Homeಮುಖಪುಟರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯದ ಎಲ್ಲ ನಿವಾಸಿಗಳಿಗೆ ಉಚಿತ ಆರೋಗ್ಯ ವಿಮೆ ನೀಡಿದ ದೇಶದ ಮೊದಲ ರಾಜ್ಯ ಎಂದು ರಾಜಸ್ಥಾನ ಸರ್ಕಾರ ಘೋಷಿಸಿಕೊಂಡಿದೆ. ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ಈ ಘೋಷಣೆ ಎಷ್ಟರಮಟ್ಟಿಗೆ ಜನಸಾಮಾನ್ಯರ ಉಪಯೋಗಕ್ಕೆ ಬರುತ್ತದೆ ಎಂದು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ‘ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ತ್ಯ ಭೀಮಾ ಯೋಜನೆ’ ಅಡಿಯಲ್ಲಿ ನೋಂದಣಿ ಪ್ರಾರಂಭಿದ್ದು, ಇದರ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬವು ವೈದ್ಯಕೀಯ ವೆಚ್ಚಗಳಿಗಾಗಿ ವರ್ಷಕ್ಕೆ ಐದು ಲಕ್ಷ ರೂಪಾಯಿಗಳನ್ನು ಪಡೆಯಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಯೋಜನೆಯ ಪ್ರಾರಂಭದ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. “ರಾಜಸ್ಥಾನ ಸರ್ಕಾರದ ಎಲ್ಲರಿಗೂ ನಗದುರಹಿತ ಚಿಕಿತ್ಸೆಗಾಗಿ ನೋಂದಣಿ ಆರಂಭಿಸಿದೆ. ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಭೀಮಾ ಯೋಜನೆ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಇದು ವೈದ್ಯಕೀಯ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿರುವ ಅತಿದೊಡ್ಡ ಆರೋಗ್ಯ ಯೋಜನೆಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ಪಡೆದ ದೇಶದ ಮೊದಲ ರಾಜ್ಯವಾಗಿದೆ. ಪ್ರತಿ ಕುಟುಂಬವು ಪ್ರತಿ ವರ್ಷ 5 ಲಕ್ಷ ರೂ. ಆರೋಗ್ಯ ವಿಮೆಯನ್ನು ಪಡೆಯಬಹುದು. ನೋಂದಾಣಿ ಮಾಡಿಕೊಂಡು, ನಗದುರಹಿತ ಚಿಕಿತ್ಸೆಯನ್ನು ಪಡೆಯಬಹುದು” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆರೋಗ್ಯ ವಿಮಾ ಯೋಜನೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಅವರು ರಾಜ್ಯ ಬಜೆಟ್ 2021-22ರಲ್ಲಿ ಘೋಷಿಸಿದ್ದಾರೆ.

ಇತ್ತ ಕರ್ನಾಟಕದಲ್ಲಿ 2018 ರ ಫ್ರೆಬ್ರವರಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ರಮೇಶ್ ಕುಮಾರ್‌, ಆರೋಗ್ಯ ಕರ್ನಾಟಕ (ಯೂನಿರ್ವಸಲ್ ಹೆಲ್ತ್ ಕಾರ್ಡ್) ಯೋಜನೆ ಘೋಷಿಸಿದ್ದರು. ಮಾರ್ಚ್‌‌ನಲ್ಲಿ ಈ ಯೋಜನೆಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದರು.

ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಅಡಿಯಲ್ಲಿ, ಚಿಕಿತ್ಸೆ ಆಧಾರದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಕನಿಷ್ಠ ಐದು ಸದಸ್ಯರ ಒಂದು ಕುಟುಂಬಕ್ಕೆ ವರ್ಷಕ್ಕೆ 30,000 ರೂಪಾಯಿಯಿಂದ 2 ಲಕ್ಷದವರೆಗಿನ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಯಶಸ್ವಿನಿ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ, ವಾಜಪೇಯಿ ಆರೋಗ್ಯಶ್ರೀ, ರಾಜೀವ್‌ ಆರೋಗ್ಯ ಭಾಗ್ಯ, ಹಿರಿಯ ನಾಗರಿಕರಿಗೆ ಆರ್‌ಎಸ್‌ಬಿವೈ ಯೋಜನೆ ಒಳಗೊಂಡಂತೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ, ಮುಖ್ಯಮಂತ್ರಿ ಸಾಂತ್ವನ ಹರೀಶ್‌ ಯೋಜನೆ ಇವುಗಳೆಲ್ಲಾ ಈ ಹೆಲ್ತ್ ಕಾರ್ಡ ಅಡಿಯಲ್ಲಿ ವಿಲಿನವಾಗಿದ್ದವು. ಆದರೆ, ಸಾಕಷ್ಟು ಜನರಿಗೆ ಈ ಬಗ್ಗೆ ಮಾಹಿತಿಯಿಲ್ಲ. ಯೋಜನೆಯನ್ನು ಅನುಮೋದಿಸುವ ಆಸ್ಪತ್ರೆಗಳು ಈ ಕುರಿತು ರೋಗಿಗೆ ತಿಳಿಸಿದರೇ ಮಾತ್ರ ಯೋಜನೆಯ ಫಲಾನುಭವಿಯಾಗಲು ಸಾಧ್ಯ.

ಆದರೆ ನಂತರದ ವರ್ಷಗಳಲ್ಲಿಯೂ ಆರೋಗ್ಯ ಕರ್ನಾಟಕ ಯೋಜನೆಯೂ ಅಂತಹ ಸದ್ದು ಮಾಡಿಲ್ಲ. ಈಗ ರಾಜಸ್ಥಾನದಲ್ಲಿಯೂ ಇಂತಹ ಒಂದು ಯೋಜನೆ ಘೋಷಣೆಯಾಗಿದ್ದು, ಇದೊಂದು ಚುನಾವಣಾ ತಂತ್ರವಾಗಿರದೇ ಜನರಿಗೆ ಆರೋಗ್ಯ ಸೌಲಭ್ಯ ನೀಡುವ  ಯೋಜನೆಯಾಗಲಿ ಎಂಬುದು ಸಾರ್ವಜನಿಕರ ಆಶಯ.


ಇದನ್ನೂ ಓದಿ: ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....