Homeಕರ್ನಾಟಕ'ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ': ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

- Advertisement -
- Advertisement -

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಕೇಂದ್ರದ ಬಿಜೆಪಿ ವರಿಷ್ಟರಿಗೆ ಪತ್ರ ಬರೆದಿದ್ದ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ‘ನನಗೆ ರೆಬಲ್ ಆಗುವುದೇ ಗೊತ್ತಿಲ್ಲ, ಆದರೆ ನ್ಯಾಯ ಕೇಳುವುದನ್ನು ಬಿಡಲ್ಲ. ನಿಯಮ ಮತ್ತು ಪ್ರಕ್ರಿಯೆಯನ್ನು ಮೀರಬಾರದು ಎಂಬುದಷ್ಟೆ ನನ್ನ ಆಗ್ರಹ’ ಎಂದು ಹೇಳಿದ್ದಾರೆ.

“ನಾನು ನ್ಯಾಯ ಕೇಳಿದ್ದೇನೆ. ನಿಯಮ ಉಲ್ಲಂಘನೆಯಾಗಿರುವುದನ್ನು ನಾನು ಆಕ್ಷೇಪಿಸಿದ್ದೇನೆ ಅಷ್ಟೆ. ಆದರೆ ಸರ್ಕಾರದ ವಿರುದ್ಧ ನಾನು ಬಂಡಾಯ ಎದ್ದಿಲ್ಲ. ಅಥವಾ ಮುಖ್ಯಮಂತ್ರಿ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ತಕರಾರಿಲ್ಲ. ಆದರೆ ಕೆಲವು ಮಾಧ್ಯಮಗಳು ನಾನು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದೇನೆ ಎಂದು ವರದಿ ಮಾಡಿವೆ, ಅದು ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ಹಣವನ್ನು ಯಾವುದೆ ಕೆಲಸಕ್ಕೆ ಬಳಸುವ ಪರಮಾಧಿಕಾರ ಸಿಎಂಗೆ ಇದೆ. ಆದರೆ ಒಂದು ಇಲಾಖೆಗೆ ಹಣ ಬಂದಮೇಲೆ ಅದು ಇಲಾಖೆಯ ಕೆಲಸ. ಈಗ ಸಿಎಂ ನಮ್ಮ ಇಲಾಖೆಗೆ ಬಂದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಒಂದು ಇಲಾಖೆಗೆ ಬಿಡುಗಡೆಯಾಗಿರುವ ಹಣವನ್ನು ಇಲಾಖೆಯ ಸಚಿವರಿಗೆ ಗೊತ್ತಿಲ್ಲದೆ ಅಥವಾ ಮಾಹಿತಿ ನೀಡದೇ ಆ ಹಣವನ್ನು ಶಾಸಕರಿಗೆ ಅಥವಾ ಇತರೆ ಕೆಲಸಗಳಿಗೆ ಬಳಸಲಾಗಿದೆ. ಇದನ್ನು ಆರ್ಥಿಕ ಇಲಾಖೆಯೂ ಒಪ್ಪಿಕೊಂಡಿದೆ. ನಮ್ಮಿಂದ ತಪ್ಪಾಗಿದೆ ಎಂದೂ ಹೇಳಿದೆ. ಆದರೆ ಮುಖ್ಯಮಂತ್ರಿ ಹೇಳಿದ ಮೇಲೆ ಆ ಕೆಲಸ ಮಾಡಲೇಬೇಕಲ್ಲ ಎಂದು ಅವರು ಹೇಳಿದರು. ಹಾಗಾಗಿ ನ್ಯಾಯ ಕೇಳಿದ್ದೇನೆ ಅಷ್ಟೆ. ಈ ಕುರಿತು ಸಿಎಂ ಸೇರಿದಂತೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

“ಯಡಿಯೂರಪ್ಪ ರಾಜೀನಾಮೆ ಕೊಡಲಿ ಅಥವಾ ಈಶ್ವರಪ್ಪ ರಾಜೀನಾಮೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದು ಖಂಡಿತಾ ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಯಾವಾಗಲೂ ಒಂದೇ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಇದು ಹೊಸದಲ್ಲ, ಮೊದಲಿನಿಂದಲೂ ಇದೆ. ನಾವು ಒಂದೇ ತಟ್ಟೆಯಲ್ಲಿ ಊಟಮಾಡಿದ್ದೇವೆ, ಬಿಜಿನಸ್ ಪಾರ್ಟ್ನರ್ ನಾವು. ಯಡಿಯೂರಪ್ಪ ಬಿಜೆಪಿಯಿಂದ ಹೊರಗೆ ಹೋಗಿ ಕೆಜೆಪಿ ಕಟ್ಟಿದ್ದರು. ಆಗ ಅವರೂ ಬಿಜೆಪಿಯ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು. ನಾವೂ ಕೂಡ ತಕ್ಕ ಉತ್ತರ ಕೊಟ್ಟಿದ್ದೆವು. ನಂತರ ಬಿಜೆಪಿಯೊಳಗೆ ವಿಲೀನವಾಗಬೇಕು ಎನ್ನುವ ವಿಷಯ ಬಂದಾಗ ನಾನು ಯಡಿಯೂರಪ್ಪನವರನ್ನು ನೋಡಿ, ‘ಮೊದಲೇ ಹೇಳಿದ್ದೆ ಕೆಜೆಪಿ ಬೇಡ ಎಂದು. ಈಗ ನೋಡಿ ನಮಗೂ ನಿಮಗೂ ತ್ರಾಸ’ ಎಂದು ಹೇಳಿದೆ. ಅದಕ್ಕೆ ನೋವಿನಿಂದಲೇ ಉತ್ತರಿಸಿದ ಯಡಿಯೂರಪ್ಪ, ‘ನಾನು ಕೆಜೆಪಿ ಕಟ್ಟಬೇಕೆಂದೂ, ತಾವು ಜೊತೆಗೆ ಬರುತ್ತೇವೆ ಎಂದೂ ಹಲವರು ಒತ್ತಾಯಿಸಿದ್ದರು. ಆದರೆ ಪಕ್ಷ ಕಟ್ಟಿದ ನಂತರ ಯಾರೂ ಹತ್ತಿರ ಸುಳಿಯಲಿಲ್ಲ’ ಎಂದು ಹೇಳಿದ್ದರು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ, ಯಡಿಯೂರಪ್ಪ ತನ್ನ ಸುತ್ತಲಿನವರ ಮಾತನ್ನು ಬೇಗ ನಂಬುತ್ತಾರೆ. ಬಹುಶಃ ಈಗಲೂ ಅದೇ ಆಗಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.


ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...