Homeಮುಖಪುಟಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

- Advertisement -
- Advertisement -

ತಮಿಳುನಾಡು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ವಿಭಿನ್ನ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಹೊಸ ರೂಪ ಕೊಟ್ಟಿರುವ ಡಿಎಂಕೆ ಅಭ್ಯರ್ಥಿಗಳು, ತಮ್ಮ ಎದುರಾಳಿ ಬಿಜೆಪಿ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ!

ಹೌದು, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಕಣಕ್ಕಿಳಿದಿದೆ. ಇವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಿಜೆಪಿ ತಂಡವೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಇಂದು ಟ್ವಿಟರ್‌ ಸಮರ ಆರಂಭಿಸಿರುವ ಡಿಎಂಕೆ ನಾಯಕರು, ತಮ್ಮ ಕ್ಷೇತ್ರಗಳಲ್ಲಿನ ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ದಯವಿಟ್ಟು ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನಿಸಿದ್ದಾರೆ. ನೀವು ಬಂದು ಪ್ರಚಾರ ಮಾಡುವುದರಿಂದ ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಧರಮಪುರಿಯಿಂದ ತಿರುವಣ್ಣಾಮಲೈ ಮತ್ತು ಕಾಂಚೀಪುರಂನಿಂದ ಕೃಷ್ಣಗಿರಿವರೆಗಿನ ಎಲ್ಲಾ ಡಿಎಂಕೆ ನಾಯಕರು ಸಂಘಟಿತ ಐಟಿ ಸೆಲ್ ಅಭಿಯಾನದಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ವಿರುದ್ಧದ ದೊಡ್ಡ ಅಲೆಯಿದ್ದು, ಮೋದಿ ಬಂದು ವಿರೋಧಿಗಳ ಪರ ಪ್ರಚಾರ ನಡೆಸಿದರೆ ನಮ್ಮ ಗೆಲುವು ಸುಲಭ ಎಂದು ಡಿಎಂಕೆ ಅಭ್ಯರ್ಥಿಗಳು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟ್ವಿಟರ್‌ ಅಭಿಯಾನವನ್ನು ಮಾರ್ಚ್ 31 ರಂದು ಡಿಎಂಕೆ ಪರಿಸರ ವಿಭಾಗದ ಕಾರ್ಯದರ್ಶಿ ಕಾರ್ತಿಕೇಯ ಶಿವಸೇನಾಪತಿ ಅವರು ಪ್ರಾರಂಭಿಸಿದರು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾರ್ತಿಕೇಯ ಶಿವಸೇನಾಪತಿ, ’ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ… ಸಚಿವ ಎಸ್.ಪಿ.ವೇಲುಮನಿ ಅವರಿಗಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿದ್ದೇನೆ. ನೀವು ಅವರನ್ನು ಬೆಂಬಲಿಸಿದರೆ ಅದು ನನಗೆ ತುಂಬಾ ಉಪಯುಕ್ತವಾಗಿರುತ್ತದೆ. ಧನ್ಯವಾದಗಳು ಸರ್” ಎಂದಿದ್ದಾರೆ.

ಇದೇ ರೀತಿ ಎಲ್ಲಾ ಡಿಎಂಕೆ ನಾಯಕರು ಕೂಡ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿ ಬಿಜೆಪಿ ಮುಖಂಡರಿಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದ್ದಾರೆ.

ಶಾಸಕ ಎಸ್.ಆರ್‌. ರಾಜಾ ಟ್ವೀಟ್ ಮಾಡಿ, ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ.. ದಯವಿಟ್ಟು ಟಿಕೆಎಂ ಚಿನ್ನಯ್ಯ ಪರ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಸ್ಪರ್ಧಿಸಿರುವ ಡಿಎಂಕೆ ಅಭ್ಯರ್ಥಿ. ಅವರ ಪರವಾಗಿ ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಲು ತುಂಬಾ ಉಪಯೋಗವಾಗುತ್ತದೆ. ಧನ್ಯವಾದಗಳು ಸರ್” ಎಂದು ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ.

ಡಿಎಂಕೆ ನಾಯಕರ ಜೊತೆಗೆ ಶ್ರೀಪೆರುಂಬದೂರ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೆಲ್ವಪೆರುಂದಗೈ ಕೂಡ ಈದೇ ರೀತಿಯ ಟ್ವೀಟ್ ಮಾಡಿದ್ದು, ಮೋದಿಯವರೆ ನನ್ನ ಪ್ರತಿಸ್ಪರ್ಧಿ ಕೆ.ಪಳನಿ ಪರ ಪ್ರಚಾರ ನಡೆಸಿ. ನಾನು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೇನೆ. ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತಹ ಹೆಚ್ಚಾಗುತ್ತದೆ ಎಂದಿದ್ದಾರೆ.

ಡಿಎಂಕೆ ನಾಯಕರ ಟ್ವೀಟ್‌ಗಳನ್ನು ಸೇರಿಸಿ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಾವು ಕೂಡ ವ್ಯಂಗ್ಯವಾಡಿದ್ದಾರೆ.

234 ವಿಧಾನಸಭಾ ಕ್ಷೇತ್ರಗಳ ತಮಿಳುನಾಡಿನ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಶುಕ್ರವಾರ (ಏಪ್ರಿಲ್ 2) ರಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅಳಿಯ ಸಬರೀಸನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಯತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...