Homeಅಂತರಾಷ್ಟ್ರೀಯಹೆಚ್ಚುತ್ತಿರುವ ಕೊರೊನಾ: ಬಾಂಗ್ಲಾದೇಶದಲ್ಲಿ ಒಂದು ವಾರ ದೇಶವ್ಯಾಪಿ ಲಾಕ್‌ಡೌನ್‌‌

ಹೆಚ್ಚುತ್ತಿರುವ ಕೊರೊನಾ: ಬಾಂಗ್ಲಾದೇಶದಲ್ಲಿ ಒಂದು ವಾರ ದೇಶವ್ಯಾಪಿ ಲಾಕ್‌ಡೌನ್‌‌

- Advertisement -
- Advertisement -

ಕೊರೊನಾ ಪ್ರಕರಣಗಳು ಮತ್ತು ಸಾವುಗಳು ದೇಶಾದ್ಯಂತ ಹೆಚ್ಚಾಗುತ್ತಿರುವುದರಿಂದ ಬಾಂಗ್ಲಾದೇಶ ಸರ್ಕಾರ ಸೋಮವಾರದಿಂದ ಒಂದು ವಾರದವರೆಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲು ನಿರ್ಧರಿಸಿದೆ. ಶನಿವಾರ ಡಾಕಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಸ್ತೆ ಸಾರಿಗೆ ಸಚಿವ ಒಬೈದುಲ್ ಖಾದರ್ ಈ ಘೋಷಣೆಯನ್ನು ಮಾಡಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಬಾಂಗ್ಲಾದೇಶ ಶುಕ್ರವಾರ 6,830 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು ದೇಶದಲ್ಲಿ ದಾಖಲಾದ ಒಂದು ದಿನದ ಅತಿ ಹೆಚ್ಚು ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ ಒಟ್ಟು 624,594 ಜನರು ಸೋಂಕಿಗೆ ಒಳಗಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 50 ಜನರು ಸೋಕಿನಿಂದಾಗಿ ಮೃತಪಟ್ಟಿದ್ದು, ದೇಶದ ಒಟ್ಟು ಸಾವಿನ ಸಂಖ್ಯೆ 9,155 ಕ್ಕೆ ತಲುಪಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ವೈರಸ್ ಹರಡುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ, ದೇಶಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಮತ್ತು ಸಾವುಗಳು ಹೆಚ್ಚಾಗುತ್ತಿರುವುದರಿಂದ ಸೋಮವಾರದಿಂದ ಏಳು ದಿನಗಳು ಲಾಕ್‌ಡೌನ್ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಆಡಳಿತಾರೂಢ ಅವಾಮಿ ಲೀಗ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಖಾದರ್‌ ಹೇಳಿದ್ದಾರೆ.

ಆದಾಗ್ಯೂ, ಅತ್ಯಗತ್ಯ ಮತ್ತು ತುರ್ತು ಸೇವೆಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಕಾರ್ಖಾನೆಗಳು ತೆರೆದಿರುತ್ತವೆ ಮತ್ತು ನೈರ್ಮಲ್ಯ ನಿಯಮಗಳನ್ನು ಅನುಸರಿಸುವ ಮೂಲಕ ಕಾರ್ಮಿಕರು ಪಾಳಿಯಲ್ಲಿ ಕೆಲಸ ಮಾಡಬಹುದಾಗಿದೆ.

“ಈ ಲಾಕ್‌ಡೌನ್ ಸಮಯದಲ್ಲಿ ಪ್ರತಿಯೊಂದು ಕಚೇರಿ ಮತ್ತು ನ್ಯಾಯಾಲಯವನ್ನು ಮುಚ್ಚಲಾಗುವುದು ಆದರೆ ಕೈಗಾರಿಕೆಗಳು ಮತ್ತು ಕಾರ್ಖಾನೆ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ” ಎಂದು ರಾಜ್ಯ ಸಾರ್ವಜನಿಕ ಆಡಳಿತ ಸಚಿವ ಫರ್ಹಾದ್ ಹುಸೇನ್ ಅವರು ಡಾಕಾ ಟ್ರಿಬ್ಯೂನ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಗಂಡಾಳಿಕೆಯನ್ನು ಬಿಂಬಿಸುವ ಕೋರ್ಟುಗಳಿಗೆ ’ಸುಪ್ರೀಮ್’ ಕಡಿವಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...