Homeಮುಖಪುಟಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಾರೆ!

ಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಾರೆ!

- Advertisement -
- Advertisement -

‘ಗೆಲ್ಲಲು ನನಗೆ ಸಹಾಯ ಮಾಡಿ, 2022 ಕತಾರ್ ಫಿಫಾ ವಿಶ್ವಕಪ್‌ಗೆ ಟಿಕೆಟ್ ಪಡೆಯಿರಿ’ ಇದು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಯೊಬ್ಬರ ಪ್ರಣಾಳಿಕೆ. ರಾಜ್ಯದ ಕುಂಡೊಟ್ಟಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಡಪಕ್ಷ ಬೆಂಬಲಿತ ಪಕ್ಷೇತರ ಅಭ್ಯರ್ಥಿ‌ ಕಟ್ಟಪ್ಪುರುತಿ ಸುಲೈಮಾನ್‌ ಹಾಜಿ ಅವರು ಮೇಲಿನ ಭರವಸೆಯನ್ನು ಯುವಕರಿಗೆ ನೀಡಿದ್ದಾರೆ.

ಕೇರಳದಲ್ಲಿ ಫುಟ್ಬಾಲ್ ಜನಪ್ರಿಯ ಕ್ರೀಡೆಯಾಗಿದೆ. ಯುವಕರನ್ನು ಸೆಳೆಯುವ ಉದ್ದೇಶದಿಂದ ಸುಲೈಮಾನ್‌ ಹಾಜಿ ಈ ಭರವಸೆ ನೀಡಿದ್ದಾರೆ.

“ಒಂದು ವೇಳೆ ನಾನು ಚುನಾಯಿತರಾದರೆ, ‘ಶಾಸಕ ಟ್ರೋಫಿ’ ಪಂದ್ಯಾವಳಿಯನ್ನು ನಡೆಸುತ್ತೇನೆ. ಈ ಪಂದ್ಯಾವಳಿಯಲ್ಲಿ ಕ್ಷೇತ್ರದ ವ್ಯಾಪ್ತಿಗೆ ಬರುವ ಆರು ಪಂಚಾಯಿತಿಗಳು ಮತ್ತು ಒಂದು ಪುರಸಭೆಯಲ್ಲಿನ ಫುಟ್ಬಾಲ್ ಕ್ಲಬ್‌ಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ. ವಿಜೇತ 11 ಸದಸ್ಯರ ತಂಡವು 2022 ರ ಫಿಫಾ ವಿಶ್ವಕಪ್‌ನಲ್ಲಿ ಕತಾರ್‌ಗೆ ತೆರಳಲು ಮತ್ತು ಪಂದ್ಯವನ್ನು ವೀಕ್ಷಿಸಲು ಅವಕಾಶವನ್ನು ಪಡೆಯಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಈ ಪ್ರವಾಸದ ಎಲ್ಲಾ ವೆಚ್ಚವನ್ನು ಭರಿಸುವುದಾಗಿ ಸುಲೈಮಾನ್‌ ಹಾಜಿ ಹೇಳಿದ್ದಾರೆ. ಅವರು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ, ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಕ್ಷೇತ್ರದಲ್ಲಿ ಮಿನಿ ಸಿವಿಲ್ ಸ್ಟೇಷನ್ ಸ್ಥಾಪಿಸುವುದಾಗಿ ಹೇಳಿದ್ದಾರೆ.

ತರಕಾರಿ ಮಾರುಕಟ್ಟೆ, ಹೈಟೆಕ್ ಆಸ್ಪತ್ರೆಗಳು, ಕ್ಯಾನ್ಸರ್ ಮತ್ತು ಡಯಾಲಿಸಿಸ್ ಕೇಂದ್ರಗಳು, ಕ್ರೀಡಾಂಗಣಗಳು ಮತ್ತು ಮಕ್ಕಳ ಉದ್ಯಾನವನಗಳನ್ನು ನಿರ್ಮಿಸುವುದಾಗಿ ಅವರು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. “ನಾನು ಕೊಂಡೊಟ್ಟಿಯ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇನೆ. ರಸ್ತೆ ಸ್ಥಿತಿ ಮತ್ತು ಕುಡಿಯುವ ನೀರಿನ ಲಭ್ಯತೆಯಂತಹ ಸಮಸ್ಯೆಗಳನ್ನು ಸಹ ಪರಿಹರಿಸಲಾಗುವುದು ”ಎಂದು ಅವರು ಹೇಳಿದ್ದಾರೆ.

ಸುಲೈಮಾನ್‌ ಹಾಜಿ ಅವರ ಪ್ರಣಾಳಿಕೆಯ ಹೊರತಾಗಿಯು ಕುಂಡೊಟ್ಟಿ ಮುಸ್ಲಿಂ ಲೀಗ್‌ ಭದ್ರಕೋಟೆಯಾಗಿದ್ದು, ಅವರು ಗೆಲ್ಲುವುದು ಕಠಿಣ ಕಾರ್ಯವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಅಲ್ಲಿ ಪ್ರಸ್ತುತ ಶಾಸಕರಾಗಿರುವ ಟಿ.ವಿ. ಇಬ್ರಾಹಿಂ ಮತ್ತೇ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಕೆಲವು ವಾರಗಳ ಹಿಂದೆಯೆ ನಾಮಪತ್ರ ಸಲ್ಲಿಸಿದ್ದಾರೆ. ಅವರು ಕೂಡ ಕ್ಷೇತ್ರದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಸುವುದು ಸೇರಿದಂತೆ ಹಲವು ವಿಷಯಗಳನ್ನು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...