Homeಮುಖಪುಟನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್...

ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್ ಪ್ರತಿಕ್ರಿಯೆ

ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ? - ಉದಯನಿಧಿ ಸ್ಟಾಲಿನ್

- Advertisement -
- Advertisement -

ನಾನು ಎಂ.ಕೆ ಸ್ಟಾಲಿನ್. ತುರ್ತು ಪರಿಸ್ಥಿತಿಯನ್ನು ಎದುರಿಸಿದವನು. ನಿಮ್ಮ ಈ ಐಟಿ ದಾಳಿಗೆ ಬೆದರುವವನಲ್ಲ, ನಾವು ಎಐಎಡಿಎಂಕೆ ನಾಯಕರಲ್ಲ ಎಂಬುದನ್ನು ನರೇಂದ್ರ ಮೋದಿಯವರು ಮರೆಯಬಾರದು ಎಂದು ಡಿಎಂಕೆ ಮುಖಂಡ ಸ್ಟಾಲಿನ್ ತಮ್ಮ ಅಳಿಯ ಮತ್ತು ಮಗಳ ಮನೆ ಮೇಲಿನ ಐಟಿ ದಾಳಿಗೆ ಪ್ರತಿಕ್ರಿಯಿಸಿದ್ದಾರೆ.

ಪೆರಂಬಲೂರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, “ನಾನು ಇಂದು ಬೆಳಿಗ್ಗೆ ಚನ್ನೈನಿಂದ ತಿರುಚಿಗೆ ಬಂದಿದ್ದೇನೆ. ಚನ್ನೈನಲ್ಲಿನ ನನ್ನ ಮಗಳ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂಬ ಸುದ್ದಿ ತಿಳಿಯಿತು. ನರೇಂದ್ರ ಮೋದಿ ಸರ್ಕಾರ ತಮಿಳುನಾಡಿನಲ್ಲಿ ಎಐಎಡಿಎಂಕೆ ಸರ್ಕಾರವನ್ನು ಉಳಿಸಲು ಶತಪ್ರಯತ್ನ ಮಾಡುತ್ತಿದೆ. ನಾನು ನರೇಂದ್ರ ಮೋದಿಯವರಿಗೆ ಹೇಳಲು ಬಯಸುತ್ತೇನೆ, ಇದು ಡಿಎಂಕೆ ಪಕ್ಷ ಎಂಬುದನ್ನು ಮರೆಯಬೇಡಿ. ನಾನು ಕಲೈಜ್ಞರ್ (ಕರುಣಾನಿಧಿ)ಯವರ ಮಗ. ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಸ್ಟಾಲಿನ್ ಸವಾಲು ಹಾಕಿದ್ದಾರೆ.

ತಮಿಳುನಾಡು ಚುನಾವಣೆಗೆ 4 ದಿನ ಬಾಕಿ ಇರುವಂತೆ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಮಗಳು ಸೆಂಥಮರಾಯ್, ಅಳಿಯ ಸಬರೀಸನ್ ವಾಸಿಸುತ್ತಿರುವ ನೀಲಂಗರೈನಲ್ಲಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಏಪ್ರಿಲ್ 06 ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಈ ಐಟಿ ದಾಳಿ ನಡೆದಿರುವುದು ಹಲವರು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ತಿಂಗಳಷ್ಟೇ ಡಿಎಂಕೆ ಹಿರಿಯ ಮುಖಂಡ ಮತ್ತು ಅಭ್ಯರ್ಥಿ ಇ.ವಿ ವೇಲುರವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

ಚುನಾವಣೆ ಹತ್ತಿರದಲ್ಲಿ ನಡೆದ ಐಟಿ ದಾಳಿಯನ್ನು ಖಂಡಿಸಿರುವ ಡಿಎಂಕೆ, “ಐಟಿ ಇಲಾಖೆಯು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೆರಿಗೆ ಅಧಿಕಾರಿಗಳು “ಎಐಎಡಿಎಂಕೆ-ಬಿಜೆಪಿಯ ಚುನಾವಣಾ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಡಿಎಂಕೆ ಆರೋಪಿಸಿದ್ದು, ತೆರಿಗೆ ಇಲಾಖೆಯನ್ನು ಉನ್ನತ ಸ್ಥಾನಕ್ಕೆ ತರಲು ಚುನಾವಣಾ ಸಂಸ್ಥೆಯನ್ನು ಒತ್ತಾಯಿಸಿದೆ.

ಇನ್ನು ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್, “ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ?” ಎಂದು ಸವಾಲು ಹಾಕಿದ್ದಾರೆ.

“ಅಮಿತ್ ಷಾ ಅವರ ಕೆಲಸವೆಂದರೆ ಇತರರನ್ನು ಬೆದರಿಸುವುದು ಮತ್ತು ಚುನಾಯಿತ ಸರ್ಕಾರಗಳನ್ನು ಉರುಳಿಸುವುದು… ನಾನು ಅವರಿಗೆ ಹೆದರುವುದಿಲ್ಲ, ನಾನು ಕಲೈಜ್ಞರ್ (ಕರುಣಾನಿಧಿ) ಯವರ ಮೊಮ್ಮಗ” ಎಂದು ಉದಯನಿಧಿ ಕಿಡಿಕಾರಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...