Homeಮುಖಪುಟಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

- Advertisement -
- Advertisement -

ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಕಿರುಕುಳ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಝಾನ್ಸಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಚಲ್ ಅರ್ಜರಿಯಾ ಮತ್ತು ಪೂರ್ಗೇಶ್ ಅಮರಿಯಾ ಬಂಧಿತ ಆರೋಪಿಗಳು.

ಮಾರ್ಚ್ 19 ರಂದು ಕ್ರೈಸ್ತ ಸನ್ಯಾಸಿನಿಯರ ಮೇಲೆ ನಡೆದ ಕಿರುಕುಳದ ಬಗ್ಗೆ ‘ಈ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ; ಜೊತೆಗೆ ಸನ್ಯಾಸಿನಿಯರನ್ನು ಬಿಟ್ಟಿದ್ದಾರೆ’ ಎಂಬುದಾಗಿ ಈ ಇಬ್ಬರು ಝಾನ್ಸಿ ರೈಲು ನಿಲ್ದಾಣದಲ್ಲಿ ಚರ್ಚಿಸುತ್ತಿದ್ದರು. ಅಲ್ಲಿಯೇ ಗಸ್ತು ತಿರುಗುತ್ತಿದ್ದ ರೈಲ್ವೇ ಪೊಲೀಸರು ಈ ಕುರಿತು ಪ್ರಶ್ನಿಸಿದ್ದಾರೆ. ನಂತರ ಪೊಲೀಸರು ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಆರಂಭವಾಗಿದೆ. ನಂತರ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ಆಕ್ರೋಶಗೊಂಡರು. ಹಾಗಾಗಿಯೇ ಇವರನ್ನು ಬಂಧಿಸಲಾಗಿದೆ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ತಿಳಿಸಿದ್ದಾರೆ.

ಬಂಧಿತರು ಝಾನ್ಸಿಯಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಎಂದು ತಿಳಿದುಬಂದಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಮಾರ್ಚ್‌ 19ರಂದು ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿತ್ತು. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ರೈಲು ನಿಲ್ದಾಣದಲ್ಲಿ ವಿಚಾರಣೆ ನಡೆಸಿ, ಸನ್ಯಾಸಿನಿಯರು ಮತಾಂತರ ನಡೆಸುತ್ತಿಲ್ಲ ಎಂಬುದು ಸಾಬೀತಾದ ನಂತರ ಅವರನ್ನು ಕಳುಹಿಸಲಾಗಿತ್ತು.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಆಗ್ರಹಿಸಿದ್ದರು.

ಆದರೆ ಈ ಕುರಿತು ಪ್ರತಿಕ್ರಿಯಿಸದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, “ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಮೇಲೆ ರೈಲು ಪ್ರಯಾಣದ ಸಂದರ್ಭದಲ್ಲಿ ಹಲ್ಲೆ ನಡೆದಿಲ್ಲ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯದಲ್ಲಿ “ಸುಳ್ಳು ಹೇಳಿಕೆ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.


ಇದನ್ನೂ ಓದಿ: ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...