Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...