Homeಅಂಕಣಗಳುನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

ನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

- Advertisement -
- Advertisement -

ದಕ್ಷಿಣ ಭಾರತವನ್ನು ಬಿಟ್ಟರೆ, ದೇಶದಲ್ಲಿ ಎಲ್ಲಿಯಾದರೂ ಮೋದಿ ವಿರೋಧಿ ಭಾವನೆ ಜನರಲ್ಲಿ ಬೆಳೆಯುತ್ತಿದ್ದರೆ ಅದು ಗುಜರಾತ್‍ನಲ್ಲಿ ಮಾತ್ರ ಎಂದು ಭಾವಿಸಲು ಕಾರಣಗಳಿವೆ. ಅಲ್ಲಿನ ಜನರು ಖುದ್ದು ಮೋದಿಯ ಆಡಳಿತವನ್ನೇ ನೋಡಿದ್ದಾರೆ. ಹಾಗಾಗಿ ಆಡಳಿತ ವಿರೋಧಿ ಅಲೆ ಕೇಂದ್ರ ಸರ್ಕಾರದ ವಿರುದ್ಧ ಬಲಿಯಲು ಮಿಕ್ಕ ಭಾಗಗಳಲ್ಲಿ ಸಮಯ ಬೇಕಾಗಬಹುದಾದರೂ, ಗುಜರಾತ್‍ನಲ್ಲಿ ಹಾಗಿಲ್ಲ. ಇದರ ಸೂಚನೆಯು ಕಳೆದ ವಿಧಾನಸಭಾ ಚುನಾವಣೆಯಲ್ಲೇ ಸಿಕ್ಕಿತ್ತು. ಈಗ ಲೋಕಸಭಾ ಚುನಾವಣೆಯಲ್ಲಂತೂ ಬಿಜೆಪಿ ಹೆದರಿ ಕೊಂಡಿರುವುದು ಸ್ಪಷ್ಟವಾಗಿದೆ.
ಗುಜರಾತಿ ನಲ್ಲಿ ಎಲ್ಲಿ ನೋಡಿದರೂ ಭಾರತೀಯ ಜನತಾ ಪಾರ್ಟಿಯ ಬಿಲ್‍ಬೋರ್ಡ್ ಗಳೇ ಕಾಣುತ್ತಿವೆ. ಅದರೊಂದಿಗೆ ರಾಜ್ಯದಲ್ಲಿ ಟಿವಿ ಮತ್ತು ಸಾಮಾಜಿಕ ಜಾಲತಾಣ ಗಳಲ್ಲೂ ಬಿಜೆಪಿಯೇ ಕಾಣಿಸಿಕೊಳ್ಳುತ್ತಿದೆ. ಗುಜರಾತಿನ ಮುಖ್ಯ ಚುನಾವಣಾಧಿಕಾರಿಯ ಪ್ರಕಾರ, ಟಿವಿಯಲ್ಲಿ, ರೇಡಿಯೋದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ 88% ರಷ್ಟು ರಾಜಕೀಯ ಜಾಹೀರಾತುಗಳು ಬಿಜೆಪಿಯದ್ದೇ ಆಗಿವೆ.
ಮುಖ್ಯ ಚುನಾವಣಾಧಿಕಾರಿಯ ಮೀಡಿಯಾ ಸರ್ಟಿಫಿಕೇಷನ್ ಆ್ಯಂಡ್ ಮಾನಿಟರಿಂಗ್ ಕಮಿಟಿಯು ಯಾವುದೇ ಡಿಜಿಟಲ್ ಮಾಧ್ಯಮದಲ್ಲಿ ಬರುವ ರಾಜಕೀಯ ವಿಷಯಗಳಿಗೆ ಅನುಮತಿ ನೀಡುವ ಅಧಿಕಾರ ಹೊಂದಿದೆ. 22 ಏಪ್ರಿಲ್‍ವರೆಗೆ ಅವರ ಹತ್ತಿರ ಬಂದ 200 ಅರ್ಜಿಗಳಲ್ಲಿ 173 ಬಿಜೆಪಿಯಿಂದ ಬಂದಿದ್ದರೆ 27 ಕಾಂಗ್ರೆಸ್ಸಿನಿಂದ ಬಂದಿದ್ದವು. ಅದರಲ್ಲಿ ಬಿಜೆಪಿಯ 112 ಮತ್ತು ಕಾಂಗ್ರೆಸ್ಸಿನ 15 ವಿಷಯಗಳಿಗೆ ಅನುಮತಿ ನೀಡಲಾಯಿತು.
ಪ್ರಧಾನಮಂತ್ರಿಯವರ ರಾಜ್ಯದಲ್ಲಿಯೇ ಈ ಪ್ರಮಾಣದ ಜಾಹೀರಾತುಗಳನ್ನು ನೋಡಿ, ಬಿಜೆಪಿ ಈ ಚುನಾವಣೆಗಳಲ್ಲಿ ಯಾಕೋ ತುಂಬಾ ನರ್ವಸ್ ಆಗಿದೆ ಎನ್ನುವ ಆಲೋಚನೆ ತೇಲಿಬರುತ್ತಿದೆ.
ಗುಜರಾತಿನ ಕಾಂಗ್ರೆಸ್ ವಕ್ತಾರ ಮನೀಷ್ ದೋಷಿ ಹೇಳಿದ್ದೇನೆಂದರೆ, “ಬಿಜೆಪಿ ಎನ್ನುವ ಪಕ್ಷ ಒಂದು ಪ್ರಚಾರದ ಪಕ್ಷ, ಪ್ರಧಾನಿ ಮೋದಿಯವರು ಪ್ರಚಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ ಮೋದಿ ಸರಕಾರ ಏನಾದರೂ ಕೆಲಸ ಮಾಡಿದ್ದಲ್ಲಿ, ಜಾಹಿರಾತುಗಳಿಗಾಗಿ ಇಷ್ಟೊಂದು ಹಣ ಪೋಲು ಮಾಡುತ್ತಿರಲಿಲ್ಲ”.
“ಕಾಂಗ್ರೆಸ್ ನಕಾರಾತ್ಮಕ ಪ್ರಚಾರ ಮಾಡುತ್ತಿದೆ, ಆ ಕಾರಣದಿಂದಾಗಿಯೇ ಅಧಿಕೃತ ಅನುಮತಿ ಸಿಗುವುದಿಲ್ಲ. ಅವರು ನೆಗೆಟಿವ್ ಪ್ರಚಾರದ ಮೇಲೆಯೇ ಗಮನಹರಿಸುತ್ತಿರುವುದರಿಂದ ಅವರ ಜಾಹಿರಾತುಗಳ ಸಂಖ್ಯೆ ಕಡಿಮೆ. ನಾವು ಸಕಾರಾತ್ಮಕ ಪ್ರಚಾರ ಮಾಡುತ್ತೇವೆ” ಇದು ಗುಜರಾತಿನ ಬಿಜೆಪಿ ವಕ್ತಾರ ಭರತ್ ಪಾಂಡ್ಯಾ ಹೇಳಿದ್ದು.
ಎಲ್ಲೆಲ್ಲೂ ಮೋದಿ
ಗುಜರಾತಿನಾದ್ಯಂತ ಎಲ್ಲಾ ಭಿತ್ತಿಪತ್ರಗಳು ಮತ್ತು ಇತರೆ ಪ್ರಚಾರ ಸಾಮಗ್ರಿಗಳಲ್ಲಿ ಕಂಡುಬರುವುದು ಮೋದಿಯ ಚಿತ್ರ ಮಾತ್ರ. ಅವರ ಚಿತ್ರದೊಂದಿಗೆ, ‘ಈ ಸಲವೂ ಮೋದಿ ಸರಕಾರ’ ಎನ್ನುವ ಸಂದೇಶವಿರುತ್ತದೆ. ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಸರಕಾರದ ವಿರುದ್ಧ ಹುಟ್ಟಿಕೊಂಡಿರುವ ವ್ಯಾಪಾರಿಗಳ ಮತ್ತು ರೈತರ ಸಿಟ್ಟನ್ನು ಶಮನಗೊಳಿಸುವುದಕ್ಕಾಗಿಯೇ ಬಿಜೆಪಿಯ ತಂತ್ರಗಾರಿಕೆ ರೂಪಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಕಂಡುಬರುತ್ತಿದೆ.
2017ರ ವಿಧಾನಸಭೆ ಚುನಾವಣೆಗಳ ನೆನಪು ಇನ್ನು ಹಸಿಯಾಗಿಯೇ ಇದೆ. ಆಗ ಕಾಂಗ್ರೆಸ್ ಬಲವಾದ ಪೈಪೋಟಿಯನ್ನು ನೀಡಿತ್ತು. ಮೋದಿ ಅಲೆಯ ಹೊರತಾಗಿಯೂ ಬಿಜೆಪಿಯ ಸಂಖ್ಯೆ 100ಕ್ಕಿಂತ ಕೆಳಗಿಳಿಯಿತು ಮತ್ತು ಕಾಂಗ್ರೆಸ್ ಪಡೆದ ಸೀಟುಗಳು ಕಳೆದ ಎರಡು ದಶಕಗಳಲ್ಲಿಯೇ ಅತ್ಯಂತ ಹೆಚ್ಚು.
ರಾಜ್ಯದಲ್ಲಿ 26 ಸೀಟುಗಳಲ್ಲಿ 20 ಆದರೂ ಗೆಲ್ಲಲು ಬಿಜೆಪಿ ಮತ್ತೆ ಮೋದಿ ಬ್ರ್ಯಾಂಡ್ ಮೇಲೆಯೇ ನೆಚ್ಚಿಕೊಂಡಿದೆ. ನೆನಪಿಡಿ, 2014ರಲ್ಲಿ ಬಿಜೆಪಿ ಎಲ್ಲ 26 ಸೀಟುಗಳನ್ನು ಗೆದ್ದುಕೊಂಡಿತ್ತು. ಇಂದು, ಎಪ್ರಿಲ್ 23ರಂದು ಗುಜರಾತಿನ ಎಲ್ಲ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಲೋಕಸಭಾ ಕ್ಷೇತ್ರಗಳಿಗೆ ಅನ್ವಯಿಸಿ ನೋಡುವುದಾದರೆ, ಕಾಂಗ್ರೆಸ್ ಐದಾರು ಸೀಟುಗಳಲ್ಲಿ ಗೆಲ್ಲಬೇಕು.
ಅದನ್ನು ದಾಟಿ ಅಲ್ಲಿನ ರೈತರ, ಗೋಪಾಲಕರ, ಪಾಟೀದಾರರ ಹಾಗೂ ಸಣ್ಣ ವ್ಯಾಪಾರಸ್ಥರ ಅಸಮಾಧಾನವು ಬಿಜೆಪಿ ವಿರುದ್ಧದ ಮತಗಳಾಗಿ ಧ್ರುವೀಕರಣಗೊಳ್ಳುತ್ತದಾ ಎಂಬುದು ಬಿಜೆಪಿಯ ದೌರ್ಬಲ್ಯದ ಮೇಲಷ್ಟೇ ಅವಲಂಬಿಸಿಲ್ಲ. ಅದು ಕಾಂಗ್ರೆಸ್ಸಿನ ಸಾಮಥ್ರ್ಯದ ಮೇಲೆ ನಿಂತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ನ ನೇರ ಪಾಲ್ಗೊಳ್ಳುವಿಕೆಯಿಂದ ಚುರುಕಾಗಿದ್ದ ಸ್ಥಳೀಯ ಕಾಂಗ್ರೆಸ್ ದೇಶವ್ಯಾಪಿ ಚುನಾವಣೆ ನಡೆಯುತ್ತಿರುವಾಗ ಅಷ್ಟೇ ಸಮರ್ಥವಾಗಿಲ್ಲ. ಹೀಗಾಗಿ ಮೋದಿ ವಿರುದ್ಧದ ಭಾವನೆ ಬೆಳೆಯುತ್ತಿರುವ ರಾಜ್ಯವಾದ ಗುಜರಾತ್‍ನಲ್ಲಿ ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಕಾಂಗ್ರೆಸ್ ಶಕ್ತವಾಗಿಲ್ಲ.
ಒಂದೇ ಸುತ್ತಿನ ಚುನಾವಣೆ ನಡೆಯುತ್ತಿರುವ ಅಲ್ಲಿ ಜನರೇ ಮನಸ್ಸು ಮಾಡಿ ಕಾಂಗ್ರೆಸ್‍ಗೆ ಮತ ಹಾಕಿದಲ್ಲಿ, 2009ರ ಸಾಧನೆಯನ್ನು (15 ಬಿಜೆಪಿ-11 ಕಾಂಗ್ರೆಸ್) ಅದು ಮಾಡಬಹುದು.
ಅಮುಲ್ ನಾಡಿನಲ್ಲಿ ಗೋಪಾಲಕರ ಸಿಟ್ಟು
ಭಾರತದ ಮೊಟ್ಟಮೊದಲ ಬೃಹತ್ ಸಹಕಾರೀ ಹಾಲು ಉದ್ದಿಮೆಯ ಯಶಸ್ವಿ ಪ್ರಯೋಗ ಗುಜರಾತಿನದ್ದೇ. ಅಮುಲ್‍ನಿಂದ ಆರಂಭವಾದದ್ದು ಇತರ ರಾಜ್ಯಗಳಿಗೂ ಹಬ್ಬಿತು. ಆದರೆ ರಾಜ್ಯದ ಮೂಲೆಮೂಲೆಗಳಿಗೂ ಹಬ್ಬಿರುವ ಅಮುಲ್‍ನ ಕಾರ್ಯಕ್ಷೇತ್ರವು ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸಿದೆ. ಇದು ಕೇವಲ ಗುಜರಾತಿನ ಸಮಸ್ಯೆಯಲ್ಲ. ಕೃಷಿ ಬಿಕ್ಕಟ್ಟಿನ ಕಾರಣಕ್ಕೆ ಹೈನುಗಾರಿಕೆಗೆ ಹೆಚ್ಚೆಚ್ಚು ರೈತರು ಮುಂದಾಗುತ್ತಿರುವುದು ಇಡೀ ದೇಶದಲ್ಲಿದೆ. ಹಾಗಾಗಿ ಮಾರುಕಟ್ಟೆಯನ್ನು ಇನ್ನೂ ಹೆಚ್ಚು ವಿಸ್ತರಿಸಿಕೊಳ್ಳುವುದು ಸುಲಭವಿಲ್ಲ.
ಜೊತೆಗೆ ಗುಜರಾತಿನಲ್ಲಿ ಹಾಲಿನ ದರವನ್ನು ಹೆಚ್ಚಿಸುವುದೂ ಕಷ್ಟ. ಏಕೆಂದರೆ ಪ್ರತೀ ಮನೆಯಲ್ಲೂ ಹಾಲಿನ ಬಳಕೆ ವಿಪರೀತ. ಇಂತಹ ಸಮಸ್ಯೆ ಇರುವಾಗ ಗುಜರಾತಿನಲ್ಲಿ ಬರ ತೀವ್ರವಾಗಿದೆ. ಹುಲ್ಲಿಗೆ ಸಬ್ಸಿಡಿ ನೀಡಿದ್ದೇವೆ ಎಂದು ಬಿಜೆಪಿ ಸರ್ಕಾರವು ಹೇಳಿಕೊಳ್ಳುತ್ತಿದೆಯಾದರೂ ಬರ ಹೆಚ್ಚಾಗಿ, ಹುಲ್ಲು ಸಿಗುತ್ತಿಲ್ಲ. ಇನ್ನೂ ಹೆಚ್ಚು ಹಸುಗಳನ್ನು ಸಾಕಲು ಸಾಲ ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಸಮಸ್ಯೆಯ ಮೂಲವೇ ಅರ್ಥವಾದಂತಿಲ್ಲ.
ಅದೇ ಸಂದರ್ಭದಲ್ಲಿ ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ರೈತ ಬಜೆಟ್ ಮತ್ತು ಹಾಲಿಗೆ ಪ್ರೋತ್ಸಾಹಧನ ನೀಡುವ ಭರವಸೆಯಿದೆ. ಈಗಾಗಲೇ ಕರ್ನಾಟಕದಲ್ಲಿ ಆ ವ್ಯವಸ್ಥೆ ಇದೆ. ಇದು ಗುಜರಾತ್‍ನ ಹಾಲು ಉತ್ಪಾದಕರಿಗೂ ಗೊತ್ತಿರುವ ವಿಚಾರವಾಗಿದೆ. ಗೋಪಾಲಕ ಸಮುದಾಯವಾದ ಮಾಲ್ಧಾರಿಗಳು ನರೇಂದ್ರ ಮೋದಿಯ ಸ್ವಂತ ಜಿಲ್ಲೆ ಮೆಹ್ಸಾನಾದಲ್ಲೂ ಸಾಕಷ್ಟಿದ್ದಾರೆ. ಈ ಸರ್ಕಾರವು ತಮಗೇನೂ ಮಾಡುತ್ತಿಲ್ಲ ಎಂಬ ಭಾವನೆ ದಟ್ಟವಾಗಿದ್ದು, ಇದನ್ನು ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಆಧಾರ: ಪ್ರಿಂಟ್ ಮತ್ತು ಗುಜರಾತಿನ
ವಿವಿಧ ಜನಪರ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...