Homeಮುಖಪುಟಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

- Advertisement -
- Advertisement -

ತಮಿಳುನಾಡು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ವಿಭಿನ್ನ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಹೊಸ ರೂಪ ಕೊಟ್ಟಿರುವ ಡಿಎಂಕೆ ಅಭ್ಯರ್ಥಿಗಳು, ತಮ್ಮ ಎದುರಾಳಿ ಬಿಜೆಪಿ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ!

ಹೌದು, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಕಣಕ್ಕಿಳಿದಿದೆ. ಇವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಿಜೆಪಿ ತಂಡವೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಇಂದು ಟ್ವಿಟರ್‌ ಸಮರ ಆರಂಭಿಸಿರುವ ಡಿಎಂಕೆ ನಾಯಕರು, ತಮ್ಮ ಕ್ಷೇತ್ರಗಳಲ್ಲಿನ ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ದಯವಿಟ್ಟು ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನಿಸಿದ್ದಾರೆ. ನೀವು ಬಂದು ಪ್ರಚಾರ ಮಾಡುವುದರಿಂದ ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಧರಮಪುರಿಯಿಂದ ತಿರುವಣ್ಣಾಮಲೈ ಮತ್ತು ಕಾಂಚೀಪುರಂನಿಂದ ಕೃಷ್ಣಗಿರಿವರೆಗಿನ ಎಲ್ಲಾ ಡಿಎಂಕೆ ನಾಯಕರು ಸಂಘಟಿತ ಐಟಿ ಸೆಲ್ ಅಭಿಯಾನದಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ವಿರುದ್ಧದ ದೊಡ್ಡ ಅಲೆಯಿದ್ದು, ಮೋದಿ ಬಂದು ವಿರೋಧಿಗಳ ಪರ ಪ್ರಚಾರ ನಡೆಸಿದರೆ ನಮ್ಮ ಗೆಲುವು ಸುಲಭ ಎಂದು ಡಿಎಂಕೆ ಅಭ್ಯರ್ಥಿಗಳು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟ್ವಿಟರ್‌ ಅಭಿಯಾನವನ್ನು ಮಾರ್ಚ್ 31 ರಂದು ಡಿಎಂಕೆ ಪರಿಸರ ವಿಭಾಗದ ಕಾರ್ಯದರ್ಶಿ ಕಾರ್ತಿಕೇಯ ಶಿವಸೇನಾಪತಿ ಅವರು ಪ್ರಾರಂಭಿಸಿದರು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾರ್ತಿಕೇಯ ಶಿವಸೇನಾಪತಿ, ’ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ… ಸಚಿವ ಎಸ್.ಪಿ.ವೇಲುಮನಿ ಅವರಿಗಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿದ್ದೇನೆ. ನೀವು ಅವರನ್ನು ಬೆಂಬಲಿಸಿದರೆ ಅದು ನನಗೆ ತುಂಬಾ ಉಪಯುಕ್ತವಾಗಿರುತ್ತದೆ. ಧನ್ಯವಾದಗಳು ಸರ್” ಎಂದಿದ್ದಾರೆ.

ಇದೇ ರೀತಿ ಎಲ್ಲಾ ಡಿಎಂಕೆ ನಾಯಕರು ಕೂಡ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿ ಬಿಜೆಪಿ ಮುಖಂಡರಿಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದ್ದಾರೆ.

ಶಾಸಕ ಎಸ್.ಆರ್‌. ರಾಜಾ ಟ್ವೀಟ್ ಮಾಡಿ, ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ.. ದಯವಿಟ್ಟು ಟಿಕೆಎಂ ಚಿನ್ನಯ್ಯ ಪರ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಸ್ಪರ್ಧಿಸಿರುವ ಡಿಎಂಕೆ ಅಭ್ಯರ್ಥಿ. ಅವರ ಪರವಾಗಿ ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಲು ತುಂಬಾ ಉಪಯೋಗವಾಗುತ್ತದೆ. ಧನ್ಯವಾದಗಳು ಸರ್” ಎಂದು ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ.

ಡಿಎಂಕೆ ನಾಯಕರ ಜೊತೆಗೆ ಶ್ರೀಪೆರುಂಬದೂರ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೆಲ್ವಪೆರುಂದಗೈ ಕೂಡ ಈದೇ ರೀತಿಯ ಟ್ವೀಟ್ ಮಾಡಿದ್ದು, ಮೋದಿಯವರೆ ನನ್ನ ಪ್ರತಿಸ್ಪರ್ಧಿ ಕೆ.ಪಳನಿ ಪರ ಪ್ರಚಾರ ನಡೆಸಿ. ನಾನು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೇನೆ. ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತಹ ಹೆಚ್ಚಾಗುತ್ತದೆ ಎಂದಿದ್ದಾರೆ.

ಡಿಎಂಕೆ ನಾಯಕರ ಟ್ವೀಟ್‌ಗಳನ್ನು ಸೇರಿಸಿ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಾವು ಕೂಡ ವ್ಯಂಗ್ಯವಾಡಿದ್ದಾರೆ.

234 ವಿಧಾನಸಭಾ ಕ್ಷೇತ್ರಗಳ ತಮಿಳುನಾಡಿನ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಶುಕ್ರವಾರ (ಏಪ್ರಿಲ್ 2) ರಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅಳಿಯ ಸಬರೀಸನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಯತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟಣೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....