Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...