Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...