Homeಕರ್ನಾಟಕಉತ್ತರ ಕನ್ನಡ ರಾಜಕೀಯ ಇತಿಹಾಸದ ರೂಪಾಂತರ

ಉತ್ತರ ಕನ್ನಡ ರಾಜಕೀಯ ಇತಿಹಾಸದ ರೂಪಾಂತರ

- Advertisement -
- Advertisement -

 ಶುದ್ಧೋದನ |

ಎಲ್ಲರೂ ಸೇರಿದರು ಹೊಸ ಪಕ್ಷ ತಂಗಿ
ಬಿಡಲಿಲ್ಲ ನಾನೊಬ್ಬನೇ ಹಳೆಯ ಅಂಗಿ
ನನಗೆ ಬೇಕಾಗಿಲ್ಲ ಹೊಸ ಹಗಲುವೇಷ
ವೇಷಧಾರಿಗಳಿಂದ ಹಾಳಾಯಿತು ದೇಶ
ಇದು ರೈತ ಹೋರಾಟಗಾರ, ಶಿಕ್ಷಣ ತಜ್ಞ, ನಿಜ ಜನನಾಯಕ ದಿನಕರ ದೇಸಾಯಿ 1960ರ ದಶಕದಲ್ಲಿ ಬರೆದ ಚುಟುಕು. ಪಕ್ಷಾಂತರ ಪಿಡುಗಿಂದ ರೋಸಿದ ದೇಸಾಯರು ಇಂಥ ಹಲವು ಚೌಪದಿ ಕಟ್ಟಿದ್ದಾರೆ. ದೇಸಾಯರು ರಚಿಸಿದ ಸಾವಿರಾರು ಚುಟುಕುಗಳಲ್ಲಿ ಮುಕ್ಕಾಲು ಪಾಲು ರಾಜಕೀಯ ವಿಡಂಬನೆ, ವಿಮರ್ಶೆಗೆ ಸಂಬಂಧಿಸಿದ್ದು. 1967ರಲ್ಲಿ ದೇಸಾಯರು ಉತ್ತರ ಕನ್ನಡದಿಂದ ಗೆದ್ದು ಪಾರ್ಲಿಮೆಂಟ್‍ಗೆ ಹೋಗಿದ್ದರು. ಮೊದಲೊಮ್ಮೆ ಸೋತಿದ್ದ ದೇಸಾಯರು 1971ರಲ್ಲಿ ಗೆಲ್ಲಲಾಗಲಿಲ್ಲ; ಆ ನಂತರ ರಾಜಕೀಯದಿಂದ ದೂರಾದರು.
ಸದಾ ಜನಪರವಾಗಿ ತುಡಿಯುತ್ತಿದ್ದ, ದುಡಿಯುತ್ತಿದ್ದ ದೇಸಾಯರಂತೆ ಹಲವು ಸಜ್ಜನರು ಕೆನರಾ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಹೇಗೆ ಮೋದಿ ಮಂಕುಬೂದಿ ಹಾರಾಡುತ್ತಿದೆಯೋ ಹಾಗೆ ಅಂದು ಇಂದಿರಾ ಭ್ರಮೆ ಜಿಲ್ಲೆಯಲ್ಲಿತ್ತು. ಹಾಗಾಗಿ ಉಡುಪಿಯಿಂದ ವಲಸೆ ಬಂದಿದ್ದ ಜೋಕಿಮ್ ಆಳ್ವನಂಥ ಕೆಲಸಕ್ಕೆ ಬಾರದವರು ಎರಡೆರಡು ಬಾರಿ ಕೆನರಾದ ಎಂಪಿಯಾಗಿದ್ದು ದೌರ್ಭಾಗ್ಯವೇ ಸರಿ. ಜೋಯಿಡಾದ ರಾಮನಗರದ ಬಳಿ ವಾಸವಾಗಿದ್ದ ನಿವೃತ್ತ ಸೈನ್ಯಾಧಿಕಾರಿ, ಪ್ರಸಿದ್ಧ ಸಾಹಿತಿ ಮನೋಹರ್ ಮಾಳಗಾಂವ್ಕರ್ 1962ರಲ್ಲಿ ಸ್ಪರ್ಧಿಸಿದ್ದರು. ಅವರ ಮಹತ್ವ ಮತದಾರರಿಗೆ ಅರ್ಥವಾಗಲಿಲ್ಲ. ಆತ ಸೋತರು. ರಾಜಮಹಾರಾಜರು, ಗಂಗೆಯಲ್ಲಿ ತಿರುವು ತರಹದ ಕಾದಂಬರಿ ಇಂಗ್ಲಿಷ್‍ನಲ್ಲಿ ಬರೆದಿದ್ದ ಮಾಳಗಾಂವ್ಕರ್‍ನಂಥ ಜನರ ನಾಡಿಬಡಿತ ಬಲ್ಲವರ ಬದಲು ದಂಡಪಿಂಡ ಜೋಕಿಮ್‍ರನ್ನು ಜನ ಗೆಲ್ಲಿಸಿದ್ದರು.
1971ರಲ್ಲಿ ಇಂದಿರಾ ಗಾಳಿಯ ಅಲೆಯೇರಿ ಗೆದ್ದಿದ್ದು ಅಂದು ಸಹಕಾರಿ ಇಲಾಖೆಯ ಉನ್ನತ ಅಧಿಕಾರಿಯಾಗಿದ್ದ “ನಾಡವ” ಸಮುದಾಯದ ಬಿ.ವಿ.ನಾಯಕ್. ಭೂ ಮಾಲೀಕರ ವಿರುದ್ಧ ರೈತ-ಕೂಲಿಕಾರರ ಸಂಘಟಿಸಿ ಪ್ರಚಂಡ ಹೋರಾಟ ಕಟ್ಟಿದ್ದ ದೇಸಾಯರ ಎದುರು “ಅನಾಮಧೇಯ” ನಾಯಕ್ ಪಾರ್ಲಿಮೆಂಟ್ ಮೆಂಬರ್ ಆಗಿದ್ದರು. ನಾಯಕ್ ಮಹಾಮೇಧಾವಿ. ಅಂತಾರಾಷ್ಟ್ರಿಯ ವಿಷಯಗಳ ಮೇಲೆ ಪ್ರಭುತ್ವದಿಂದ ಮಾತಾಡುತ್ತಿದ್ದ ನಾಯಕ್ ಇಂದಿರಾ ಆಪ್ತ ವಲಯದಲ್ಲಿದ್ದರು. ಅಂದಿನ ಲೋಕಸಭಾ ಅಧ್ಯಕ್ಷ ಲ್ಲೋನ್‍ರ ಮೆಚ್ಚಿಗೆ ಪಡೆದಿದ್ದರು.
ಮಾದನ ಗೇರಿ, ಹಿರೇಗುತ್ತಿ ಬಡ ರೈತರಿಂದ ಹೊಲಗದ್ದೆ ಕಸಿದುಕೊಂಡು ಹೊರ ರಾಜ್ಯದ ಬಂಡವಾಳಶಾಹಿಗಳಿಗೆ ಕಾಸ್ಟಿಕ್ ಸೋಡಾ ತಯಾರಿಕೆಗೆ ಕೊಟ್ಟಾಗ ತಿರುಗಿ ಬಿದ್ದ ನಾಯಕ್ ಹೋರಾಟ ನಡೆಸಿದ್ದರು. ರೈತರಂತೆ ಕಚ್ಚೆ ಕಟ್ಟಿಕೊಂಡು ಪಾರ್ಲಿಮೆಂಟ್‍ಗೆ ಹೋಗಿ ಪ್ರತಿಭಟಿಸಿದ್ದರು. ಇದರಿಂದ ಅಂದಿನ ಸಿಎಂ ದೇವರಾಜ ಅರಸರ ಕೆಂಗಣ್ಣಿಗೆ ತುತ್ತಾದರು. ತುರ್ತುಪರಿಸ್ಥಿತಿ ವಿರೋಧಿಸಿ “ಲಾಂಗ್ ಲಾಂಗ್ ವೇ ಟು ಗೋ” ಎಂಬ ಪುಸ್ತಕ ಬರೆದು ಇಂದಿರೆಯ ಎದುರು ಹಾಕಿಕೊಂಡಿದ್ದರು. ನಂತರ ಕಾಂಗ್ರೆಸ್ ಟಿಕೆಟ್ ನಾಯಕ್‍ಗೆ ಸಿಗಲಿಲ್ಲ.
ತುರ್ತು ಪರಿಸ್ಥಿತಿ ಹೊತ್ತಲ್ಲಿ ಜೈಲು ಪಾಲಾಗಿದ್ದ “ಜಾಣ” ರಾಮಕೃಷ್ಣ ಹೆಗಡೆ 1977ರ ಎಲೆಕ್ಷನ್‍ನಲ್ಲಿ ಸಂಯುಕ್ತ ಜನತಾ ಪಕ್ಷದಿಂದ ಸ್ಪರ್ಧಿಸಿದ್ದರು. ಉತ್ತರ ಕನ್ನಡದಲ್ಲಿ ಹೆಗಡೆಗೆ ಎದುರಾಳಿ ಬಿ.ಪಿ.ಕದಮ್‍ಗಿಂತ ಹೆಚ್ಚು ಮತ ಬಂದಿತ್ತು. ಆದರೆ ಬೆಳಗಾವಿ ಜಿಲ್ಲೆಯ ಖಾನಾಪುರ-ಕಿತ್ತೂರಲ್ಲಿ ಹಿನ್ನಡೆಯಾಗಿ ಬರೀ ಮೂವತ್ತು ಸಾವಿರ ಮತದಿಂದ ಸೋಲಬೇಕಾಯ್ತು. ಆನಂತರ ಕಾಂಗ್ರೆಸ್‍ನ ಜೋಬದ್ರಗೇಡಿ ಎಂದೇ ಹೆಸರುವಾಸಿಯಾಗಿದ್ದ ದೇವರಾಯ ನಾಯ್ಕ ಸತತ ನಾಲ್ಕು ಬಾರಿ ಸಂಸದರಾಗಿದ್ದರು. ಇಂದಿರಾ ಮತ್ತು ಬಂ ಪ್ರಭಾವದಿಂದ ನಾಯ್ಕ್ ಗೆಲ್ಲುತ್ತಿದ್ದರು. ಉತ್ತರ ಕನ್ನಡದ ಹೊನ್ನಾವರ ಮೂಲದ ಜನಪ್ರಿಯ ಸಿನಿನಟ ಅನಂತನಾಗ್ ಜನತಾ ಪಕ್ಷದಿಂದ ಅಖಾಡಕ್ಕಿಳಿದಾಗ ಜಿಲ್ಲೆಯಲ್ಲಿ ಕೈಗಾ-ಸೀಬರ್ಡ್ ಪರಿಸರ ಹೋರಾಟ ಬಿರುಸಾಗಿತ್ತು. ಕೈಗಾ ವಿರೋಧಿ ಚಳವಳಿಯಲ್ಲಿದ್ದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ- ಪಕ್ಕದ ಉಡುಪಿ ಜಿಲ್ಲೆಯ ಶಿವರಾಮಕಾರಂತರನ್ನು ಪರಿಸರವಾದಿಗಳು ಕರೆತಂದು ಕಣಕ್ಕಿಳಿಸಿದ್ದರು.
ನಾಮಪತ್ರ ಕೊಟ್ಟ ಒಂದು ದಿನವೂ ಪ್ರಚಾರ ಮಾಡದೆ ಕಾರಂತರು ವಿದೇಶಕ್ಕೆ ಹೋದರು. ಚುನಾವಣೆ ಮುಗಿದಾಗ ಬಂದರು ಆದರೂ 58 ಸಾವಿರ ಮತ ಬಂದಿತ್ತು. ಕಾರಂತ್, ಅನಂತನಾಗ್ ಇಬ್ಬರೂ ಸೋತರು. ಅದೇ ನಿದ್ದೆಬಡುಕ ದೇನಾ ಗೆದ್ದಿದ್ದರು. ಇವತ್ತು ಜಿಲ್ಲೆಯ ಪೊಲಿಟಿಕಲ್ ಡಾನ್ ಎನಿಸಿರುವ ದೇಶಪಾಂಡೆ ಜನತಾ ಪಕ್ಷ, ಜನತಾದಳದಿಂದ ಎರಡೆರಡು ಬಾರಿ ಮುಗ್ಗರಿಸಿ ಬಿದ್ದವರೇ. ವೈಚಾರಿಕ ಸಾಹಿತಿ ಗೌರೀಶ್ ಕಾಯ್ಕಿಣಿ ಒಮ್ಮೆ ಸ್ಪರ್ಧಿಸಿದ್ದರು. ಅಧಿಕೃತವಾಗಿ ಕಾಯ್ಕಿಣಿ ಸೋತಿದ್ದರು; ಜಿಲ್ಲೆಯ ಮತದಾರರು ಎಡವಿದ್ದರು. ಜೋಕಿಮ್ ಆಳ್ವರ ಸೊಸೆ ಮ್ಯಾಗಿ ನಾಲ್ಕು ಬಾರಿ ಸ್ಪರ್ಧಿಸಿ ಒಮ್ಮೆ ಮಾತ್ರ ಗೆದ್ದಿದ್ದರು. ಆ ನಂತರದ್ದು ಸಂವಿಧಾನ ಬದಲಿಸುವ ಸಂಚಿನ, ದಲಿತರನ್ನು ನಾಯಿಗಳು ಎನ್ನುವ ಅನಂತ್ಮಾಣಿಯ ಹಿಂಧೂತ್ವದ ಅಂಧಯುಗ.
ಅಯೋಗ್ಯ ಮಾಣಿಯ ಗೆಲುವಿನ ಗುಟ್ಟು ಅಡಗಿರುವುದೇ ಮ್ಯಾಗಿ-ದೇಶ್ ಕಾಲೆಳೆದಾಟ ಮತ್ತು ಪುತ್ರ ವ್ಯಾಮೋಹದಲ್ಲಿ. ಪಾರ್ಟಿಯ ಸಬ್ಸಿಡಿ ಸೌಲತ್ತುಗಳೆಲ್ಲ ತಮ್ಮ ಕುಟುಂಬಕ್ಕಷ್ಟೇ ಸೀಮಿತ ಆಗಬೇಕೆಂಬ ಅವರ ಮಸಲತ್ತಿನಿಂದಾಗಿ ಎರಡನೇ ಸಾಲಿನ ನಾಯಕರ್ಯಾರನ್ನೂ ಬೆಳೆಸಲಿಲ್ಲ. ಆದರೆ ಮೋಟಿನ್ಸ್‍ರ ತಿಮ್ಮಪ್ಪ ಹೆಗಡೆ, ರಾಮಕೃಷ್ಣ ಹೆಗಡೆ, ಬಂಗಾರಪ್ಪ ತಮ್ಮ ಶಿಷ್ಯರಿಗೆ ಶಾಸಕ-ಮಂತ್ರಿ ಮಾಡಿ ನಾಯಕತ್ವ ಬೆಳೆಸಿದ್ದರು. ನಿಜಲಿಂಗಪ್ಪನವರು ಸಿಎಂ ಆಗಿದ್ದಾಗ ಜಿಲ್ಲೆಯಿಂದ ವಿಧಾನ ಪರಿಷತ್ತಿಗೆ ಶಿರಸಿಯ ಮೋಟಿನ್ಸರ್ ತಿಮ್ಮಪ್ಪ ಹೆಗಡೆ ನಾಮಕರಣಗೊಂಡಿದ್ದರು.
ಹಿರಿಯ ಮುತ್ಸದ್ದಿಯಾಗಿದ್ದ ತಿಮ್ಮಪ್ಪನವರನ್ನು ಮಂತ್ರಿ ಮಾಡಲು ನಿರ್ಧರಿಸಲಾಗಿತ್ತು. ಈ ಸುದ್ದಿ ಕೇಳಿ ತಿಮ್ಮಪ್ಪ ಖುಷಿ ಪಡಲಿಲ್ಲ, ಬದಲಿಗೆ ದಂಗಾದರು. `ನೇರವಾಗಿ ಜನರಿಂದ ಆಯ್ಕೆಯಾಗಿದ್ದ ಶಿರಸಿ ಶಾಸಕ ರಾಮಕೃಷ್ಣ ಹೆಗಡೆಯೇ ಮಂತ್ರಿಗಿರಿಗೆ ಅರ್ಹ. ನಾನು ನಾಮಕರಣ ಎಮ್ಮೆಲ್ಸಿ, ನನಗ್ಯಾಕೆ ಮಂತ್ರಿಗಿರಿ’ ಎಂದು ನಿರಾಕರಿಸುವ ತಿಮ್ಮಪ್ಪನವರು “ರಾಮಕೃಷ್ಣನಿಗೇ ಮಂತ್ರಿ ಮಾಡಿ” ಎಂದು ಸಿಎಂಗೆ ಹೇಳಿದ್ದರು. ತಿಮ್ಮಪ್ಪನವರ ಶಿಷ್ಯನಾಗಿ ರಾಜಕಾರಣ ಶುರುಮಾಡಿದ್ದ ರಾಕೃ ಹೆಗಡೆ ಮಂತ್ರಿ, ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ, ಕೇಂದ್ರ ಮಂತ್ರಿ ಆಗಿ ಬೆಳೆದದ್ದು ಇತಿಹಾಸ. ದುರಂತವೆಂದರೆ, ಹೆಗಡೆ ರಾಷ್ಟ್ರಮಟ್ಟದ ಇಮೇಜು ಬೆಳೆಸಿಕೊಂಡರೇ ಹೊರತು ಹೆತ್ತ ಜಿಲ್ಲೆಯ ಋಣ ತೀರಿಸಲೇ ಇಲ್ಲ!!
ಹೆಗಡೆಜೀ ಕೊಂಕಣ ದೇಶಪಾಂಡೆಯನ್ನು “ಸೈತಾನ”ನಾಗಿ ಬೆಳೆಸಿದರು. ದೀವರ ಆರ್.ಎಸ್.ನಾಯ್ಕರನ್ನು ರಾಜ್ಯಸಭೆಗೆ ಕಳಿಸಿದರು. ನೆರೆಯ ಶಿವಮೊಗ್ಗದ `ಬಂ’ಗೆ ಉತ್ತರ ಕನ್ನಡ (ಶಿರಸಿ) ಹೆಣ್ಣು ಕೊಟ್ಟ ಮಾವನ ಮನೆ. `ಬಂ’ ಕೆ.ಎಚ್.ಗೌಡ (ಹಾಲಕ್ಕಿ ಒಕ್ಕಲಿಗ), ಆರ್.ಎನ್.ನಾಯ್ಕ್ (ದೀವರು), ದೇವರಾಯ ನಾಯ್ಕ್ (ದೀವರು), ಪ್ರಭಾಕರ್ ರಾಣೆ (ಮರಠ), ವಂಸತ್ ಅಸ್ನೋಟಿಕರ್ (ದೇವಳಿ)ಯಂಥ ತೀರಾ ಹಿಂದುಳಿದ ವರ್ಗದವರನ್ನು ಶಾಸಕ-ಸಂಸದ-ಮಂತ್ರಿ ಮಾಡಿದ್ದರು.
ಅಂದಿನ ಲಿಬರಲ್ ನಾಯಕರಿಗೂ-ಇಂದಿನ ಪುಢಾರಿಗಳಿಗೂ ಇರುವ ವ್ಯತ್ಯಾಸವಿದು! ಇಂದು ಎರಡು-ಮೂರು ದಶಕದಿಂದ ಆಳುತ್ತಿರುವ ದೇಶ್, ಮ್ಯಾಗಿ, ಮಾಣಿಗಳೇ ಉತ್ತರ ಕನ್ನಡಕ್ಕೆ ದೊಡ್ಡ ಶಾಪವಾಗಿದ್ದಾರೆ. ಪ್ರಗತಿ, ಅಭಿವೃದ್ಧಿ, ಜನಹಿತದ ಯೋಜನೆ-ಯೋಚನೆಯ ನಾಯಕರೇ ಜಿಲ್ಲೆಯಲ್ಲಿಲ್ಲ. ನತದೃಷ್ಟ ಉತ್ತರ ಕನ್ನಡ ಜಿಲ್ಲೆಯ ನೋವಿನ ಪ್ರಶ್ನೆಗಳಿಗೆ ಉತ್ತರವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...