Homeಮುಖಪುಟರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯದ ಎಲ್ಲ ನಿವಾಸಿಗಳಿಗೆ ಉಚಿತ ಆರೋಗ್ಯ ವಿಮೆ ನೀಡಿದ ದೇಶದ ಮೊದಲ ರಾಜ್ಯ ಎಂದು ರಾಜಸ್ಥಾನ ಸರ್ಕಾರ ಘೋಷಿಸಿಕೊಂಡಿದೆ. ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ಈ ಘೋಷಣೆ ಎಷ್ಟರಮಟ್ಟಿಗೆ ಜನಸಾಮಾನ್ಯರ ಉಪಯೋಗಕ್ಕೆ ಬರುತ್ತದೆ ಎಂದು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ‘ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ತ್ಯ ಭೀಮಾ ಯೋಜನೆ’ ಅಡಿಯಲ್ಲಿ ನೋಂದಣಿ ಪ್ರಾರಂಭಿದ್ದು, ಇದರ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬವು ವೈದ್ಯಕೀಯ ವೆಚ್ಚಗಳಿಗಾಗಿ ವರ್ಷಕ್ಕೆ ಐದು ಲಕ್ಷ ರೂಪಾಯಿಗಳನ್ನು ಪಡೆಯಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಯೋಜನೆಯ ಪ್ರಾರಂಭದ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. “ರಾಜಸ್ಥಾನ ಸರ್ಕಾರದ ಎಲ್ಲರಿಗೂ ನಗದುರಹಿತ ಚಿಕಿತ್ಸೆಗಾಗಿ ನೋಂದಣಿ ಆರಂಭಿಸಿದೆ. ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಭೀಮಾ ಯೋಜನೆ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಇದು ವೈದ್ಯಕೀಯ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿರುವ ಅತಿದೊಡ್ಡ ಆರೋಗ್ಯ ಯೋಜನೆಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ಪಡೆದ ದೇಶದ ಮೊದಲ ರಾಜ್ಯವಾಗಿದೆ. ಪ್ರತಿ ಕುಟುಂಬವು ಪ್ರತಿ ವರ್ಷ 5 ಲಕ್ಷ ರೂ. ಆರೋಗ್ಯ ವಿಮೆಯನ್ನು ಪಡೆಯಬಹುದು. ನೋಂದಾಣಿ ಮಾಡಿಕೊಂಡು, ನಗದುರಹಿತ ಚಿಕಿತ್ಸೆಯನ್ನು ಪಡೆಯಬಹುದು” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆರೋಗ್ಯ ವಿಮಾ ಯೋಜನೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಅವರು ರಾಜ್ಯ ಬಜೆಟ್ 2021-22ರಲ್ಲಿ ಘೋಷಿಸಿದ್ದಾರೆ.

ಇತ್ತ ಕರ್ನಾಟಕದಲ್ಲಿ 2018 ರ ಫ್ರೆಬ್ರವರಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ರಮೇಶ್ ಕುಮಾರ್‌, ಆರೋಗ್ಯ ಕರ್ನಾಟಕ (ಯೂನಿರ್ವಸಲ್ ಹೆಲ್ತ್ ಕಾರ್ಡ್) ಯೋಜನೆ ಘೋಷಿಸಿದ್ದರು. ಮಾರ್ಚ್‌‌ನಲ್ಲಿ ಈ ಯೋಜನೆಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದರು.

ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಅಡಿಯಲ್ಲಿ, ಚಿಕಿತ್ಸೆ ಆಧಾರದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಕನಿಷ್ಠ ಐದು ಸದಸ್ಯರ ಒಂದು ಕುಟುಂಬಕ್ಕೆ ವರ್ಷಕ್ಕೆ 30,000 ರೂಪಾಯಿಯಿಂದ 2 ಲಕ್ಷದವರೆಗಿನ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಯಶಸ್ವಿನಿ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ, ವಾಜಪೇಯಿ ಆರೋಗ್ಯಶ್ರೀ, ರಾಜೀವ್‌ ಆರೋಗ್ಯ ಭಾಗ್ಯ, ಹಿರಿಯ ನಾಗರಿಕರಿಗೆ ಆರ್‌ಎಸ್‌ಬಿವೈ ಯೋಜನೆ ಒಳಗೊಂಡಂತೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ, ಮುಖ್ಯಮಂತ್ರಿ ಸಾಂತ್ವನ ಹರೀಶ್‌ ಯೋಜನೆ ಇವುಗಳೆಲ್ಲಾ ಈ ಹೆಲ್ತ್ ಕಾರ್ಡ ಅಡಿಯಲ್ಲಿ ವಿಲಿನವಾಗಿದ್ದವು. ಆದರೆ, ಸಾಕಷ್ಟು ಜನರಿಗೆ ಈ ಬಗ್ಗೆ ಮಾಹಿತಿಯಿಲ್ಲ. ಯೋಜನೆಯನ್ನು ಅನುಮೋದಿಸುವ ಆಸ್ಪತ್ರೆಗಳು ಈ ಕುರಿತು ರೋಗಿಗೆ ತಿಳಿಸಿದರೇ ಮಾತ್ರ ಯೋಜನೆಯ ಫಲಾನುಭವಿಯಾಗಲು ಸಾಧ್ಯ.

ಆದರೆ ನಂತರದ ವರ್ಷಗಳಲ್ಲಿಯೂ ಆರೋಗ್ಯ ಕರ್ನಾಟಕ ಯೋಜನೆಯೂ ಅಂತಹ ಸದ್ದು ಮಾಡಿಲ್ಲ. ಈಗ ರಾಜಸ್ಥಾನದಲ್ಲಿಯೂ ಇಂತಹ ಒಂದು ಯೋಜನೆ ಘೋಷಣೆಯಾಗಿದ್ದು, ಇದೊಂದು ಚುನಾವಣಾ ತಂತ್ರವಾಗಿರದೇ ಜನರಿಗೆ ಆರೋಗ್ಯ ಸೌಲಭ್ಯ ನೀಡುವ  ಯೋಜನೆಯಾಗಲಿ ಎಂಬುದು ಸಾರ್ವಜನಿಕರ ಆಶಯ.


ಇದನ್ನೂ ಓದಿ: ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...