Homeಮುಖಪುಟಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

- Advertisement -
- Advertisement -

ತಮಿಳುನಾಡು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ವಿಭಿನ್ನ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಹೊಸ ರೂಪ ಕೊಟ್ಟಿರುವ ಡಿಎಂಕೆ ಅಭ್ಯರ್ಥಿಗಳು, ತಮ್ಮ ಎದುರಾಳಿ ಬಿಜೆಪಿ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ!

ಹೌದು, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಕಣಕ್ಕಿಳಿದಿದೆ. ಇವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಿಜೆಪಿ ತಂಡವೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಇಂದು ಟ್ವಿಟರ್‌ ಸಮರ ಆರಂಭಿಸಿರುವ ಡಿಎಂಕೆ ನಾಯಕರು, ತಮ್ಮ ಕ್ಷೇತ್ರಗಳಲ್ಲಿನ ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ದಯವಿಟ್ಟು ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನಿಸಿದ್ದಾರೆ. ನೀವು ಬಂದು ಪ್ರಚಾರ ಮಾಡುವುದರಿಂದ ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಧರಮಪುರಿಯಿಂದ ತಿರುವಣ್ಣಾಮಲೈ ಮತ್ತು ಕಾಂಚೀಪುರಂನಿಂದ ಕೃಷ್ಣಗಿರಿವರೆಗಿನ ಎಲ್ಲಾ ಡಿಎಂಕೆ ನಾಯಕರು ಸಂಘಟಿತ ಐಟಿ ಸೆಲ್ ಅಭಿಯಾನದಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ವಿರುದ್ಧದ ದೊಡ್ಡ ಅಲೆಯಿದ್ದು, ಮೋದಿ ಬಂದು ವಿರೋಧಿಗಳ ಪರ ಪ್ರಚಾರ ನಡೆಸಿದರೆ ನಮ್ಮ ಗೆಲುವು ಸುಲಭ ಎಂದು ಡಿಎಂಕೆ ಅಭ್ಯರ್ಥಿಗಳು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟ್ವಿಟರ್‌ ಅಭಿಯಾನವನ್ನು ಮಾರ್ಚ್ 31 ರಂದು ಡಿಎಂಕೆ ಪರಿಸರ ವಿಭಾಗದ ಕಾರ್ಯದರ್ಶಿ ಕಾರ್ತಿಕೇಯ ಶಿವಸೇನಾಪತಿ ಅವರು ಪ್ರಾರಂಭಿಸಿದರು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾರ್ತಿಕೇಯ ಶಿವಸೇನಾಪತಿ, ’ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ… ಸಚಿವ ಎಸ್.ಪಿ.ವೇಲುಮನಿ ಅವರಿಗಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿದ್ದೇನೆ. ನೀವು ಅವರನ್ನು ಬೆಂಬಲಿಸಿದರೆ ಅದು ನನಗೆ ತುಂಬಾ ಉಪಯುಕ್ತವಾಗಿರುತ್ತದೆ. ಧನ್ಯವಾದಗಳು ಸರ್” ಎಂದಿದ್ದಾರೆ.

ಇದೇ ರೀತಿ ಎಲ್ಲಾ ಡಿಎಂಕೆ ನಾಯಕರು ಕೂಡ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿ ಬಿಜೆಪಿ ಮುಖಂಡರಿಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದ್ದಾರೆ.

ಶಾಸಕ ಎಸ್.ಆರ್‌. ರಾಜಾ ಟ್ವೀಟ್ ಮಾಡಿ, ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ.. ದಯವಿಟ್ಟು ಟಿಕೆಎಂ ಚಿನ್ನಯ್ಯ ಪರ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಸ್ಪರ್ಧಿಸಿರುವ ಡಿಎಂಕೆ ಅಭ್ಯರ್ಥಿ. ಅವರ ಪರವಾಗಿ ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಲು ತುಂಬಾ ಉಪಯೋಗವಾಗುತ್ತದೆ. ಧನ್ಯವಾದಗಳು ಸರ್” ಎಂದು ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ.

ಡಿಎಂಕೆ ನಾಯಕರ ಜೊತೆಗೆ ಶ್ರೀಪೆರುಂಬದೂರ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೆಲ್ವಪೆರುಂದಗೈ ಕೂಡ ಈದೇ ರೀತಿಯ ಟ್ವೀಟ್ ಮಾಡಿದ್ದು, ಮೋದಿಯವರೆ ನನ್ನ ಪ್ರತಿಸ್ಪರ್ಧಿ ಕೆ.ಪಳನಿ ಪರ ಪ್ರಚಾರ ನಡೆಸಿ. ನಾನು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೇನೆ. ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತಹ ಹೆಚ್ಚಾಗುತ್ತದೆ ಎಂದಿದ್ದಾರೆ.

ಡಿಎಂಕೆ ನಾಯಕರ ಟ್ವೀಟ್‌ಗಳನ್ನು ಸೇರಿಸಿ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಾವು ಕೂಡ ವ್ಯಂಗ್ಯವಾಡಿದ್ದಾರೆ.

234 ವಿಧಾನಸಭಾ ಕ್ಷೇತ್ರಗಳ ತಮಿಳುನಾಡಿನ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಶುಕ್ರವಾರ (ಏಪ್ರಿಲ್ 2) ರಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅಳಿಯ ಸಬರೀಸನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಯತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...