Homeಮುಖಪುಟಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

- Advertisement -
- Advertisement -

ಅಸ್ಸಾಂ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಟ್ವೀಟ್ ಮಾಡಿ,
“ಧ್ರುವೀಕರಣ? ವಿಫಲವಾಗಿದೆ.
ಮತಗಳನ್ನು ಖರೀದಿಸುವುದು? ವಿಫಲವಾಗಿದೆ.
ಅಭ್ಯರ್ಥಿಗಳನ್ನು ಖರೀದಿಸುವುದು? ವಿಫಲವಾಗಿದೆ.
ಸುಳ್ಳುಗಳು? ವಿಫಲವಾಗಿದೆ.
ಇಬ್ಬರು ಸಿಎಂಗಳು? ವಿಫಲವಾಗಿದೆ.
ಸಿಎಎ ಕುರಿತು ಎರಡು ಮಾತು? ವಿಫಲವಾಗಿದೆ.
ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯಿರಿ.
ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸರಣಿ ಟ್ವೀಟ್ ಮಾಡಿ ಇವಿಎಂ ಬಳಕೆಯ ಕುರಿತು ಗಂಭೀರವಾಗಿ ಪುನರ್ ವಿಮರ್ಶೆ ನಡೆಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರತಿ ಬಾರಿಯೂ ಇವಿಎಂ ಹೊತ್ತು ಸಾಗಿಸುವ ಖಾಸಗಿ ವಾಹನಗಳ ಚುನಾವಣಾ ವೀಡಿಯೊಗಳು ಕಂಡುಬರುತ್ತವೆ. ಆಶ್ಚರ್ಯಕರವಾಗಿ ಅವು ಈ ಕೆಳಗಿನ ವಿಷಯಗಳನ್ನು ಸಾಮಾನ್ಯವಾಗಿ ಹೊಂದಿತ್ತುವೆ.
1. ವಾಹನಗಳು ಸಾಮಾನ್ಯವಾಗಿ ಬಿಜೆಪಿ ಅಭ್ಯರ್ಥಿಗಳು ಅಥವಾ ಅವರ ಸಹವರ್ತಿಗಳಿಗೆ ಸೇರಿವೆ.
2. ಆ ವೀಡಿಯೊಗಳನ್ನು ಕೇವಲ ಆ ಒಂದು ಘಟನೆಯಾಗಿ ನೋಡಲಾಗುತ್ತದೆ ಮತ್ತು ತಿರುಚಿದ ವಿಡಿಯೋ ಎಂದು ತಳ್ಳಿಹಾಕಲಾಗುತ್ತದೆ.
3. ವೀಡಿಯೊಗಳನ್ನು ಬಹಿರಂಗಪಡಿಸಿದವರನ್ನು ಸೋಲಿನ ಭಯವುಳ್ಳವರು ಎಂದು ಆರೋಪಿಸಲು ಬಿಜೆಪಿ ತನ್ನ ಮಾಧ್ಯಮ ಯಂತ್ರೋಪಕರಣಗಳನ್ನು ಬಳಸುತ್ತದೆ.
ಆತಂಕದ ಸಂಗತಿಯೆಂದರೆ, ಇಂತಹ ಹಲವಾರು ಘಟನೆಗಳು ವರದಿಯಾಗುತ್ತಿವೆ ಮತ್ತು ಅವುಗಳ ಬಗ್ಗೆ ಇಸಿ ಏನೂ ಮಾಡಲಾಗುತ್ತಿಲ್ಲ. ಈ ದೂರುಗಳ ಬಗ್ಗೆ ಇಸಿ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಬೇಕಾಗಿದೆ ಮತ್ತು ಎಲ್ಲಾ ರಾಷ್ಟ್ರೀಯ ಪಕ್ಷಗಳು ಇವಿಎಂ ಬಳಕೆಯ ಬಗ್ಗೆ ಗಂಭೀರವಾದ ಮರು ಮೌಲ್ಯಮಾಪನವನ್ನು ನಡೆಸಬೇಕಾಗಿದೆ” ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

ನಿನ್ನೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ಇವಿಎಂಗಳನ್ನು ಸರ್ಕಾರಿ ಭದ್ರತಾ ವಾಹನದಲ್ಲಿ ಇವಿಎಂಗಳನ್ನು ಇರಿಸುವ ಸ್ಟ್ರಾಂಗ್‌ ರೂಂಗೆ ಸಾಗಿಸಬೇಕಿತ್ತು. ಆದರೆ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಗಂಟೆಗಳಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸೇರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಹೋಗುತ್ತಿದ್ದನ್ನು ಪ್ರತಿಪಕ್ಷದ ಕಾರ್ಯಕರ್ತರು ತಡೆದು ಘೇರಾವ್ ಹಾಕಿದ್ದಾರೆ. ಗುಂಪು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀಚಾರ್ಜ್ ನಡೆಸಿದ್ದಾರೆ. ಆಗ ಹಿಂಸೆಗೆ ತಿರುಗಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...