Homeಮುಖಪುಟಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

- Advertisement -
- Advertisement -

ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಕಿರುಕುಳ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಝಾನ್ಸಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಚಲ್ ಅರ್ಜರಿಯಾ ಮತ್ತು ಪೂರ್ಗೇಶ್ ಅಮರಿಯಾ ಬಂಧಿತ ಆರೋಪಿಗಳು.

ಮಾರ್ಚ್ 19 ರಂದು ಕ್ರೈಸ್ತ ಸನ್ಯಾಸಿನಿಯರ ಮೇಲೆ ನಡೆದ ಕಿರುಕುಳದ ಬಗ್ಗೆ ‘ಈ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ; ಜೊತೆಗೆ ಸನ್ಯಾಸಿನಿಯರನ್ನು ಬಿಟ್ಟಿದ್ದಾರೆ’ ಎಂಬುದಾಗಿ ಈ ಇಬ್ಬರು ಝಾನ್ಸಿ ರೈಲು ನಿಲ್ದಾಣದಲ್ಲಿ ಚರ್ಚಿಸುತ್ತಿದ್ದರು. ಅಲ್ಲಿಯೇ ಗಸ್ತು ತಿರುಗುತ್ತಿದ್ದ ರೈಲ್ವೇ ಪೊಲೀಸರು ಈ ಕುರಿತು ಪ್ರಶ್ನಿಸಿದ್ದಾರೆ. ನಂತರ ಪೊಲೀಸರು ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಆರಂಭವಾಗಿದೆ. ನಂತರ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ಆಕ್ರೋಶಗೊಂಡರು. ಹಾಗಾಗಿಯೇ ಇವರನ್ನು ಬಂಧಿಸಲಾಗಿದೆ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ತಿಳಿಸಿದ್ದಾರೆ.

ಬಂಧಿತರು ಝಾನ್ಸಿಯಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಎಂದು ತಿಳಿದುಬಂದಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಮಾರ್ಚ್‌ 19ರಂದು ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿತ್ತು. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ರೈಲು ನಿಲ್ದಾಣದಲ್ಲಿ ವಿಚಾರಣೆ ನಡೆಸಿ, ಸನ್ಯಾಸಿನಿಯರು ಮತಾಂತರ ನಡೆಸುತ್ತಿಲ್ಲ ಎಂಬುದು ಸಾಬೀತಾದ ನಂತರ ಅವರನ್ನು ಕಳುಹಿಸಲಾಗಿತ್ತು.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಆಗ್ರಹಿಸಿದ್ದರು.

ಆದರೆ ಈ ಕುರಿತು ಪ್ರತಿಕ್ರಿಯಿಸದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, “ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಮೇಲೆ ರೈಲು ಪ್ರಯಾಣದ ಸಂದರ್ಭದಲ್ಲಿ ಹಲ್ಲೆ ನಡೆದಿಲ್ಲ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯದಲ್ಲಿ “ಸುಳ್ಳು ಹೇಳಿಕೆ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.


ಇದನ್ನೂ ಓದಿ: ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...