Homeಕರೋನಾ ತಲ್ಲಣಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

ಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೆಲ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕ. ಸುಧಾಕರ್‌ ಹೇಳಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗುರುವಾರ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಈ ಹಿನ್ನಲೆಯಲ್ಲಿ ಸಚಿವ ಸುಧಾಕರ್‌ ಸರಣಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಅವರು, “ಮುಖ್ಯಮಂತ್ರಿಯು, ಸಚಿವ ಸಂಪುಟದ ಸದಸ್ಯರು, ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಎಲ್ಲಾ ಆಯಾಮಗಳನ್ನು ಪರಿಗಣಿಸಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

“ಕಳೆದ ವರ್ಷದ ಲಾಕ್ ಡೌನ್ ಮತ್ತು ನಂತರದ ನಿರ್ಬಂಧಗಳಿಂದ ಚಿತ್ರರಂಗ ಸೇರಿದಂತೆ ಅನೇಕ ಉದ್ದಿಮೆ, ವ್ಯಾಪಾರ, ವಹಿವಾಟುಗಳಿಗೆ ತೊಂದರೆ ಆಗಿರುವುದರ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಕಳಕಳಿಯೂ ಇದೆ. ಆದರೆ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಮತ್ತೆ ಎದುರಾಗಿದೆ” ಎಂದು ಹೇಳಿದ್ದಾರೆ.

“ಈಗ ಲಸಿಕೆ ಸಹ ಲಭ್ಯವಿರುವುದರಿಂದ ಹೆಚ್ಚು ಹೆಚ್ಚು ಮಂದಿ ಲಸಿಕೆ ಪಡೆದು, ಕೆಲವು ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಿ ನಿಮ್ಮೆಲ್ಲರ ಸಹಕಾರದಿಂದ ಪ್ರಕರಣಗಳು ಕಡಿಮೆಯಾದರೆ ಮತ್ತೆ ಎಂದಿನಂತೆ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳನ್ನು ಪುನರಾರಂಭಿಸಬಹುದು” ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

“ಈ ನಿರ್ಧಾರ ವೈಜ್ಞಾನಿಕ ನೆಲೆಗಟ್ಟಿಯಲ್ಲಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಆಡಳಿತಾತ್ಮಕ ನಿರ್ಧಾರವಾಗಿದ್ದು ಇದನ್ನು ರಾಜಕೀಯ ಅಥವಾ ಇನ್ಯಾವುದೇ ದೃಷ್ಟಿಯಿಂದ ಪರಿಗಣಿಸಬಾರದು” ಎಂದು ಸುಧಾಕರ್‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

ಗುರುವಾರ ಕೊರೊನಾ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದು, ಅವುಗಳು ಕೆಳಗಿನಂತಿವೆ.

  • ವಿದ್ಯಾಗಮವೂ ಸೇರಿದಂತೆ 6-9 ನೇ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. 10,11 ಮತ್ತು 12 ತರಗತಿಗಳು ಪ್ರಸ್ತುತ ಇರುವಂತೆ ಮುಂದುವರೆಯುತ್ತವೆ.
  • ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ.
  • ಉನ್ನತ ತರಗತಿಗಳನ್ನು ಹೊರತು ಪಡಿಸಿ ಎಲ್ಲ ತರಗತಿಗಳು ಸ್ಥಗಿತ.
  • ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕ ಪ್ರಾರ್ಥನೆಗೆ ಅವಕಾಶ, ಗುಂಪಿನಲ್ಲಿ ಅವಕಾಶವಿಲ್ಲ.
  • ಜಿಮ್, ಪಾರ್ಟಿ ಹಾಲ್‌ಗಳು, ಈಜು ಕೊಳಗಳು ಮುಚ್ಚಲ್ಪಟ್ಟಿರುತ್ತವೆ.
  • ಯಾವುದೇ ಮುಷ್ಕರ, ಧರಣಿ, ರ್‍ಯಾಲಿಗಳು ನಿಷೇಧಿಸಲಾಗಿದೆ.
  • ಸಾರ್ವಜನಿಕ ಸಾರಿಗೆಗಳಲ್ಲಿ ನಿಗದಿಪಡಿಸಿರುವ ಆಸನದ ವ್ಯವಸ್ಥೆ ಮೀರುವಂತಿಲ್ಲ.
  • ಕಛೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅಭ್ಯಾಸ/ ವ್ಯವಸ್ಥೆ ಪಾಲಿಸುವುದು.

ಸೇರಿದಂತೆ ಹಲವಾರು ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು; ಕಾರಣವೇನು ಗೊತ್ತೆ?

 

Image

Image

ಇದನ್ನೂ ಓದಿ: ಸಚಿವ ಬಿ.ಸಿ. ಪಾಟೀಲ್‌ಗೆ ಕೊರೊನಾ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಅಮಾನತು!

Image

ಇದನ್ನೂ ಓದಿ: ತೆಲಂಗಾಣ: ಮಾವಿನ ಹಣ್ಣು ಕದ್ದರೆಂದು ಮಕ್ಕಳಿಗೆ ಸಗಣಿ ತಿನ್ನಿಸಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...