Homeಮುಖಪುಟಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿಯು ರಾಜ್ಯದಲ್ಲಿ ವಿಭಜಕ ರಾಜಕೀಯವನ್ನು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲೀಮೀನ್ (AIMIM) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಪಕ್ಷಗಳಿಗೆ ಬಿಜೆಪಿಯು ಹಣ ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರೈದಿಗಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ, “ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ಹರೇ ಕೃಷ್ಣ ಹರೆ ಹರೆ, ತೃಣಮೂಲ ಘರೆ ಘರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯು ಹರೇ ಕೃಷ್ಣ ಹರೆ ಹರೆ, ಹಿಂದೂ, ಮುಸ್ಲಿಂ ಬೇರೆ ಬೇರೆ, ಪರಿಶಿಷ್ಟ ಜಾತಿ (ಎಸ್‌ಸಿ) ಬೇರೆ ಬೇರೆ ಎಂದು ಹೇಳುತ್ತಿದೆ. ಅವರು ಬಂಗಾಳವನ್ನು ನಾಶಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಸಂಸ್ಕೃತಿ ಏನೆಂದರೆ, ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಚಹಾ ಸೇವಿಸುತ್ತಾರೆ ಮತ್ತು ದುರ್ಗಾ ಪೂಜೆಯನ್ನು ಒಟ್ಟಿಗೆ ಆಚರಿಸುತ್ತಾರೆ. ನಮ್ಮ ಹಳ್ಳಿಗಳಲ್ಲಿ ಅಶಾಂತಿ ಇದ್ದರೆ ಬಿಜೆಪಿಗೆ ಲಾಭವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

AIMIM ಮತ್ತು ಐಎಸ್‌ಎಫ್ ಮೇಲೆ ದಾಳಿ ಮಾಡಿದ ತೃಣಮೂಲ ಮಮತಾ, “ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಅವರಿಗೆ ಬಿಜೆಪಿ ಹಣ ನೀಡಿದೆ. ನಿಮಗೆ ವಿಭಜನೆ ಆಗಲು ಮನಸ್ಸಿಲ್ಲದೆ ಇದ್ದರೆ, ಎನ್ನಾರ್ಸಿ ಬೇಡವಾದರೆ ಅವರಿಗೆ ಮತ ಚಲಾಯಿಸಬೇಡಿ” ಎಂದು ಹೇಳಿದ್ದಾರೆ.

“ಅವರಿಗೆ ಮತ ನೀಡುವುದು ಬಿಜೆಪಿಗೆ ಮತ ನೀಡಿದಂತೆ. ನಂದಿಗ್ರಾಮದಲ್ಲಿ, ನಿಮ್ಮ ಮಗಳು ಮತ್ತು ಮಕ್ಕಳನ್ನು ಅಪಹರಿಸಲಾಗುವುದು, ಅದನ್ನೇ ಈ ಗೂಂಡಾಗಳು ಬೆದರಿಸುತ್ತಿದ್ದಾರೆ. ಹೊಗಿನವರಾದ ಬಿಜೆಪಿಯ ಗೂಂಡಾಗಳಿಗೆ ಮತಗಳನ್ನು ನೀಡಬೇಡಿ” ಎಂದು ಅವರು ಹೇಳಿದ್ದಾರೆ.

ಟಿಎಂಸಿಯಿಂದ ಟಿಕೆಟ್ ನಿರಾಕರಿಸಿದ ಜನರನ್ನು ಹೆಸರಿಸಿದ ಮಮತಾ, ಅವರು ಬಿಜೆಪಿಯ ಜನರು ಎಂದು ಆರೋಪಿಸಿದರು. “ನಿಮಗೆ ಮಮತಾ ಬೇಕಾದರೆ, ಟಿಎಂಸಿಗೆ ಮತ ನೀಡಿ. ಇದು ದೆಹಲಿ ಚುನಾವಣೆಯಲ್ಲ ಬಂಗಾಳದ ಚುನಾವಣೆ” ಎಂದು ಜನತೆಗೆ ನೆನಪಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ಮೊದಲ ಎರಡು ಹಂತಗಳ ಮತದಾನ ಕ್ರಮವಾಗಿ ಮಾರ್ಚ್ 27 ಮತ್ತು ಏಪ್ರಿಲ್ 1 ರಂದು ನಡೆಯಿತು. ಮುಂದಿನ ಹಂತದ ಮತದಾನ ಏಪ್ರಿಲ್ 6 ರಂದು ನಡೆಯಲಿದೆ.

ಇದನ್ನೂ ಓದಿ: ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ. ಸ್ಟಾಲಿನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...