಲುಪಿತ್ತು. ಸಾಮಾನ್ಯವಾಗಿ ಆಕ್ಸಿಜನ್ ಲೆವೆಲ್ ಶೇಕಡಾ 95 ಅಥವಾ ಅದಕ್ಕಿಂತ ಹೆಚ್ಚಿನದಾಗಿರುತ್ತದೆ. ಆದರೆ, ರಾತ್ರಿ 1 ಗಂಟೆ ಸುಮಾರಿಗೆ ಬಾಬಾಸಾಹೇಬ್ ನಿಧನರಾದರು ಎಂದು ತಿಳಿಸಿದ್ದಾರೆ.

“ಎರಡು-ಮೂರು ದಿನಗಳ ಹಿಂದೆ ಅವರನ್ನು ಬೈಟ್ಕೊ (ಆಸ್ಪತ್ರೆ) ಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಮತ್ತೊಂದು ಆಸ್ಪತ್ರೆಗೆ, ಅಲ್ಲಿಂದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋದೆವು. ವೈದ್ಯಕೀಯ ಕಾಲೇಜಿನಲ್ಲಿ ಬೆಡ್ ಇಲ್ಲ ಎಂದು ಹೇಳಿದರು. ನಾವು ಬಹಳಷ್ಟು ಆಸ್ಪತ್ರೆಗಳಿಗೆ ಹೋಗಿದೆವು. ಯಾರೂ ಅವರನ್ನು ದಾಖಲಿಸಿಕೊಳ್ಳಲಿಲ್ಲ. ನಂತರ ನಾವು ಸಿವಿಲ್ ಆಸ್ಪತ್ರೆಗೆ ಹಿಂತಿರುಗಿ ಅವರಿಗೆ ಆಕ್ಸಿಜನ್ ಮಾಸ್ಕ್‌ ತೆಗೆದುಕೊಂಡೆವು. ಯಾವ ಆಸ್ಪತ್ರೆಯವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಮೃತರ ಪತ್ನಿ ಸ್ಥಳೀಯ ಪತ್ರಕರ್ತರಿಗೆ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು “ಪ್ರಚೋದಿಸಿದರು” ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರವು ಅತಿಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿದ್ದು, ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ರಾಜ್ಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳ ವ್ಯವಸ್ಥೆ ಕಡಿಮೆಯಾಗುವ ಸಂಭವವಿದೆ ಎಂದು ಸರ್ಕಾರ ತಿಳಿಸಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...