Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...