Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...