Homeಮುಖಪುಟಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಸಹ ಜನರು ಬಿಡುವುದಿಲ್ಲ. - ರಾಕೇಶ್ ಟಿಕಾಯತ್

- Advertisement -
- Advertisement -

ನಿನ್ನೆ ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಸ್ಥಳೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಸೇರಿದಂತೆ ಇತರ ಮೂವರನ್ನು ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.

ಇನ್ನು ಘಟನೆಗೆ ಬಿಜೆಪಿಯೇ ನೇರ ಕಾರಣ ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಸಹ ಜನರು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ದಾಳಿಕೋರರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಯ ಸಕ್ರಿಯ ಸದಸ್ಯರಾಗಿದ್ದಾರೆ ಮತ್ತು ಸ್ಥಳೀಯ ಸಂಸದ ಬಾಲಕ್ ನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪುನಿಯಾ ಅವರ ಆಪ್ತರಾಗಿದ್ದಾರೆ ಎಂದು ಟಿಕಾಯತ್ ಹೇಳಿದ್ದಾರೆ.

“ನಾವು ಮುಂದಿನ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುತ್ತೇವೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ ಮತ್ತು ನಮ್ಮ ಕಾರ್ಯಕ್ರಮಗಳು ಯೋಜಿಸಿದಂತೆ ಮುಂದುವರಿಯುತ್ತದೆ ಎಂದಿರುವ ಟಿಕಾಯತ್, ಈ ದಾಳಿಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ” ಅವರು ಎಲ್ಲಾ ರೈತರಿಗೆ ಮನವಿ ಮಾಡಿದ್ದಾರೆ.

“ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್‌ರವರ ಬೆಂಗಾವಲು ವಾಹನದ ಮೇಲಿನ ಬಿಜೆಪಿ ಗೂಂಡಾಗಳ ಹಲ್ಲೆ ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿಯು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದರ ಮೂಲಕ ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ರೈತರ ಹಕ್ಕುಗಳ ಪರವಾಗಿ ಹೋರಾಡುತ್ತಿರುವವರ ವಿರುದ್ಧ ಅಪ್ರಜಾತಾಂತ್ರಿಕ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಯುಕ್ತ ಹೋರಾಟ – ಕರ್ನಾಟಕವು ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿದೆ. ಈ ಎಲ್ಲಾ ಅನ್ಯಾಯಗಳ ಫಲವನ್ನು ಮೋದಿ ಸರ್ಕಾರ ಸದ್ಯದಲ್ಲಿಯೇ ಅನುಭವಿಸಲಿದೆ ಎಂದು ಹೇಳಿಕೆಯಲ್ಲಿ ಸಂಯುಕ್ತು ಹೋರಾಟ ಕರ್ನಾಟಕದ ಪರವಾಗಿ ಬಡಗಲಪುರ ನಾಗೇಂದ್ರ, ಜಿ.ಸಿ ಬಯ್ಯಾರೆಡ್ಡಿ ಮತ್ತು ಪಿ.ಗೋಪಾಲ್ ತಿಳಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ನಾಲ್ಕು ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳಲ್ಲಿ ಭಾಗವಹಿಸಿ ಹೋರಾಟಕ್ಕೆ ಹುರುಪು ತುಂಬುತ್ತಿದ್ದಾರೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...