Homeಕರ್ನಾಟಕವಿಶೇಷ ವರದಿ: ರಂಗೇರಿದ ಕಸಾಪ ಚುನಾವಣೆ; ಮಹಿಳಾ ಅಧ್ಯಕ್ಷರಿಗಾಗಿ ಹೆಚ್ಚಿದ ಕೂಗು

ವಿಶೇಷ ವರದಿ: ರಂಗೇರಿದ ಕಸಾಪ ಚುನಾವಣೆ; ಮಹಿಳಾ ಅಧ್ಯಕ್ಷರಿಗಾಗಿ ಹೆಚ್ಚಿದ ಕೂಗು

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಚುನಾವಣೆಗೆ ಅಧಿಕೃತ ದಿನಾಂಕ ಘೋಷಣೆಯಾಗಿದ್ದು ಈ ಬಾರಿಯ ಚುನಾವಣೆಯು ನಾನಾ ಕಾರಣಗಳಿಗೆ ವಿಶೇಷವೆನಿಸಿದೆ. ಮೊದಲನೆಯದಾಗಿ, ಕಸಾಪ ಆರಂಭವಾಗಿ 100 ವರ್ಷಗಳು ಕಳೆದರೂ ಇದಕ್ಕೆ ಒಬ್ಬ ಮಹಿಳಾ ಅದ್ಯಕ್ಷರು ಕೂಡ ಆಯ್ಕೆಯಾಗದಿರುವುದು ವಿಷಾದದ ಸಂಗತಿ. ಆದರೆ ಈ ಬಾರಿ ಕಸಾಪಗೆ ಮಹಿಳಾ ಅಧ್ಯಕ್ಷರೇ ಆಗಬೇಕು ಎಂಬ ಕೂಗು ರಾಜ್ಯದಾದ್ಯಂತ ಬಲವಾಗಿ ಕೇಳಿಬರುತ್ತಿದೆ. ಇನ್ನು ಎರಡನೆಯದಾಗಿ, ಕನ್ನಡದ ಅಸ್ಮಿತೆಯ ಮೇಲೆ ತೀವ್ರ ದಾಳಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಕಸಾಪ ಚುನಾವಣೆ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಕನ್ನಡ-ಕರ್ನಾಟಕದ ಮೇಲಾಗುತ್ತಿರುವ ದಾಳಿಯನ್ನು ತಪ್ಪಿಸಲು, ಮುಂದೆ ಅಧ್ಯಕ್ಷಗಾದಿ ಹಿಡಿಯುವವರು ಯಾವ ಯೋಜನೆಗಳನ್ನು ಹಾಕಿಕೊಳ್ಳುತ್ತಾರೆ ಎನ್ನುವುದು ಈಗ ಪ್ರಮುಖ ವಿಷಯವಾಗಿದೆ.

ಇನ್ನು ಮೂರನೆಯದಾಗಿ, 2016ರಲ್ಲಿ ಕಸಾಪದ ಅಧ್ಯಕ್ಷರಾಗಿದ್ದ ಮನು ಬಳಿಗಾರ್ ಅಧ್ಯಕ್ಷರ ಅವಧಿಯನ್ನು 3 ವರ್ಷಗಳಿಂದ 5 ವರ್ಷಕ್ಕೆ ವಿಸ್ತರಿಸಿಕೊಂಡಿದ್ದರು. ರಾಜ್ಯದಲ್ಲಿ ಹಲವರು ಇದರ ಪರ ಮತ್ತು ವಿರೋಧದ ಚರ್ಚೆ ನಡೆಸಿದ್ದರು. ಇದನ್ನು ಮುಂದಿನ ಅಧ್ಯಕ್ಷರು ಹೇಗೆ ನಿಭಾಯಿಸಲಿದ್ದಾರೆ ಎಂಬ ಅಂಶವೂ ಪ್ರಮುಖವಾಗಿದೆ. ಇನ್ನು ಕೊನೆಯದಾಗಿ ಈ ಬಾರಿಯ ಚುನಾವಣೆಯಲ್ಲಿ ಹಲವರು ಸ್ಪರ್ಧಿಸುತ್ತಿದ್ದಾರೆ. ಕೊರೊನಾ ಕನ್ನಡ ಸಾಹಿತ್ಯ ಲೋಕದ ಮೇಲೂ ದೊಡ್ಡ ಪರಿಣಾಮವನ್ನುಂಟುಮಾಡಿರುವ ಈ ಸಂದರ್ಭದಲ್ಲಿ ಕಸಾಪ ತನ್ನ ಕಾರ್ಯಸೂಚಿಗಳನ್ನು ಇನ್ನಷ್ಟು ಬಲಪಡಿಸಿಕೊಂಡು ನವೀನ ರೀತಿಯಲ್ಲಿ ಕಾರ್ಯಪ್ರವೃತ್ತವಾಗಬೆಕಿದೆ. ಈ ಎಲ್ಲಾ ಕಾರಣಗಳಿಂದ ಈ ಬಾರಿಯ ಪರಿಷತ್ ಚುನಾವಣೆ ವಿಶೇಷವಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೀಯ ಸ್ಥಾನದ ಆಕಾಂಕ್ಷಿಗಳಾಗಿರುವ ದೂರದರ್ಶನ ನಿವೃತ್ತ ಅಧಿಕಾರಿ ಡಾ.ಮಹೇಶ್ ಜೋಷಿ, ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿಗಳಾದ ವ.ಚ.ಚನ್ನೇಗೌಡ, ಸಿ.ಕೆ.ರಾಮೇಗೌಡ, ಕೊಪ್ಪಳ ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ್ ಮಾಲಿ ಪಾಟೀಲ್, ಸಂಗಮೇಶ ಬಾದವಾಡಗಿ, ಹಿರಿಯ ಲೇಖಕಿ ಸರಸ್ವತಿ ಚಿಮ್ಮಲಗಿ ಸೇರಿದಂತೆ ಹಲವರು ಈ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದ್ದು ನಾಮಪತ್ರಗಳನ್ನು ಸಲ್ಲಿಸಿದ ಮೇಲೆ ಸ್ಪಷ್ಟಚಿತ್ರಣ ಸಿಗಲಿದೆ. ಮೇ 9ರಂದು ಚುನಾವಣೆ ನಡೆಯಲಿದೆ.

ಮನು ಬಳಿಗಾರ್

ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿದ ಕುರಿತು ಗೌರಿ ಲಂಕೇಶ್ ನ್ಯಾಯಪಥ ಪತ್ರಿಕೆಯೊಂದಿಗೆ ಮಾತನಾಡಿದ ಪ್ರಸ್ತುತ ಕಸಾಪದ ಅಧ್ಯಕ್ಷರಾದ ಮನು ಬಳಿಗಾರ್, “ಇದುವರೆಗೂ ಸಾಕಷ್ಟು ಅಧ್ಯಕ್ಷರುಗಳು ಈ ಅವಧಿಯನ್ನು ವಿಸ್ತರಿಸಿದ್ದಾರೆ. 8 ವರ್ಷಗಳವರೆಗೂ ಅಧ್ಯಕ್ಷರಾಗಿರುವ ಉದಾರಣೆಗಳಿವೆ. ಇದರ ನಡುವೆ ಯಾವುದೋ ಕಾರಣಕ್ಕೆ 3 ವರ್ಷಕ್ಕೆ ಇಳಿಸಲಾಗಿತ್ತು. ಈಗ ನಾನು 5 ವರ್ಷಕ್ಕೆ ಹೆಚ್ಚಿಸಿದ್ದೇನೆ. ಹಾಗಾಗಿ ಇದರಲ್ಲಿ ತಪ್ಪೇನಿಲ್ಲ. ಇನ್ನು ಕಳೆದ 105 ವರ್ಷಗಳಲ್ಲಿ ಆಗದ ಕೆಲಸಗಳನ್ನು ನಾವು ನಮ್ಮ ಅವಧಿಯಲ್ಲಿ ಮಾಡಿದ್ದೇವೆ. ಏನೂ ಗೊತ್ತಿಲ್ಲದವರು ಕಸಾಪದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅದನ್ನೂ ಒಪ್ಪಿಕೊಳ್ಳೋಣ. ಏಕೆಂದರೆ ಇದು ಪ್ರಜಾಸತ್ತಾತ್ಮಕ ವ್ಯವಸ್ಥೆ. ಆದರೆ ನಮ್ಮ ಅವಧಿಯಲ್ಲಿ ನಾವು ಮಾಡಿರುವ ಕೆಲಸ ಒಂದು ಪುಸ್ತಕದಷ್ಟಿದೆ. ಹಾಗಾಗಿಯೇ ’ಕಾಯಕ ನಿರತ’ ಎನ್ನುವ ಪುಸ್ತಕದಲ್ಲಿ ನಾವು ಮಾಡಿರುವ ಕೆಲಸಗಳ ಕುರಿತು ದಾಖಲೆ ಸಮೇತ ಮಾಹಿತಿ ನೀಡಿದ್ದೇವೆ” ಎನ್ನುತ್ತಾರೆ.

ಇನ್ನು ಚುನಾವಣೆಯ ಕುರಿತು ಪ್ರತಿಕ್ರಿಯಿಸಿ, “ಈ ಬಾರಿಯ ಚುನಾವಣೆಯ ವಿಷಯದಲ್ಲಿ ನಾನು ತಟಸ್ಥವಾಗಿದ್ದೇನೆ. ಏಕೆಂದರೆ ಈ ಬಾರಿ ಸ್ಪರ್ಧಿಸಿರುವವರೆಲ್ಲ ನನ್ನ ಅಭ್ಯರ್ಥಿಗಳೇ. ಅವರಲ್ಲಿ ಯಾರು ಗೆಲ್ಲುತ್ತಾರೋ ಕಾದು ನೋಡಬೇಕಿದೆ” ಎಂದು ಹೇಳಿದರು.

ಕಲಬುರ್ಗಿಯಲ್ಲಿ ಬೋಧಕರಾಗಿ ಸೇವೆ ಸಲ್ಲಿಸಿರುವ ಲೇಖಕಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಸರಸ್ವತಿ ಚಿಮ್ಮಲಗಿಯವರು ಈ ಬಾರಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅವರ ಪ್ರಕಾರ “ಕಳೆದ 105 ವರ್ಷದಲ್ಲಿ ಒಬ್ಬ ಮಹಿಳಾ ಸಾಹಿತಿಗಳು ಕಸಾಪಗೆ ಅಧ್ಯಕ್ಷರಾಗಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಒಂದು ಕಪ್ಪುಚುಕ್ಕೆ. ಹಾಗಾಗಿ ನಾನು ಈ ಸ್ಥಾನಕ್ಕೆ ಸ್ಪರ್ಧಿಸಬೇಕೆಂದು ಹಲವರು ಒತ್ತಾಯಿಸಿದರು. ಜೊತೆಗೆ ನನಗೆ ಅರ್ಹತೆಯಿದೆ ಎಂದೂ ಹೇಳಿದ್ದಾರೆ. ಜೊತೆಗೆ ಕನ್ನಡದ ಪರವಾಗಿ ಏನನ್ನಾದರೂ ಸಾಧಿಸಬೇಕು ಎನ್ನುವ ಹಂಬಲ ನನ್ನೊಳಗೆ ಇದೆ. ನಾನು ಅಧ್ಯಕ್ಷಳಾದರೆ, ಬೈಲಾದಲ್ಲಿ ಕೆಲವು ಸಣ್ಣಪುಟ್ಟ ಬದಲಾವಣೆಗಳನ್ನು ಮಾಡುತ್ತೇನೆ. ಜೊತೆಗೆ ಕನ್ನಡಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಬೇಕು ಎಂಬ ಆಸೆಯಿದೆ” ಎಂದು ತಿಳಿಸಿದರು.

ಹಿರಿಯ ಪತ್ರಕರ್ತರು ಮತ್ತು ಕನ್ನಡ ನುಡಿ ಪತ್ರಿಕೆಯ ಮಾಜಿ ಸಂಪಾದಕರಾದ ಮಹದೇವ್ ಪ್ರಕಾಶ್ ಅವರು ಕೂಡ ಕಸಾಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಇತ್ತು. ಇದರ ಬಗ್ಗೆ ಅವರ ಪ್ರತಿಕ್ರಿಯೆ ಕೋರಿದಾಗ “ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಆದರೆ ನನ್ನ ಕೆಲವು ಗೆಳೆಯರು ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದರು. ಹಾಗಾಗಿ ಇದರ ಬಗ್ಗೆ ಸ್ವಲ್ಪ ವಿಚಾರಣೆ ನಡೆಸಿದ್ದೆ. ಆದರೆ ಈ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಬೇಕಾದರೆ, ಕನಿಷ್ಟ 1.5 ಕೋಟಿ ಖರ್ಚಾಗುತ್ತದೆ. ಅಷ್ಟು ಹಣ ನನ್ನ ಬಳಿ ಇಲ್ಲ. ಒಂದು ವೇಳೆ ಇದ್ದರೂ ಸ್ಪರ್ಧಿಸುವುದಿಲ್ಲ. ನಾವು ಮತವನ್ನು ಮಾರಾಟ ಮಾಡಬಾರದು ಎಂಬುದನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಆದರೆ ಈಗ ನಾವೇ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಬೇಕಾದ ಪರಿಸ್ಥಿತಿ ಬರಬಾರದು ಎನ್ನುವ ಕಾರಣಕ್ಕೆ ಈ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ” ಎಂದರು.

ಕಸಾಪ ಅಧ್ಯಕ್ಷರ ಕೆಲಸಗಳನ್ನು ಕುರಿತು ಮಾತನಾಡಿದ ಅವರು, “ಯಾರೇ ಅಧ್ಯಕ್ಷರಾದರೂ, ಮೊದಲು ನಮ್ಮ ಅಕ್ಷರ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡಬೇಕು. ಇಂದಿನ ಡಿಜಿಟಲ್ ಯುಗದಲ್ಲಿ ಕನ್ನಡ ನಶಿಸುತ್ತಿದೆ. ಇದಕ್ಕೆ ಕಾರಣ ನಾವು ಕನ್ನಡದ ಬಳಕೆಯನ್ನು ಕಡಿಮೆ ಮಾಡಿರುವುದೆ ಅಗಿದೆ.

ಹಾಗಾಗಿ ನಮ್ಮ ಅಕ್ಷರ ಸಂಸ್ಕೃತಿಯನ್ನು ಉಳಿಸಬೇಕಾದ ತುರ್ತು ಇದೆ. ಇನ್ನು ಎರಡನೆಯದಾಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಖಾಸಗಿ ಶಾಲೆಗಳ ದರ್ಜೆಗೆ ಅಂದರೆ ಗುಣಮಟ್ಟಕ್ಕೆ ಏರಿಸಬೇಕು. ಮೂಲಭೂತವಾಗಿ ಇವೆರಡೂ ಕೆಲಸ ನಡೆದರೆ ಉಳಿದದ್ದೆಲ್ಲಾ ತಾನಾಗಿಯೇ ಆಗುತ್ತದೆ. ಇನ್ನೊಂದು ಪ್ರಮುಖವಾದ ವಿಷಯ, ಒಂದು ವೇಳೆ ನಾನು ಅಧ್ಯಕ್ಷನಾದರೆ, ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಿರುವುದನ್ನು ತಿದ್ದುಪಡಿಗೊಳಿಸಿ, 5 ವರ್ಷದಿಂದ ಮತ್ತೆ 3 ವರ್ಷಕ್ಕೆ ಇಳಿಸುತ್ತೇನೆ. ಏಕೆಂದರೆ ಎಲ್ಲಿ ಅಧಿಕಾರ ಎರಡನೇ ಅವಧಿಗೆ ಮುಂದುವರೆಯುತ್ತದೆಯೋ ಅಥವಾ ಎಲ್ಲಿ ಒಮ್ಮೆ ಅಧಿಕಾರ ಅನುಭವಿಸಿದವನು ಮತ್ತೊಮ್ಮೆ ಅಲ್ಲಿಯೇ ಮುಂದುವರಿಯುತ್ತಾನೆಯೋ ಅಲ್ಲಿ ಭ್ರಷ್ಟಾಚಾರ ಮತ್ತು ಅನೈತಿಕತೆ ತಲೆದೋರುತ್ತದೆ. ಹಾಗಾಗಿ ಮನು ಬಳಿಗಾರ್ ಅಧ್ಯಕ್ಷೀಯ ಅವಧಿಯನ್ನು ಹೆಚ್ಚಿಸಿ ಜನತೆಗೆ ವಂಚನೆ ಮಾಡಿದ್ದಾರೆ” ಎನ್ನುತ್ತಾರೆ.

ಈ ಚುನಾವಣೆಯ ಕುರಿತು ಮಾತನಾಡಿದ ಯುವ ಸಾಹಿತಿ-ಕವಿ ರಾಜೇಂದ್ರ ಪ್ರಸಾದ್, “ಯಾವುದೇ ಸಾಹಿತ್ಯ ಸಂಸ್ಥೆಗೂ ಸದಸ್ಯನಾಗಬಾರದು ಅಂತ ನಿರ್ಧಾರ ಮಾಡಿದ್ದೇನೆ. ಏಕೆಂದರೆ, ಇಂದು ಕಸಾಪ ಚುನಾವಣೆ ಪ್ರಜಾಸತ್ತಾತ್ಮಕವಾಗಿ ಉಳಿದಿಲ್ಲ. ಇಂದು ಚುನಾವಣೆಯಲ್ಲಿ ಆಯ್ಕೆಯಾಗಬೇಕಾದರೆ, ಒಂದು ಜಾತಿ ಬಲ ಬೇಕು ಅಥವಾ ಹಣಬಲ ಬೇಕು. ಇವುಗಳ ಆಧಾರದಲ್ಲಿ ಚುನಾವಣೆ ನಡೆಯುವಾಗ ನಾವು ಮತ ಹಾಕಿ ಏನು ಪ್ರಯೋಜನವಿದೆ? ಹಾಗಾಗಿ ನಾನು ಈ ಚುನಾವಣೆಯನ್ನು ಧಿಕ್ಕರಿಸುತ್ತೇನೆ” ಎಂದು ಹೇಳಿದರು.

ಮುಂದುವರೆದು “ಜೊತೆಗೆ ಕಸಾಪದಿಂದ ಸಮ್ಮೇಳನಗಳನ್ನು ನಡೆಸುವುದನ್ನು ಬಿಟ್ಟರೆ ಯಾವುದೇ ಉನ್ನತ ಕೆಲಸಗಳು ಆಗುತ್ತಿಲ್ಲ. ಹಾಗಾಗಿ ಇದನ್ನು ಉಳಿಸಿಕೊಳ್ಳುವುದಕ್ಕಿಂತ ಸ್ಥಗಿತಗೊಳಿಸುವುದೇ ಸೂಕ್ತ. ಇತಿಹಾಸವನ್ನು ನೆನೆಸಿಕೊಂಡು ಇಂತಿಂಥ ಒಳ್ಳೊಳ್ಳೆ ಕೆಲಸಗಳು ಆಗಿದ್ದವು ಅಂತ ಖುಷಿ ಪಡಬಹುದು. ಇಲ್ಲ ಇದನ್ನು ಸಂಪೂರ್ಣವಾಗಿ ಪುನರ್ರಚಿಸಬೇಕು. 50 ವರ್ಷದ ಮೇಲ್ಪಟ್ಟವರು ಈ ಚುನಾವಣೆಯಲ್ಲಿ ನಿಲ್ಲಲೇಬಾರದು. ಉಳಿದವರಿಗೆ ಅವಕಾಶ ಮಾಡಿಕೊಡಬೇಕು” ಎನ್ನುತ್ತಾರೆ.

ಈ ಚುನಾವಣೆಯ ಕುರಿತು ಮಾತನಾಡಿದ ಹಲವು ವರ್ಷಗಳಿಂದ ಕಸಾಪ ಸದಸ್ಯರಾಗಿದ್ದು ಮತದಾನ ಮಾಡುತ್ತಿರುವವರೊಬ್ಬರು, “ಇದುವರೆಗೂ ಕಸಾಪ ಕೇವಲ ಸಮ್ಮೇಳನಗಳನ್ನಷ್ಟೆ ಮಾಡಿಕೊಂಡು ಬಂದಿದೆ. ಈ ಹಿಂದೆ ಕೆಲವು ಮೇರು ಸಾಹಿತಿಗಳು ಅದ್ಯಕ್ಷರಾಗಿದ್ದಾಗ ಹಲವು ಅತ್ಯುನ್ನತ ಕೆಲಸಗಳಾಗಿವೆ. ಆದರೆ ಈಗ ಜಾತಿ ಮತ್ತು ಹಣದ ಆಧಾರದಲ್ಲಿ ಅಧ್ಯಕ್ಷರಾಗಿ ಬಂದವರು ಯಾವುದೇ ನ್ಯಾಯಯುತವಾದ ಕೆಲಸಗಳನ್ನು ಮಾಡುತ್ತಿಲ್ಲ. ಹಿಂದೆ ಕಸಾಪ ಮಾಡುತ್ತಿದ್ದ ಕೆಲಸಗಳನದ್ದೀಗ ವಿವಿಗಳು ಸೇರಿದಂತೆ ಇತರ ಅಕಾಡೆಮಿಗಳು ಮಾಡುತ್ತಿವೆ. ಹಾಗಾಗಿ ಕಸಾಪ ಇನ್ನೂ ಮೌಲ್ಯಯುತವಾದ ಕೆಲಸಗಳನ್ನು ಮಾಡಬೇಕಿದೆ” ಎಂದರು.

PC : ಭೀಮಾಸಿರಿ
(ಸರಸ್ವತಿ ಚಿಮ್ಮಲಗಿ)

“ಇನ್ನು ಮಹಿಳೆಯರು ಕಸಾಪದ ಅಧ್ಯಕ್ಷರಾಗುವುದು ತುಂಬಾ ದೂರದ ಮಾತು. ಈ ಚುನಾವಣೆಯೂ ಕೂಡ ರಾಜಕೀಯ ಚುನಾವಣೆಗಳಂತೆಯೇ ಆಗಿದೆ. ಇಲ್ಲಿಯೂ ಮಹಿಳೆಯರಿಗೆ ಅವಕಾಶವೇ ಇಲ್ಲ” ಎನ್ನುತ್ತಾರೆ.

ಕಸಾಪ ಹಿನ್ನೆಲೆ 

ಕನ್ನಡ ಭಾಷೆ, ಸಾಹಿತ್ಯ, ಕಲೆ, ಜನಪದ, ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಮಹದಾಶಯದೊಂದಿಗೆ ದಿನಾಂಕ 5-5-1915ರಲ್ಲಿ ಸ್ಥಾಪನೆಯಾದ ಕನ್ನಡಿಗರ ಸಾಂಸ್ಕೃತಿಕ ಮೇರು ಸಂಸ್ಥೆಯೇ ಕನ್ನಡ ಸಾಹಿತ್ಯ ಪರಿಷತ್ತು. ಕನ್ನಡ ಭಾಷೆಯಲ್ಲಿ ವಿವಿಧ ಗ್ರಂಥಗಳನ್ನು ರಚಿಸುವವರ ಪ್ರೋತ್ಸಾಹಕ್ಕಾಗಿ, ಸ್ವತಂತ್ರಾಧಿಕಾರವುಳ್ಳ ಪರಿಷತ್ತೊಂದು ಇರಬೇಕು ಮತ್ತು ಸರ್ಕಾರದವರು ಆ ಪರಿಷತ್ತನ್ನು ಅಂಗೀಕರಿಸಿ ಅದಕ್ಕೆ ವಿಶೇಷ ಸಹಾಯ ಮಾಡುವುದು ಉಚಿತ ಎಂದು 1914ರಲ್ಲಿ ಅಂದಿನ ಮೈಸೂರು ಸಂಸ್ಥಾನದ ಸಂಪದಭ್ಯುದಯ ಸಮಾಜ ತನ್ನ ವಾರ್ಷಿಕ ಅಧಿವೇಶನದಲ್ಲಿ ಕೈಗೊಂಡ ಮಹತ್ವದ ನಿರ್ಧಾರ ಕನ್ನಡ ಸಾಹಿತ್ಯ ಪರಿಷತ್ತಿನ ಉಗಮಕ್ಕೆ ಕಾರಣವಾಯ್ತು. ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಬೆಂಗಳೂರಿನ ಶಂಕರಪುರ ಬಡಾವಣೆಯಲ್ಲಿ ಚಿಕ್ಕ ಕೊಠಡಿಯೊಂದರಲ್ಲಿ ಆರಂಭವಾದ ಅಂದಿನ ಕರ್ಣಾಟಕ ಸಾಹಿತ್ಯ ಪರಿಷತ್ತೇ ಇಂದು ’ಕನ್ನಡ ಸಾಹಿತ್ಯ ಪರಿಷತ್ತು’ ಆಗಿ ಹೆಮ್ಮರವಾಗಿ ಬೆಳೆದಿದೆ.

ಅಂದಿನಿಂದಲೂ ಎಚ್ ವಿ ನಂಜುಂಡಯ್ಯ, ಶ್ರೀ ಯುವರಾಜ ಕಂಠೀರವ ನರಸಿಂಹರಾಜ ಒಡೆಯರ್, ಶ್ರೀ ಜಯಚಾಮರಾಜೇಂದ್ರ ಒಡೆಯರ್ ಬಹಾದೂರ್, ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್, ಪ್ರೊ. ಎ. ಎನ್. ಮೂರ್ತಿರಾವ್, ಶ್ರೀ ಜಿ. ನಾರಾಯಣ, ಡಾ. ಹಂಪನಾಗರಾಜಯ್ಯ, ಶ್ರೀ ಪುಂಡಲೀಕ ಹಾಲಂಬಿ, ಡಾ. ಚಂದ್ರಶೇಖರ ಪಾಟೀಲ, ಡಾ. ಸಾ. ಶಿ. ಮರುಳಯ್ಯ, ಶ್ರೀ ಗೊ. ರು. ಚನ್ನಬಸಪ್ಪ, ಶ್ರೀ ಜಿ.ಎಸ್. ಸಿದ್ಧಲಿಂಗಯ್ಯ ಸೇರಿದಂತೆ ಹಲವರು ಕಸಾಪ ಅಧ್ಯಕ್ಷರಗಿ ಸೇವೆ ಸಲ್ಲಿಸಿದ್ದಾರೆ.

ಚುನಾವಣಾ ಪ್ರಕ್ರಿಯೆ

2021ರ ಮೇ 9ಕ್ಕೆ ಮತದಾನ ನಡೆಯಲಿದ್ದು, ಮೇ 12ರಂದು ಫಲಿತಾಂಶ ಪ್ರಕಟವಾಗಲಿದೆ. ಕಸಾಪ ಸುಧಾರಣಾ ಸಲಹಾ ಸಮಿತಿ, ಹಾಲಿ ಸದಸ್ಯರಾದ ಎಸ್.ಟಿ.ಮೋಹನ್‌ರಾಜ್ ಅವರನ್ನು ವಿಶೇಷ ಚುನಾವಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಪರಿಷತ್‌ನ ನಿಬಂಧನೆಗಳಂತೆ ಚುನಾವಣಾ ಅಧಿಸೂಚನೆ ಹಾಗೂ ಮತದಾನಕ್ಕೆ ಅರ್ಹರಿರುವ ಕರಡು ಮತದಾರರ ಪಟ್ಟಿಯನ್ನು ಮಾ.25 ರಂದು ಪ್ರಕಟಿಸಲಾಗಿದೆ. ಸುಮಾರು 3 ಲಕ್ಷಕ್ಕೂ ಅಧಿಕ ಮತದಾರರು ರಾಜ್ಯದಾದ್ಯಂತ ಮತ ಚಲಾಯಿಸಲಿದ್ದಾರೆ. ಕಸಾಪ ಚುನಾವಣೆಯಲ್ಲಿ ಮತ ಚಲಾಯಿಸಲು ಕೆಲವು ನಿಯಮಗಳಿವೆ. 18 ವರ್ಷ ತುಂಬಿದವಾಗಿದ್ದು ಕನ್ನಡ ಬಲ್ಲವರು ಯಾರಾದರೂ ಕಸಾಪದ ಸದಸ್ಯರಾಗಬುದು. ಸದಸ್ಯರಾದ 3 ವರ್ಷದ ನಂತರ ಅವರು ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ 10 ವರ್ಷಗಳ ಹಿಂದಿನಿಂದ ಸತತವಾಗಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು 5 ವರ್ಷಗಳ ಹಿಂದಿನಿಂದ ಕಸಾಪ ಸದಸ್ಯರಾಗಿರಬೇಕು.

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಾ.29ರಿಂದ ಏಪ್ರಿಲ್ 7ರವರೆಗೆ ಅವಕಾಶವಿದೆ. ಏ.8ಕ್ಕೆ ನಾಮಪತ್ರ ಪರಿಶೀಲನೆ ಮತ್ತು ನಾಮಪತ್ರ ಹಿಂಪಡೆಯಲು ಏ.12ರ ಸೋಮವಾರ 3 ಗಂಟೆಯವರೆಗೆ ಅವಕಾಶವಿದೆ. ಮೇ 9ಕ್ಕೆ ಬೆಳಗ್ಗೆ 8 ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಮೇ 11ರಂದು ಅಂಚೆಪತ್ರಗಳ ಮತ ಎಣಿಕೆ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಫಲಿತಾಂಶ ಪ್ರಕಟ, ಮೇ12ಕ್ಕೆ ಕೇಂದ್ರ ಕಸಾಪ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ನಡೆಯಲಿದೆ. ಮತದಾರರ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ electionkasapa2020-21 ಮೊಬೈಲ್ ಆಪ್‌ನ್ನು ರೂಪಿಸಲಾಗಿದೆ. ಕಸಾಪ ಅಧಿಕೃತ ವೆಬ್‌ಸೈಟ್ www.kasapa.in ನಲ್ಲೂ ಸುಲಭವಾಗಿ ವಿವರಗಳನ್ನು ಪಡೆಯುವ ಹಾಗೆ ಹುಡುಕುವ ಆಯ್ಕೆ(ಸರ್ಚಿಂಗ್)ಯನ್ನು ಸಹ ರೂಪಿಸಲಾಗಿದೆ. ಮತದಾರರು ತಮ್ಮ ವಿವರಗಳನ್ನು ಇಲ್ಲಿ ಪಡೆಯಬಹುದಾಗಿದೆ.


ಇದನ್ನೂ ಓದಿ: APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...