Homeಚಳವಳಿರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಪತ್ರಕರ್ತ ಮಂದೀಪ್ ಪುನಿಯಾ, ಇದು ಬಿಜೆಪಿ ಕಾರ್ಯಕರ್ತ, ರಾವ್ ಕುಲ್‌ದೀಪ್ ಯಾದವ್ ನಡೆಸಿರುವ ಹಲ್ಲೆ ಎಂದು ಸಾಕ್ಷಿ ಸಮೇತ ವಿವರಿಸಿದ್ದಾರೆ. 

- Advertisement -
- Advertisement -

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರ ಬೆಂಗಾವಲಿನ ಮೇಲೆ ರಾಜಸ್ಥಾನದ ಅಲ್ವಾರ್‌ನಲ್ಲಿ ಬಿಜೆಪಿ ಬೆಂಬಲಿಗರು ಶುಕ್ರವಾರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ರಾಕೇಶ್ ಟಿಕಾಯತ್ ಅವರ ಕಾರಿನ ಕಿಟಕಿಗಳಿಗೆ ಹಾನಿಯಾಗಿದೆ.

ರಾಕೇಶ್ ಟಿಕಾಯತ್ ಅವರು ಅಲ್ವಾರ್‌ನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ. ಟಿಕಾಯತ್ ಅವರು ಹರ್ಸೋರಾದಲ್ಲಿ ನಡೆದ ರೈತ ಸಭೆ ಮುಗಿಸಿಕೊಂಡು ಬನ್ಸೂರ್‌ಗೆ ತೆರಳುತ್ತಿದ್ದರು. ಅಲ್ವಾರ್ ಜಿಲ್ಲೆಯ ತತಾರ್ಪುರ್ ಗ್ರಾಮದ ಬಳಿ ಟಿಕಾಯತ್ ಬೆಂಗಾವಲಿನ ಮೇಲೆ ಬಿಜೆಪಿ ಬೆಂಬಲಿಗರು ಕಲ್ಲು ಎಸೆಯಲು ಪ್ರಾರಂಭಿಸಿದರು ಎಂದು ಆರೋಪಿಲಾಗಿದೆ.

ರಾಕೇಶ್ ಟಿಕಾಯತ್ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಘಟನೆ ಬಗ್ಗೆ ಬರೆದುಕೊಂಡು, ಹಾನಿಗೊಳಗಾದ ಕಾರಿನ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಗೆ, ಈ ದಾಳಿಯನ್ನು “ಬಿಜೆಪಿ ಗೂಂಡಾಗಳು” ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತತಾರ್ಪುರದ ಬನ್ಸೂರ್ ರಸ್ತೆಯಲ್ಲಿ ಬಿಜೆಪಿ ಗೂಂಡಾಗಳಿಂದ ದಾಳಿ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ಟಿಕಾಯತ್ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ದಾಳಿಯ ನಂತರ ಟಿಕಾಯತ್ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಬಗ್ಗೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಪತ್ರಕರ್ತ ಮಂದೀಪ್ ಪುನಿಯಾ, ಇದು ಬಿಜೆಪಿ ಕಾರ್ಯಕರ್ತ ನಡೆಸಿರುವ ಹಲ್ಲೆ ಎಂದು ಸಾಕ್ಷಿ ಸಮೇತ ವಿವರಿಸಿದ್ದಾರೆ.

 

ರಾಕೇಶ್ ಟಿಕಾಯತ್ ಅವರ ಮೇಲೆ ನಡೆಸಿರುವವರ ಹಲ್ಲೆ ಬಗ್ಗೆ ಈವರೆಗೆ ನನಗೆ ತಿಳಿದಿರುವ ವಿವರಗಳನ್ನು ಹಂಚಿಕೊಳ್ಳತ್ತಿದ್ದೇನೆ ಎಂದಿರುವ ಮಂದೀಪ್ ಪುನಿಯಾ, ಹಲ್ಲೆ ನಡೆಸಿದ ಕಪ್ಪು ಬಣ್ಣದ ಕಾರು ಬಿಜೆಪಿಯ ರಾವ್ ಕುಲ್‌ದೀಪ್ ಯಾದವ್ ಅವರ ಗಾಡಿ ಎಂಬುದನ್ನು ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ನೇರ ಸಂಪರ್ಕದಲ್ಲಿರುವ, ರಾಜಸ್ಥಾನದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿರುವ ಸತೀಶ್ ಪುನಿಯಾ ಅವರೊಂದಿಗಿನ ಕವರ್‌ ಫೋಟೋ ಇರುವ ರಾವ್ ಕುಲ್‌ದೀಪ್ ಯಾದವ್ ಅವರ ಫೇಸ್‌ಬುಕ್‌ನಲ್ಲಿ ಈ ಕಾರು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ರಾವ್ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿದ್ದಾರೆ. ಇವರ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ನಾಲ್ಕು ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳಲ್ಲಿ ಬಂದು ರೈತರ ಪ್ರತಿಭಟನೆ ಬಗ್ಗೆ, ರೈತ ಹೋರಾಟದ ಪ್ರಾಮುಖ್ಯತೆ ಬಗ್ಗೆ ವಿವರಿಸುತ್ತಿದ್ದಾರೆ.


ಇದನ್ನೂ ಓದಿ: ವಿವಾದಿತ ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ: ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದ ಸ್ಥಾಯಿ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...