Homeಮುಖಪುಟನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್...

ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್ ಪ್ರತಿಕ್ರಿಯೆ

ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ? - ಉದಯನಿಧಿ ಸ್ಟಾಲಿನ್

- Advertisement -
- Advertisement -

ನಾನು ಎಂ.ಕೆ ಸ್ಟಾಲಿನ್. ತುರ್ತು ಪರಿಸ್ಥಿತಿಯನ್ನು ಎದುರಿಸಿದವನು. ನಿಮ್ಮ ಈ ಐಟಿ ದಾಳಿಗೆ ಬೆದರುವವನಲ್ಲ, ನಾವು ಎಐಎಡಿಎಂಕೆ ನಾಯಕರಲ್ಲ ಎಂಬುದನ್ನು ನರೇಂದ್ರ ಮೋದಿಯವರು ಮರೆಯಬಾರದು ಎಂದು ಡಿಎಂಕೆ ಮುಖಂಡ ಸ್ಟಾಲಿನ್ ತಮ್ಮ ಅಳಿಯ ಮತ್ತು ಮಗಳ ಮನೆ ಮೇಲಿನ ಐಟಿ ದಾಳಿಗೆ ಪ್ರತಿಕ್ರಿಯಿಸಿದ್ದಾರೆ.

ಪೆರಂಬಲೂರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, “ನಾನು ಇಂದು ಬೆಳಿಗ್ಗೆ ಚನ್ನೈನಿಂದ ತಿರುಚಿಗೆ ಬಂದಿದ್ದೇನೆ. ಚನ್ನೈನಲ್ಲಿನ ನನ್ನ ಮಗಳ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂಬ ಸುದ್ದಿ ತಿಳಿಯಿತು. ನರೇಂದ್ರ ಮೋದಿ ಸರ್ಕಾರ ತಮಿಳುನಾಡಿನಲ್ಲಿ ಎಐಎಡಿಎಂಕೆ ಸರ್ಕಾರವನ್ನು ಉಳಿಸಲು ಶತಪ್ರಯತ್ನ ಮಾಡುತ್ತಿದೆ. ನಾನು ನರೇಂದ್ರ ಮೋದಿಯವರಿಗೆ ಹೇಳಲು ಬಯಸುತ್ತೇನೆ, ಇದು ಡಿಎಂಕೆ ಪಕ್ಷ ಎಂಬುದನ್ನು ಮರೆಯಬೇಡಿ. ನಾನು ಕಲೈಜ್ಞರ್ (ಕರುಣಾನಿಧಿ)ಯವರ ಮಗ. ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಸ್ಟಾಲಿನ್ ಸವಾಲು ಹಾಕಿದ್ದಾರೆ.

ತಮಿಳುನಾಡು ಚುನಾವಣೆಗೆ 4 ದಿನ ಬಾಕಿ ಇರುವಂತೆ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಮಗಳು ಸೆಂಥಮರಾಯ್, ಅಳಿಯ ಸಬರೀಸನ್ ವಾಸಿಸುತ್ತಿರುವ ನೀಲಂಗರೈನಲ್ಲಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಏಪ್ರಿಲ್ 06 ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಈ ಐಟಿ ದಾಳಿ ನಡೆದಿರುವುದು ಹಲವರು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ತಿಂಗಳಷ್ಟೇ ಡಿಎಂಕೆ ಹಿರಿಯ ಮುಖಂಡ ಮತ್ತು ಅಭ್ಯರ್ಥಿ ಇ.ವಿ ವೇಲುರವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

ಚುನಾವಣೆ ಹತ್ತಿರದಲ್ಲಿ ನಡೆದ ಐಟಿ ದಾಳಿಯನ್ನು ಖಂಡಿಸಿರುವ ಡಿಎಂಕೆ, “ಐಟಿ ಇಲಾಖೆಯು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೆರಿಗೆ ಅಧಿಕಾರಿಗಳು “ಎಐಎಡಿಎಂಕೆ-ಬಿಜೆಪಿಯ ಚುನಾವಣಾ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಡಿಎಂಕೆ ಆರೋಪಿಸಿದ್ದು, ತೆರಿಗೆ ಇಲಾಖೆಯನ್ನು ಉನ್ನತ ಸ್ಥಾನಕ್ಕೆ ತರಲು ಚುನಾವಣಾ ಸಂಸ್ಥೆಯನ್ನು ಒತ್ತಾಯಿಸಿದೆ.

ಇನ್ನು ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್, “ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ?” ಎಂದು ಸವಾಲು ಹಾಕಿದ್ದಾರೆ.

“ಅಮಿತ್ ಷಾ ಅವರ ಕೆಲಸವೆಂದರೆ ಇತರರನ್ನು ಬೆದರಿಸುವುದು ಮತ್ತು ಚುನಾಯಿತ ಸರ್ಕಾರಗಳನ್ನು ಉರುಳಿಸುವುದು… ನಾನು ಅವರಿಗೆ ಹೆದರುವುದಿಲ್ಲ, ನಾನು ಕಲೈಜ್ಞರ್ (ಕರುಣಾನಿಧಿ) ಯವರ ಮೊಮ್ಮಗ” ಎಂದು ಉದಯನಿಧಿ ಕಿಡಿಕಾರಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...