Homeಮುಖಪುಟಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿಯು ರಾಜ್ಯದಲ್ಲಿ ವಿಭಜಕ ರಾಜಕೀಯವನ್ನು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲೀಮೀನ್ (AIMIM) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಪಕ್ಷಗಳಿಗೆ ಬಿಜೆಪಿಯು ಹಣ ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರೈದಿಗಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ, “ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ಹರೇ ಕೃಷ್ಣ ಹರೆ ಹರೆ, ತೃಣಮೂಲ ಘರೆ ಘರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯು ಹರೇ ಕೃಷ್ಣ ಹರೆ ಹರೆ, ಹಿಂದೂ, ಮುಸ್ಲಿಂ ಬೇರೆ ಬೇರೆ, ಪರಿಶಿಷ್ಟ ಜಾತಿ (ಎಸ್‌ಸಿ) ಬೇರೆ ಬೇರೆ ಎಂದು ಹೇಳುತ್ತಿದೆ. ಅವರು ಬಂಗಾಳವನ್ನು ನಾಶಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಸಂಸ್ಕೃತಿ ಏನೆಂದರೆ, ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಚಹಾ ಸೇವಿಸುತ್ತಾರೆ ಮತ್ತು ದುರ್ಗಾ ಪೂಜೆಯನ್ನು ಒಟ್ಟಿಗೆ ಆಚರಿಸುತ್ತಾರೆ. ನಮ್ಮ ಹಳ್ಳಿಗಳಲ್ಲಿ ಅಶಾಂತಿ ಇದ್ದರೆ ಬಿಜೆಪಿಗೆ ಲಾಭವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

AIMIM ಮತ್ತು ಐಎಸ್‌ಎಫ್ ಮೇಲೆ ದಾಳಿ ಮಾಡಿದ ತೃಣಮೂಲ ಮಮತಾ, “ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಅವರಿಗೆ ಬಿಜೆಪಿ ಹಣ ನೀಡಿದೆ. ನಿಮಗೆ ವಿಭಜನೆ ಆಗಲು ಮನಸ್ಸಿಲ್ಲದೆ ಇದ್ದರೆ, ಎನ್ನಾರ್ಸಿ ಬೇಡವಾದರೆ ಅವರಿಗೆ ಮತ ಚಲಾಯಿಸಬೇಡಿ” ಎಂದು ಹೇಳಿದ್ದಾರೆ.

“ಅವರಿಗೆ ಮತ ನೀಡುವುದು ಬಿಜೆಪಿಗೆ ಮತ ನೀಡಿದಂತೆ. ನಂದಿಗ್ರಾಮದಲ್ಲಿ, ನಿಮ್ಮ ಮಗಳು ಮತ್ತು ಮಕ್ಕಳನ್ನು ಅಪಹರಿಸಲಾಗುವುದು, ಅದನ್ನೇ ಈ ಗೂಂಡಾಗಳು ಬೆದರಿಸುತ್ತಿದ್ದಾರೆ. ಹೊಗಿನವರಾದ ಬಿಜೆಪಿಯ ಗೂಂಡಾಗಳಿಗೆ ಮತಗಳನ್ನು ನೀಡಬೇಡಿ” ಎಂದು ಅವರು ಹೇಳಿದ್ದಾರೆ.

ಟಿಎಂಸಿಯಿಂದ ಟಿಕೆಟ್ ನಿರಾಕರಿಸಿದ ಜನರನ್ನು ಹೆಸರಿಸಿದ ಮಮತಾ, ಅವರು ಬಿಜೆಪಿಯ ಜನರು ಎಂದು ಆರೋಪಿಸಿದರು. “ನಿಮಗೆ ಮಮತಾ ಬೇಕಾದರೆ, ಟಿಎಂಸಿಗೆ ಮತ ನೀಡಿ. ಇದು ದೆಹಲಿ ಚುನಾವಣೆಯಲ್ಲ ಬಂಗಾಳದ ಚುನಾವಣೆ” ಎಂದು ಜನತೆಗೆ ನೆನಪಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ಮೊದಲ ಎರಡು ಹಂತಗಳ ಮತದಾನ ಕ್ರಮವಾಗಿ ಮಾರ್ಚ್ 27 ಮತ್ತು ಏಪ್ರಿಲ್ 1 ರಂದು ನಡೆಯಿತು. ಮುಂದಿನ ಹಂತದ ಮತದಾನ ಏಪ್ರಿಲ್ 6 ರಂದು ನಡೆಯಲಿದೆ.

ಇದನ್ನೂ ಓದಿ: ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ. ಸ್ಟಾಲಿನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...